ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿದ್ದರಾಮಯ್ಯಗೆ ಫುಲ್ ಪವರ್ ನೀಡಿದ ರಾಹುಲ್ ಗಾಂಧಿ 

15-11-25 11:12 pm       HK News Desk   ದೇಶ - ವಿದೇಶ

ಬಿಹಾರ ಚುನಾವಣೆ ಫಲಿತಾಂಶ ಬೆನ್ನಲ್ಲೇ ಕರ್ನಾಟಕ ರಾಜ್ಯ ಸಚಿವ ಸಂಪುಟದ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆಯೆಂದು ದೆಹಲಿ ಮೂಲಗಳು ತಿಳಿಸಿವೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಇತರ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದು ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.

ನವದೆಹಲಿ, ನ.15 : ಬಿಹಾರ ಚುನಾವಣೆ ಫಲಿತಾಂಶ ಬೆನ್ನಲ್ಲೇ ಕರ್ನಾಟಕ ರಾಜ್ಯ ಸಚಿವ ಸಂಪುಟದ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆಯೆಂದು ದೆಹಲಿ ಮೂಲಗಳು ತಿಳಿಸಿವೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಇತರ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದು ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
 
ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು ಕರ್ನಾಟಕದಲ್ಲಿ ಸಿದ್ದರಾಮಯ್ಯ ಕೈಮೇಲಾಗಿಸಿದೆ ಎನ್ನುವ ಮಾತು ಕೇಳಿಬಂದಿದೆ. ‌ಇದೇ ಕಾರಣಕ್ಕೆ ಹಲವು ಸಮಯದಿಂದ ಬಾಕಿ ಉಳಿದಿದ್ದ ಸಂಪುಟ ಸರ್ಜರಿಗೆ ಅನುಮತಿ ನೀಡಿದ್ದಾರೆ ಎನ್ನಲಾಗುತ್ತಿದೆ.‌ ಆಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎನ್ನುವ ಸುಳಿವನ್ನೂ ನೀಡಿದ್ದಾರೆ. 

ಸಂಪುಟ ರಚನೆಗೂ ಮುನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆಗೆ ಚರ್ಚಿಸುವಂತೆ ರಾಹುಲ್ ಗಾಂಧಿ, ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ. ಖರ್ಗೆಯವರಿಗೆ ರಾಜ್ಯ ರಾಜಕಾರಣದ ಬಗ್ಗೆ ಚೆನ್ನಾಗಿ ಗೊತ್ತಿರುವುದರಿಂದ ಅವರ ಜೊತೆಯಲ್ಲಿ ಚರ್ಚಿಸಿ ಸಂಪುಟದಿಂದ ಯಾರನ್ನು ತೆಗೆಯಬೇಕು, ಯಾರನ್ನು ಹೊಸದಾಗಿ ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ನಿರ್ಧರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

Following the Bihar election results, the Congress high command has reportedly approved a reshuffle of the Karnataka state cabinet. On Saturday, Chief Minister Siddaramaiah met Rahul Gandhi and senior Congress leaders in New Delhi, where he is believed to have received the green signal for the long-pending cabinet restructuring.