ಬ್ರೇಕಿಂಗ್ ನ್ಯೂಸ್
11-11-25 10:20 pm HK News Desk ದೇಶ - ವಿದೇಶ
ಕಾಸರಗೋಡು, ನ.11: ಸ್ಥಳೀಯ ನಾಗರಿಕರ ಪ್ರತಿಭಟನೆ, ಹೋರಾಟಗಳ ನಡುವೆಯೇ ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ನ.12ರ (ಬುಧವಾರ) ಬೆಳಗ್ಗೆ 8 ಗಂಟೆಯಿಂದ ಶುಲ್ಕ ವಸೂಲಿ ಆರಂಭಗೊಳ್ಳಲಿದೆ.
ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಘೋಷಣೆ ಮಾಡಿದ್ದು, ಜಾಹೀರಾತು ನೀಡುವ ಮೂಲಕ ಜನರಿಗೆ ಮಾಹಿತಿ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಕಟಿಸಿದ ಅಧಿಸೂಚನೆಯಂತೆ ನ.12ರಂದು ಬೆಳಗ್ಗೆ 8ರಿಂದ ವಾಹನಗಳಿಂದ ಟೋಲ್ ಶುಲ್ಕ ವಸೂಲಿ ಮಾಡಲಿದೆ.
ಇದರಂತೆ ಕಾರು, ಜೀಪು, ವ್ಯಾನ್ ಸಹಿತ ಲಘು ವಾಹನಗಳ ಏಕಮುಖಿ ಸಂಚಾರಕ್ಕೆ ನಾಳೆಯಿಂದ 85 ರೂ. ಶುಲ್ಕ ಪಾವತಿಸಬೇಕು. ಮಿನಿ ಬಸ್ ಸಹಿತ ಇತರ ವಾಹನಗಳಿಗೆ ಸಂಚಾರಕ್ಕೆ 140 ರೂ., ಬಸ್, ಟ್ರಕ್ ಸಹಿತ ಘನ ವಾಹನಕ್ಕೆ 290 ರೂ. ಮತ್ತು ವಾಣಿಜ್ಯ ವಾಹನಗಳಿಗೆ 320 ರೂ. ಶುಲ್ಕ ಸೇರಿದಂತೆ ವಿವಿಧ ಕೆಟಗರಿ ನೀಡಲಾಗಿದೆ. ಟೋಲ್ ಪ್ಲಾಜಾ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವವರ ವಾಣಿಜ್ಯೇತರ ವಾಹನಗಳಿಗೆ ಪ್ರತಿ ತಿಂಗಳು 340 ರೂ. ಶುಲ್ಕ ನಿಗದಿಗೊಳಿಸಿ ಶುಲ್ಕದಲ್ಲಿ ವಿನಾಯ್ತಿ ನೀಡಿದೆ.
ಟೋಲ್ ಪ್ಲಾಜಾ ವಿರೋಧಿಸಿ ನಾಗರಿಕ ಕ್ರಿಯಾ ಸಮಿತಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದು ತಡೆಯಾಜ್ಞೆ ನೀಡಲು ಕೋರಿದೆ. ಇದರ ತೀರ್ಪು ಬುಧವಾರ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮೊದಲೇ ಹೆದ್ದಾರಿ ಇಲಾಖೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದೆ.
Despite ongoing public protests and opposition, toll collection at the Kumble Arikkadi Toll Plaza on the Kasaragod–Mangaluru National Highway will begin from 8 a.m. on Wednesday, November 12.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm