ಬ್ರೇಕಿಂಗ್ ನ್ಯೂಸ್
04-12-25 05:39 pm HK News Desk ದೇಶ - ವಿದೇಶ
ಕೊಲ್ಕತ್ತಾ, ಡಿ.4 : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮತ್ತೊಂದು ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದಕ್ಕೆ ಕಾರಣವಾಗಿದ್ದ ಭರತ್ಪುರ ಶಾಸಕ ಹುಮಾಯೂನ್ ಕಬೀರ್ ಅವರನ್ನು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿದೆ.
ವಿವಾದಾತ್ಮಕ ಹೇಳಿಕೆಗಳಿಂದ ಕಳೆದ ಕೆಲವು ವರ್ಷಗಳಿಂದ ಗಮನ ಸೆಳೆದಿರುವ ಕಬೀರ್, ಡಿಸೆಂಬರ್ 6 ರಂದು ಬೆಲ್ದಂಗಾದಲ್ಲಿ ಬಾಬರಿ ಮಸೀದಿಗೆ ಅಡಿಪಾಯ ಹಾಕಲಾಗುವುದು ಎಂದು ಘೋಷಿಸಿದ್ದರು. ಪಕ್ಷವು ರಾಜ್ಯದಲ್ಲಿ ಶಾಂತಿ ಮತ್ತು ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಕೆಲಸ ಮಾಡುತ್ತಿರುವ ಸಮಯದಲ್ಲಿ ಕಬೀರ್ ಅವರ ನಡವಳಿಕೆ ತೀವ್ರ ಅಶಿಸ್ತಿನ ಕೂಡಿದ್ದಾಗಿದೆ ಎಂದು ಅಮಾನತು ನಿರ್ಧಾರವನ್ನು ಪ್ರಕಟಿಸಿದ ಪಕ್ಷದ ಹಿರಿಯ ನಾಯಕ ಫರ್ಹಾದ್ ಹಕೀಮ್ ಹೇಳಿದ್ದಾರೆ.
ಕಬೀರ್ ಕೋಮು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದು, ಇದನ್ನು ಟಿಎಂಸಿ ತೀವ್ರವಾಗಿ ವಿರೋಧಿಸುತ್ತದೆ. ಟಿಎಂಸಿ ಕೋಮು ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ. ಈ ಕ್ಷಣದಿಂದ ಅವರಿಗೆ ಪಕ್ಷದೊಂದಿಗೆ ಯಾವುದೇ ಸಂಬಂಧವಿರುವುದಿಲ್ಲ. ನಮ್ಮ ಉನ್ನತ ನಾಯಕತ್ವದ ಸೂಚನೆಯ ಮೇರೆಗೆ ಅವರನ್ನು ಅಮಾನತುಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಕಬೀರ್, ಪಕ್ಷದಿಂದ ಅಮಾನತು ಮಾಡಿದ್ದಕ್ಕೆ ಹೆದರುವುದಿಲ್ಲ. ರಾಜೀನಾಮೆ ನೀಡಿ ಹೊಸ ಪಕ್ಷವನ್ನು ರಚಿಸುವುದಾಗಿ ಹೇಳಿದ್ದಾರೆ. ಡಿಸೆಂಬರ್ 6 ರಂದು ನಡೆದ ಕಾರ್ಯಕ್ರಮದಲ್ಲಿ ತನ್ನ ಜೊತೆಗೆ ಲಕ್ಷಾಂತರ ಜನರು ಸೇರುತ್ತಾರೆ ಎಂದು ಹೇಳಿಕೊಂಡಿದ್ದರು.
The Trinamool Congress has suspended Bharatpur MLA Humayun Kabir after he sparked controversy by announcing that a new Babri Masjid would be constructed on December 6 in Murshidabad district of West Bengal. Senior TMC leader Firhad Hakim stated that Kabir’s remarks were inflammatory and violated the party’s commitment to maintaining peace and communal harmony in the state.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm