ಬ್ರೇಕಿಂಗ್ ನ್ಯೂಸ್
10-12-25 01:17 pm HK News Desk ದೇಶ - ವಿದೇಶ
ನವದೆಹಲಿ, ಡಿ.10 : ಭಾರತೀಯರ ಅತಿದೊಡ್ಡ ಹಬ್ಬ ದೀಪಾವಳಿ ಬಗ್ಗೆ ಸಂತಸದ ಸುದ್ದಿ ಬಂದಿದೆ. ಯುನೆಸ್ಕೋ ಸಂಸ್ಥೆಯು ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ದೀಪಾವಳಿ ಹಬ್ಬವನ್ನು ಸೇರಿಸಿದೆ.
ದೆಹಲಿಯ ಕೆಂಪು ಕೋಟೆಯಲ್ಲಿ ಆಯೋಜಿಸಲಾದ ಯುನೆಸ್ಕೋದ ಪ್ರಮುಖ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತ ದೇಶವು ಅಮೂರ್ತ ಸಾಂಸ್ಕೃತಿಕ ಪರಂಪರೆಯ ರಕ್ಷಣೆಗಾಗಿ ಅಂತರಸರ್ಕಾರಿ ಸಮಿತಿಯ ಅಧಿವೇಶನವನ್ನು ಆಯೋಜಿಸುತ್ತಿರುವುದು ಇದೇ ಮೊದಲು. ಡಿಸೆಂಬರ್ 8 ರಿಂದ 13 ರವರೆಗೆ ಕೆಂಪು ಕೋಟೆಯಲ್ಲಿ ಸಮಿತಿಯ 20ನೇ ಅಧಿವೇಶನ ನಡೆಯುತ್ತಿದೆ.
ದೀಪಾವಳಿ ಹಬ್ಬವನ್ನು ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಯುನೆಸ್ಕೋದ ಪ್ರತಿನಿಧಿ ಪಟ್ಟಿಗೆ ಸೇರಿಸಲಾಗಿದೆ ಎಂದು ಯುನೆಸ್ಕೋ ಘೋಷಿಸುತ್ತಿದ್ದಂತೆ 'ವಂದೇ ಮಾತರಂ' ಮತ್ತು 'ಭಾರತ್ ಮಾತಾ ಕಿ ಜೈ' ಮಂತ್ರಗಳು ದೆಹಲಿಯ ಕೆಂಪುಕೋಟೆ ಸುತ್ತ ಮೊಳಗಿದವು. ಭಾರತವು ಪ್ರಸ್ತುತ ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪ್ರತಿನಿಧಿ ಪಟ್ಟಿಯಲ್ಲಿ 15 ಅಂಶಗಳನ್ನು ಸೇರಿಸಿಕೊಂಡಿದೆ. ಇವುಗಳಲ್ಲಿ ಕುಂಭಮೇಳ, ಕೋಲ್ಕತ್ತಾದ ದುರ್ಗಾ ಪೂಜೆ, ಗುಜರಾತ್ನ ಗರ್ಭಾ ನೃತ್ಯ, ಯೋಗ, ವೇದ ಪಠಣದ ಸಂಪ್ರದಾಯ ಮತ್ತು 'ರಾಮಾಯಣ' ಮಹಾಕಾವ್ಯದ ಸಾಂಪ್ರದಾಯಿಕ ಪ್ರದರ್ಶನವಾದ ರಾಮಲೀಲಾ ಸೇರಿವೆ.
ಯುನೆಸ್ಕೋ ಪಟ್ಟಿಯಲ್ಲಿ ದೀಪಾವಳಿ ಸೇರ್ಪಡೆ ಬಗ್ಗೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದು ದೀಪಾವಳಿ ನಮ್ಮ ಸಂಸ್ಕೃತಿ ಮತ್ತು ನೀತಿಯೊಂದಿಗೆ ಬಹಳ ನಿಕಟ ಸಂಬಂಧ ಹೊಂದಿದೆ. ಇದು ನಮ್ಮ ನಾಗರಿಕತೆಯ ಆತ್ಮ. ಇದು ಜ್ಞಾನೋದಯ ಮತ್ತು ಸದಾಚಾರವನ್ನು ನಿರೂಪಿಸುತ್ತದೆ. ಯುನೆಸ್ಕೋ ಅಮೂರ್ತ ಪರಂಪರೆಯ ಪಟ್ಟಿಗೆ ದೀಪಾವಳಿ ಹಬ್ಬ ಸೇರ್ಪಡೆಯು ಹಬ್ಬದ ಜಾಗತಿಕ ಜನಪ್ರಿಯತೆಗೆ ಮತ್ತಷ್ಟು ಕೊಡುಗೆ ನೀಡುತ್ತದೆ. ಪ್ರಭು ಶ್ರೀರಾಮನ ಆದರ್ಶಗಳು ನಮಗೆ ಶಾಶ್ವತವಾಗಿ ಮಾರ್ಗದರ್ಶನ ನೀಡಲಿ ಎಂದು ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.
In a historic and joyous development for Indians worldwide, UNESCO has officially inscribed the Diwali festival into its Intangible Cultural Heritage of Humanity list. The decision was taken during a key session held at Delhi’s Red Fort, where India is hosting the Intergovernmental Committee meeting on intangible cultural heritage for the first time. The 20th session is being held from December 8 to 13.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm