ಬ್ರೇಕಿಂಗ್ ನ್ಯೂಸ್
28-11-25 07:28 pm HK News Desk ದೇಶ - ವಿದೇಶ
ಪಣಜಿ, ನ.28 : ಗೋವಾದ ಕಾಣಕೋಣ ಎಂಬಲ್ಲಿರುವ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಪ್ರತಿಷ್ಠಾಪನೆಗೊಂಡ ಜಗತ್ತಿನ ಅತಿ ಎತ್ತರದ (77 ಅಡಿ) ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲೋಕಾರ್ಪಣೆ ಮಾಡಿದ್ದಾರೆ.
ಗೋವಾದ ಪರ್ತಗಾಳಿ ಮಠವು "ದಕ್ಷಿಣದ ಅಯೋಧ್ಯೆ'ಯಾಗಿ ರೂಪುಗೊಳ್ಳುತ್ತಿದೆ. ಬಿಲ್ಲಿನಾಕಾರದಲ್ಲಿ ರೂಪಿಸಲಾಗಿರುವ "ಆದರ್ಶ ಧಾಮ್' ಪ್ರದೇಶದಲ್ಲಿ ಶ್ರೀರಾಮನ ಬೃಹತ್ ಮೂರ್ತಿಯನ್ನು ಇರಿಸಲಾಗಿದೆ. ಮೂರ್ತಿಯನ್ನು ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದರ ಜೊತೆ ಮೋದಿ ಅನಾವರಣಗೊಳಿಸಿದರು.





ಶ್ರೀಮಠಕ್ಕೆ 550 ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ "ಸಾರ್ಧ ಪಂಚ ಶತಮಾನೋತ್ಸವ' ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ ಹಾಗೂ ನಾಣ್ಯವನ್ನೂ ಬಿಡುಗಡೆಗೊಳಿಸಿದ್ದಾರೆ. ಜೊತೆಗೆ ಶ್ರೀರಾಮನ ಮೂರ್ತಿ ಸುತ್ತಲೂ ರಾಮಾಯಣ ಥೀಮ್ ಪಾರ್ಕ್, ಶ್ರೀರಾಮನ ಮಹಿಮೆ ಸಾರುವ ಮ್ಯೂಸಿಯಂ ಹಾಗೂ 7ಡಿ ರಂಗಮಂದಿರಕ್ಕೂ ಚಾಲನೆ ನೀಡಲಾಯಿತು.


ಶ್ರೀಮಠಕ್ಕೆ 550 ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದರು, ದೇಶದ 120 ಕೇಂದ್ರಗಳಲ್ಲಿ 550 ಕೋಟಿ ಶ್ರೀರಾಮ ನಾಮ ಜಪ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಆದರೆ, 590 ಕೋಟಿಗೂ ಹೆಚ್ಚು ಶ್ರೀರಾಮ ನಾಮ ಜಪ ನಡೆದು ದಾಖಲೆ ಸೃಷ್ಟಿಸಿದೆ. ಗುಜರಾತ್ ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಬೆಂಗಳೂರಿನಲ್ಲಿ ಕೆಂಪೇಗೌಡರ ಮೂರ್ತಿಗಳನ್ನು ವಿನ್ಯಾಸಗೊಳಿಸಿದ್ದ ಪ್ರಖ್ಯಾತ ಶಿಲ್ಪಿ "ಪದ್ಮಭೂಷಣ' ಪುರಸ್ಕೃತ ರಾಮ ಸುತಾರ್ ಅವರೇ 77 ಅಡಿ ಎತ್ತರದ ಈ ಶ್ರೀರಾಮನ ಮೂರ್ತಿಯನ್ನು ನಿರ್ಮಿಸಿದ್ದಾರೆ.
Prime Minister Narendra Modi inaugurated the world’s tallest 77-foot bronze statue of Lord Rama at Kanakona in Goa, installed by the Gokarna Partagali Jeevottam Math. The newly developed “Adarsh Dham,” designed in the shape of a bow, is now being hailed as the “Ayodhya of the South.”
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm