ಬ್ರೇಕಿಂಗ್ ನ್ಯೂಸ್
17-11-25 10:58 pm HK News Desk ದೇಶ - ವಿದೇಶ
ಢಾಕಾ, ನ.17 : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿದ್ದು ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. ಇದು ಗರಿಷ್ಠ ಶಿಕ್ಷೆಗೆ ಅರ್ಹವಾಗಿರುವ ಪ್ರಕರಣ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದಲ್ಲಿ ದೇಶವ್ಯಾಪಿ ಭುಗಿಲೆದ್ದ ದಂಗೆಗಳ ಮೇಲಿನ ‘ಮಾರಕ ದಮನ’ಕ್ಕೆ ಹಸೀನಾ ನೇರ ಸೂಚನೆ ನೀಡಿದ್ದಾಗಿ ನ್ಯಾಯಾಲಯವು ಹೇಳಿದೆ. ಶೇಖ್ ಹಸೀನಾ ಅವರ ಈ ನಡೆಯಿಂದ ಬಾಂಗ್ಲಾದೇಶದಲ್ಲಿ ಸಾಕಷ್ಟು ಹಿಂಸಾಚಾರ ನಡೆದಿತ್ತು. ನೂರಾರು ಪ್ರಜೆಗಳು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಶೇಖ್ ಹಸೀನಾರನ್ನು ಪ್ರಮುಖ ಆರೋಪಿಯಾಗಿಸಲಾಗಿತ್ತು.
ಶೇಖ್ ಹಸೀನಾ ಅವರೇ ವಿದ್ಯಾರ್ಥಿ ಚಳುವಳಿಯನ್ನು ಅತ್ಯಂತ ಕಠೋರವಾಗಿ ಹತ್ತಿಕ್ಕುವಂತೆ ಸೇನೆ ಮತ್ತು ಪೊಲೀಸರಿಗೆ ಆದೇಶ ನೀಡಿದ್ದರು ಎಂಬ ವಾದವನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಒಪ್ಪಿಕೊಂಡಿದೆ. ಹೀಗಾಗಿ ಮಾಜಿ ಪ್ರಧಾನಿಗೆ ಗಲ್ಲುಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಇದಕ್ಕೂ ಮೊದಲು ತಮ್ಮ ಬೆಂಬಲಿಗರಿಗೆ ಶೇಖ್ ಹಸೀನಾ ಆಡಿಯೋ ಸಂದೇಶ ಕಳುಹಿಸಿದ್ದರು. ಇದರಲ್ಲಿ "ನನ್ನ ವಿರುದ್ಧ ನ್ಯಾಯಾಲಯ ನೀಡುವ ತೀರ್ಪಿನ ಬಗ್ಗೆ ಯಾವುದೇ ಭಯವಿಲ್ಲ, ಅಲ್ಲಾ ಜೀವ ಕೊಟ್ಟಿದ್ದಾನೆ, ಅವನೇ ತೆಗೆದುಕೊಳ್ಳುತ್ತಾನೆ" ಎಂದು ಹೇಳಿದ್ದರು. ಅಲ್ಲದೇ ಈ ವಿಚಾರಣೆ ವಿರುದ್ಧ ಆವಾಮಿ ಲೀಗ್ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ಕೂಡ ಸ್ವಯಂಪ್ರೇರಿತ ಎಂದು ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ.
ಭಾರತದ ಆಪ್ತರಾಗಿರುವ ಶೇಖ್ ಹಸೀನಾ, ಕಳೆದ ವರ್ಷ ತಮ್ಮ ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದ ಬಳಿಕ ಬಾಂಗ್ಲಾದಿಂದ ಪಲಾಯನ ಮಾಡಿ ನವದೆಹಲಿಗೆ ಆಗಮಿಸಿದ್ದರು. ತಮಗೆ ಆಶ್ರಯ ನೀಡಿದ ಭಾರತಕ್ಕೆ ಧನ್ಯವಾದ ಅರ್ಪಿಸಿರುವ ಶೇಖ್ ಹಸೀನಾ, ದಿಲ್ಲಿಯಲ್ಲಿ ಸ್ವತಂತ್ರವಾಗಿ ಬದುಕುತ್ತಿರುವುದಾಗಿ ಹೇಳಿದ್ದರು.
ನ್ಯಾಯಾಲಯ ತೀರ್ಪಿನ ಬೆನ್ನಲ್ಲೇ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರ ಮಾಡಬೇಕೆಂದು ಬಾಂಗ್ಲಾ ಸರ್ಕಾರ ಒತ್ತಾಯಿಸಿದೆ.
A special tribunal in Dhaka has sentenced former Bangladeshi Prime Minister Sheikh Hasina to death in absentia, finding her guilty of crimes against humanity in connection with the brutal suppression of student-led protests in 2024. The tribunal accused her of ordering lethal force, including the use of drones and helicopters, leading to mass killings. Hasina, now in exile in India, has strongly condemned the verdict, calling the trial “biased and politically motivated.”
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am