ಬ್ರೇಕಿಂಗ್ ನ್ಯೂಸ್
17-11-25 10:58 pm HK News Desk ದೇಶ - ವಿದೇಶ
ಢಾಕಾ, ನ.17 : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿದ್ದು ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. ಇದು ಗರಿಷ್ಠ ಶಿಕ್ಷೆಗೆ ಅರ್ಹವಾಗಿರುವ ಪ್ರಕರಣ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದಲ್ಲಿ ದೇಶವ್ಯಾಪಿ ಭುಗಿಲೆದ್ದ ದಂಗೆಗಳ ಮೇಲಿನ ‘ಮಾರಕ ದಮನ’ಕ್ಕೆ ಹಸೀನಾ ನೇರ ಸೂಚನೆ ನೀಡಿದ್ದಾಗಿ ನ್ಯಾಯಾಲಯವು ಹೇಳಿದೆ. ಶೇಖ್ ಹಸೀನಾ ಅವರ ಈ ನಡೆಯಿಂದ ಬಾಂಗ್ಲಾದೇಶದಲ್ಲಿ ಸಾಕಷ್ಟು ಹಿಂಸಾಚಾರ ನಡೆದಿತ್ತು. ನೂರಾರು ಪ್ರಜೆಗಳು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಶೇಖ್ ಹಸೀನಾರನ್ನು ಪ್ರಮುಖ ಆರೋಪಿಯಾಗಿಸಲಾಗಿತ್ತು.
ಶೇಖ್ ಹಸೀನಾ ಅವರೇ ವಿದ್ಯಾರ್ಥಿ ಚಳುವಳಿಯನ್ನು ಅತ್ಯಂತ ಕಠೋರವಾಗಿ ಹತ್ತಿಕ್ಕುವಂತೆ ಸೇನೆ ಮತ್ತು ಪೊಲೀಸರಿಗೆ ಆದೇಶ ನೀಡಿದ್ದರು ಎಂಬ ವಾದವನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಒಪ್ಪಿಕೊಂಡಿದೆ. ಹೀಗಾಗಿ ಮಾಜಿ ಪ್ರಧಾನಿಗೆ ಗಲ್ಲುಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಇದಕ್ಕೂ ಮೊದಲು ತಮ್ಮ ಬೆಂಬಲಿಗರಿಗೆ ಶೇಖ್ ಹಸೀನಾ ಆಡಿಯೋ ಸಂದೇಶ ಕಳುಹಿಸಿದ್ದರು. ಇದರಲ್ಲಿ "ನನ್ನ ವಿರುದ್ಧ ನ್ಯಾಯಾಲಯ ನೀಡುವ ತೀರ್ಪಿನ ಬಗ್ಗೆ ಯಾವುದೇ ಭಯವಿಲ್ಲ, ಅಲ್ಲಾ ಜೀವ ಕೊಟ್ಟಿದ್ದಾನೆ, ಅವನೇ ತೆಗೆದುಕೊಳ್ಳುತ್ತಾನೆ" ಎಂದು ಹೇಳಿದ್ದರು. ಅಲ್ಲದೇ ಈ ವಿಚಾರಣೆ ವಿರುದ್ಧ ಆವಾಮಿ ಲೀಗ್ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ಕೂಡ ಸ್ವಯಂಪ್ರೇರಿತ ಎಂದು ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ.
ಭಾರತದ ಆಪ್ತರಾಗಿರುವ ಶೇಖ್ ಹಸೀನಾ, ಕಳೆದ ವರ್ಷ ತಮ್ಮ ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದ ಬಳಿಕ ಬಾಂಗ್ಲಾದಿಂದ ಪಲಾಯನ ಮಾಡಿ ನವದೆಹಲಿಗೆ ಆಗಮಿಸಿದ್ದರು. ತಮಗೆ ಆಶ್ರಯ ನೀಡಿದ ಭಾರತಕ್ಕೆ ಧನ್ಯವಾದ ಅರ್ಪಿಸಿರುವ ಶೇಖ್ ಹಸೀನಾ, ದಿಲ್ಲಿಯಲ್ಲಿ ಸ್ವತಂತ್ರವಾಗಿ ಬದುಕುತ್ತಿರುವುದಾಗಿ ಹೇಳಿದ್ದರು.
ನ್ಯಾಯಾಲಯ ತೀರ್ಪಿನ ಬೆನ್ನಲ್ಲೇ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರ ಮಾಡಬೇಕೆಂದು ಬಾಂಗ್ಲಾ ಸರ್ಕಾರ ಒತ್ತಾಯಿಸಿದೆ.
A special tribunal in Dhaka has sentenced former Bangladeshi Prime Minister Sheikh Hasina to death in absentia, finding her guilty of crimes against humanity in connection with the brutal suppression of student-led protests in 2024. The tribunal accused her of ordering lethal force, including the use of drones and helicopters, leading to mass killings. Hasina, now in exile in India, has strongly condemned the verdict, calling the trial “biased and politically motivated.”
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm