ಬ್ರೇಕಿಂಗ್ ನ್ಯೂಸ್
11-11-25 10:20 pm HK News Desk ದೇಶ - ವಿದೇಶ
ಕಾಸರಗೋಡು, ನ.11: ಸ್ಥಳೀಯ ನಾಗರಿಕರ ಪ್ರತಿಭಟನೆ, ಹೋರಾಟಗಳ ನಡುವೆಯೇ ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ನ.12ರ (ಬುಧವಾರ) ಬೆಳಗ್ಗೆ 8 ಗಂಟೆಯಿಂದ ಶುಲ್ಕ ವಸೂಲಿ ಆರಂಭಗೊಳ್ಳಲಿದೆ.
ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಘೋಷಣೆ ಮಾಡಿದ್ದು, ಜಾಹೀರಾತು ನೀಡುವ ಮೂಲಕ ಜನರಿಗೆ ಮಾಹಿತಿ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಕಟಿಸಿದ ಅಧಿಸೂಚನೆಯಂತೆ ನ.12ರಂದು ಬೆಳಗ್ಗೆ 8ರಿಂದ ವಾಹನಗಳಿಂದ ಟೋಲ್ ಶುಲ್ಕ ವಸೂಲಿ ಮಾಡಲಿದೆ.
ಇದರಂತೆ ಕಾರು, ಜೀಪು, ವ್ಯಾನ್ ಸಹಿತ ಲಘು ವಾಹನಗಳ ಏಕಮುಖಿ ಸಂಚಾರಕ್ಕೆ ನಾಳೆಯಿಂದ 85 ರೂ. ಶುಲ್ಕ ಪಾವತಿಸಬೇಕು. ಮಿನಿ ಬಸ್ ಸಹಿತ ಇತರ ವಾಹನಗಳಿಗೆ ಸಂಚಾರಕ್ಕೆ 140 ರೂ., ಬಸ್, ಟ್ರಕ್ ಸಹಿತ ಘನ ವಾಹನಕ್ಕೆ 290 ರೂ. ಮತ್ತು ವಾಣಿಜ್ಯ ವಾಹನಗಳಿಗೆ 320 ರೂ. ಶುಲ್ಕ ಸೇರಿದಂತೆ ವಿವಿಧ ಕೆಟಗರಿ ನೀಡಲಾಗಿದೆ. ಟೋಲ್ ಪ್ಲಾಜಾ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವವರ ವಾಣಿಜ್ಯೇತರ ವಾಹನಗಳಿಗೆ ಪ್ರತಿ ತಿಂಗಳು 340 ರೂ. ಶುಲ್ಕ ನಿಗದಿಗೊಳಿಸಿ ಶುಲ್ಕದಲ್ಲಿ ವಿನಾಯ್ತಿ ನೀಡಿದೆ.
ಟೋಲ್ ಪ್ಲಾಜಾ ವಿರೋಧಿಸಿ ನಾಗರಿಕ ಕ್ರಿಯಾ ಸಮಿತಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದು ತಡೆಯಾಜ್ಞೆ ನೀಡಲು ಕೋರಿದೆ. ಇದರ ತೀರ್ಪು ಬುಧವಾರ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮೊದಲೇ ಹೆದ್ದಾರಿ ಇಲಾಖೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದೆ.
Despite ongoing public protests and opposition, toll collection at the Kumble Arikkadi Toll Plaza on the Kasaragod–Mangaluru National Highway will begin from 8 a.m. on Wednesday, November 12.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm