ಬ್ರೇಕಿಂಗ್ ನ್ಯೂಸ್
13-11-25 05:13 pm HK Staffer ದೇಶ - ವಿದೇಶ
ಚೆನ್ನೈ, ನ.13: ತರಬೇತಿ ವಿವಾನವೊಂದು ಪುದುಕೊಟ್ಟೈ ಜಿಲ್ಲೆಯ ಕೀರನೂರ್ ಬಳಿಯ ತಿರುಚಿ-ಪುದುಕೊಟ್ಟೈ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ತಿರುಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಎಂಜಿನ್ ವೈಫಲ್ಯದಿಂದಾಗಿ ತರಬೇತಿ ಪೈಲಟ್ಗಳು ವಿಮಾನವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಈ ವೇಳೆ ಪೈಲಟ್ ಮತ್ತು ತರಬೇತಿ ಪೈಲಟ್ ಇಬ್ಬರೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ತಾಂತ್ರಿಕ ವೈಫಲ್ಯ ತಿಳಿಯುತ್ತಲೇ ತಿರುಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳೀಯ ಪೊಲೀಸರು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಖಾಸಗಿ ಕಂಪನಿಯ ಒಡೆತನ ಹೊಂದಿರುವ ಮತ್ತು ಸೇಲಂನಿಂದ ಕಾರ್ಯ ನಿರ್ವಹಿಸುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಕಾರೈಕುಡಿ ವಾಯುಪ್ರದೇಶಕ್ಕೆ ತೆರಳುತ್ತಿದ್ದಾಗ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ತಿರುಚ್ಚಿ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿಮಾನವನ್ನು ಪರಿಶೀಲಿಸಿದ್ದಾರೆ. ಬಿಝಿ ರೋಡ್ ನಲ್ಲಿ ವಿಮಾನ ಲ್ಯಾಂಡ್ ಆಗುತ್ತಲೇ ಜನರು ಅಚ್ಚರಿಗೀಡಾಗಿದ್ದಾರೆ. ಆದರೆ ಯಾವುದೇ ವಾಹನಕ್ಕೆ ಡಿಕ್ಕಿಯಾಗದೆ ಸೇಫ್ ಆಗಿ ಲ್ಯಾಂಡ್ ಆಗಿದೆ. ರಸ್ತೆಯಲ್ಲಿ ಲ್ಯಾಂಡ್ ಆದ ವಿಮಾನವನ್ನು ನೋಡಲು ಜನರು ಅಚ್ಚರಿಯಿಂದ ಸೇರಿದ್ದಾರೆ.
ಸೆಸ್ನಾ ವಿಮಾನವು ಸೇಲಂನ ಎಕ್ವೀರ್ ಫ್ಲೈಯಿಂಗ್ ಕ್ಲಬ್ ಒಡೆತನದಲ್ಲಿದೆ. ಡಿಜಿಸಿಎ ಅಧಿಕಾರಿಗಳ ತನಿಖೆಯ ನಂತರವೇ ಎಂಜಿನ್ ವೈಫಲ್ಯಕ್ಕೆ ನಿಖರವಾದ ಕಾರಣ ತಿಳಿಯಲಿದೆ.
Single-Engine Training Aircraft Makes Emergency Landing on Trichy-Pudukottai Highway.
— RT_India (@RT_India_news) November 13, 2025
Two people on board were not injured, and there was no damage to the public property when the… pic.twitter.com/zcw20Ooqp7
A training aircraft made an emergency landing on the Tiruchi–Pudukottai National Highway near Keeranur in Pudukottai district, surprising motorists and onlookers on Tuesday.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm