ಬ್ರೇಕಿಂಗ್ ನ್ಯೂಸ್
28-12-20 04:51 pm Headline Karnataka News Network ದೇಶ - ವಿದೇಶ
ವುಹಾನ್, ಡಿ.28: ಕೊರೊನಾ ವೈರಸ್ ಸೋಂಕಿನ ಬಗ್ಗೆ ಮೊದಲ ಬಾರಿಗೆ ವರದಿ ಮಾಡಿದ್ದ ಸಿಟಿಜನ್ ಜರ್ನಲಿಸ್ಟ್ ಅನ್ನು ಚೀನಾದ ಕೋರ್ಟ್ ನಾಲ್ಕು ವರ್ಷದ ಜೈಲು ಶಿಕ್ಷೆ ವಿಧಿಸಿದೆ.
37 ವರ್ಷದ ಝಂಗ್ ಝಾನ್, ಕೋರ್ಟಿನಿಂದ ಶಿಕ್ಷೆಗೊಳಗಾದ ಮಹಿಳೆ. ಈಕೆ, ಚೀನಾದ ಶಾಂಘೈ ನಿವಾಸಿಯಾಗಿದ್ದು, ಕಳೆದ ಫೆಬ್ರವರಿ 1ರಂದು ವುಹಾನ್ ನಗರಕ್ಕೆ ಬಂದಿದ್ದಳು. ಅಲ್ಲಿನ ಸ್ಥಿತಿಯನ್ನು ನೋಡಿ ಅವಕ್ಕಾದ ಝಾನ್, ಸೋಂಕಿಗೊಳಗಾದ ಜನರು ಆಸ್ಪತ್ರೆಯಲ್ಲಿ ಕ್ಯೂ ನಿಂತಿರುವುದು, ಅಲ್ಲಿನ ಆಸ್ಪತ್ರೆಯ ಸ್ಥಿತಿಗತಿ ಮತ್ತು ನಗರದ ಬೀದಿಗಳು ಖಾಲಿ ಖಾಲಿಯಾಗಿರುವುದನ್ನು ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಳು. ಅಲ್ಲೀ ವರೆಗೂ ಸೋಂಕಿನ ಬಗ್ಗೆ ಅಲ್ಲಿನ ಮಾಧ್ಯಮಗಳಾಗಲೀ, ಸರಕಾರವಾಗಲೀ ಹೊರ ಜಗತ್ತಿಗೆ ತಿಳಿಸಿರಲಿಲ್ಲ. ತಾನೇ ಸ್ವಂತ ಕಾಳಜಿಯಿಂದ ಮಾಡಿದ್ದ ವರದಿ ಈಗ ಆಕೆಯನ್ನು ಜೈಲಿಗೆ ಅಟ್ಟುವಂತೆ ಮಾಡಿದೆ.

ಇದಾಗುತ್ತಿದ್ದಂತೆ, ಝನ್ ಝಾಂಗ್ ನನ್ನು ಪೊಲೀಸರು ಬಂಧಿಸಿದ್ದರು. ಎಂಟು ತಿಂಗಳ ಬಂಧಿಸಿಟ್ಟು ಕೋರ್ಟಿನಲ್ಲಿ ವಾದ- ವಿವಾದ ನಡೆದು ಈಗ ತೀರ್ಪು ಹೊರಬಿದ್ದಿದೆ. ಅಭಿಪ್ರಾಯ ಸ್ವಾತಂತ್ರ್ಯದ ಹಕ್ಕನ್ನು ನಾನು ಚಲಾಯಿಸಿದ್ದೇನೆ. ಇದರಲ್ಲಿ ನನ್ನದೇನೂ ತಪ್ಪಿಲ್ಲ ಎಂದು ಕೋರ್ಟಿನಲ್ಲಿ ಝಾಂಗ್ ಹೇಳಿಕೆ ನೀಡಿದ್ದಾಳೆ. ಆದರೆ, ಕೋರ್ಟ್ ಈ ವರದಿಯ ಬಗ್ಗೆ ಬೇರೆಯೇ ಅಭಿಪ್ರಾಯ ಪಟ್ಟಿದೆ. ಇಂಥ ವರದಿಯಿಂದ ಜನರ ನಡುವೆ ಸಂಘರ್ಷ, ಘರ್ಷಣೆಗೆ ಕಾರಣವಾಗಿದ್ದೀಯ ಎಂದು ಹೇಳಿದೆ. ಇದಕ್ಕಾಗಿ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ.

ವುಹಾನ್ ನಗರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ವೈರಸ್, ಆಬಳಿಕ ಇಡೀ ಜಗತ್ತಿಗೆ ಹಬ್ಬಿದೆ. ಜಗತ್ತಿನಲ್ಲಿ 80 ಮಿಲಿಯ ಜನರಿಗೆ ಸೋಂಕು ಹರಡಿದರೆ, ಇದರಿಂದಾಗಿ 1.76 ಮಿಲಿಯ ಜನರು ಸಾವು ಕಂಡಿದ್ದಾರೆ. ಶಾಂಘೈ ನಗರದಲ್ಲಿ ಕೋರ್ಟ್ ವಿಚಾರಣೆ ನಡೆಯುತ್ತಿದ್ದಾಗ ಹೊರಭಾಗದಲ್ಲಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದರು. ಸೋಂಕನ್ನು ಯಶಸ್ವಿಯಾಗಿ ನಿಭಾಯಿಸಿದ್ದಕ್ಕೆ ಚೀನಾದ ಮಾಧ್ಯಮಗಳು ಅಲ್ಲಿನ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ರನ್ನು ಹೊಗಳಿದೆ.
A Chinese citizen journalist who covered Wuhan's virus outbreak is facing up to five years in jail, according to newly released documents.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm