ಬ್ರೇಕಿಂಗ್ ನ್ಯೂಸ್
06-11-25 10:22 pm HK News Desk ದೇಶ - ವಿದೇಶ
ನವದೆಹಲಿ, ನ.6 : ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಅಥವಾ ನಾಯಕತ್ವ ಬದಲಾವಣೆಯ ವದಂತಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ತಳ್ಳಿಹಾಕಿದ್ದು, 2028 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದಾಗ ಮಾತ್ರ ಕ್ರಾಂತಿ ಎಂದು ಗುರುವಾರ ಸ್ಪಷ್ಟಪಡಿಸಿದ್ದಾರೆ.
ತಮ್ಮನ್ನು ತಾವು ಪಕ್ಷದ "ಶಿಸ್ತಿನ ಸಿಪಾಯಿ" ಎಂದು ಹೇಳಿಕೊಂಡಿರುವ ಡಿಕೆ ಶಿವಕುಮಾರ್, ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳುವ ಮೂಲಕ ಯಾವುದೇ ಕ್ರಾಂತಿಯನ್ನು ನಿರಾಕರಿಸಿದ್ದಾರೆ.
ನಾನು ಇಲ್ಲಿ ಯಾರನ್ನೂ ಭೇಟಿಯಾಗುತ್ತಿಲ್ಲ. ಸಚಿವ ಸಂಪುಟ ಪುನರ್ರಚನೆ ಬಗ್ಗೆ ನನ್ನೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಅದು ಸಿಎಂ ಅವರ ವಿಶೇಷ ಹಕ್ಕು. ಅವರು ಅದನ್ನು ಮಾಡಲಿ ಎಂದು ಡಿಕೆಶಿ ದೆಹಲಿಯಲ್ಲಿ ಹೇಳಿದ್ದಾರೆ. ನನಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಯೋಜನೆ ಇಲ್ಲ. ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಲಾಗುವುದು. ಮತ ಗಳ್ಳತನ ವಿಚಾರವಾಗಿ ನಿನ್ನೆ ರಾತ್ರಿಯೂ ಸಭೆ ಮಾಡಿದ್ದೇವೆ. ನಾಯಕತ್ವ ಬದಲಾವಣೆ ಬಗ್ಗೆ ನಾನು ಏನಾದರೂ ಹೇಳಿದ್ದೇನಾ? ಸಿಎಂ ಏನಾದರೂ ಹೇಳಿದ್ದಾರಾ? ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳಿಕೊಂಡು ಹೋಗುತ್ತೇವೆ ಎಂದಿದ್ದಾರೆ.
ಪಕ್ಷವು ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಇರಬೇಕೆಂದು ಹೇಳಿದರೆ, ಅವರು ಐದು ವರ್ಷ ಇರುತ್ತಾರೆ. ಹತ್ತು ವರ್ಷ ಇರಬೇಕೆಂದರೆ, ಅವರು ಹತ್ತು ವರ್ಷಗಳ ಕಾಲ ಇರುತ್ತಾರೆ. 15 ವರ್ಷ ಇರಬೇಕಿದ್ದರೆ, 15 ವರ್ಷಗಳ ಕಾಲ ಇರುತ್ತಾರೆ. ನಮಗೆ ಪಕ್ಷದಿಂದ ನೀಡಿದ ಕರ್ತವ್ಯವನ್ನು ನಾವು ನಿರ್ವಹಿಸುತ್ತೇವೆ ಎಂದು ಹೇಳಿದರು. ನವೆಂಬರ್ ಕ್ರಾಂತಿಯ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, "ನವೆಂಬರ್ ಅಥವಾ ಡಿಸೆಂಬರ್, ಜನವರಿ, ಫೆಬ್ರವರಿಯಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ. ಅದು ಕಾಂಗ್ರೆಸ್ ಅಧಿಕಾರಕ್ಕೆ ಮರಳಿದಾಗ ಮಾತ್ರ ಕ್ರಾಂತಿಯಾಗುತ್ತದೆ ಎಂದರು.
Deputy Chief Minister DK Shivakumar refuted speculation about a leadership change in Karnataka, asserting that both he and Chief Minister Siddaramaiah are committed to the party’s decision. He said any “revolution” would only happen when Congress wins again in 2028.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm