ಬ್ರೇಕಿಂಗ್ ನ್ಯೂಸ್
10-12-25 11:13 pm HK News Desk ದೇಶ - ವಿದೇಶ
ನವದೆಹಲಿ, ಡಿ.10 : ತಮಿಳುನಾಡಿನ ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಕಾರ್ತಿಗೈ ದೀಪ ಬೆಳಗಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಜಿ. ಆರ್ ಸ್ವಾಮಿನಾಥನ್ ವಿರುದ್ಧ ವಿಪಕ್ಷಗಳ ಸಂಸದರು ಮಹಾಭಿಯೋಗ ನಡೆಸಲು ಮುಂದಾಗಿದ್ದು 120 ಸಂಸದರು ಸಹಿ ಹಾಕಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ಮನವಿ ನೀಡಿದ್ದಾರೆ.
ತಮಿಳುನಾಡಿನ ಡಿಎಂಕೆ ಪಕ್ಷ ಜಡ್ಜ್ ವಿರುದ್ಧ ಸಮರ ಸಾರಿದ್ದು, ನ್ಯಾಯಾಧೀಶರ ಆದೇಶ, ಅವರ ನಡೆಗಳು ನ್ಯಾಯಾಂಗದ ಜಾತ್ಯತೀತ, ಪಾರದರ್ಶಕ, ತಾರತಮ್ಯ ಇಲ್ಲದ ಸ್ವಭಾವಗಳ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತಿದೆ ಎಂದು ತೀವ್ರ ಆಕ್ರೋಶ ಹೊರಹಾಕಿದೆ. ಅಷ್ಟೇ ಅಲ್ಲದೇ ಬೆಟ್ಟದ ಮೇಲಿನ ದರ್ಗಾ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಆದೇಶ ನೀಡಿರುವ ನ್ಯಾಯಾಧೀಶರನ್ನು ಪದಚ್ಯುತಗೊಳಿಸಬೇಕೆಂದು ಡಿಎಂಕೆ ಸಂಸದೆ ಕನಿಮೋಳ ನೇತೃತ್ವದಲ್ಲಿ ಸಂಸದರು ಸ್ಪೀಕರ್ ಗೆ ದೂರು ನೀಡಿದ್ದಾರೆ.
ನ್ಯಾಯಾಧೀಶರು ಪ್ರಕರಣಗಳನ್ನು ನಿರ್ದಿಷ್ಟ ರಾಜಕೀಯ ತತ್ವ- ಸಿದ್ಧಾಂತಗಳ ಆಧಾರದಲ್ಲಿ ಸೆಕ್ಯುಲರ್ ತತ್ವಕ್ಕೆ ವಿರುದ್ಧವಾಗಿ ನಿರ್ಧರಿಸುತ್ತಿದ್ದಾರೆ ಎಂದು ವಿಪಕ್ಷ ಸಂಸದರು ಆರೋಪಿಸಿದ್ದಾರೆ. ನ್ಯಾಯಾಧೀಶರನ್ನು ಪದಚ್ಯುತಗೊಳಿಸುವ ನಿರ್ಣಯಕ್ಕೆ ಕನಿಷ್ಠ 100 ಸಂಸದರು ಬೆಂಬಲ ನೀಡಬೇಕಾಗುತ್ತದೆ. ಈಗ ವಿಪಕ್ಷಗಳ 120 ಸಂಸದರು ಸಹಿ ಹಾಕಿದ್ದು ದೂರನ್ನು ಸ್ಪೀಕರ್ ಬಿರ್ಲಾ ಅವರ ಮುಂದಿಟ್ಟಿದ್ದಾರೆ.
ದೇವಾಲಯ ಮತ್ತು ಹತ್ತಿರದ ದರ್ಗಾ ಹೊಂದಿರುವ ತಿರುಪರಂಕುಂದ್ರಂ ಬೆಟ್ಟದ ಮೇಲೆ ಸಾಂಪ್ರದಾಯಿಕ ಕಾರ್ತಿಕ ದೀಪವನ್ನು ಬೆಳಗಿಸುವ ಬಗ್ಗೆ ಸ್ಥಳೀಯರ ಕೋರಿಕೆಯಂತೆ ನ್ಯಾ.ಜಿ.ಆರ್ ಸ್ವಾಮಿನಾಥನ್ ಅವರು ಆದೇಶ ನೀಡಿದ್ದರು. ನ್ಯಾಯಾಧೀಶರ ಆದೇಶದ ಪ್ರಕಾರ ಡಿಸೆಂಬರ್ 4 ರೊಳಗೆ "ದೀಪಥೂನ್" ಕಂಬದ ಮೇಲೆ ದೀಪವನ್ನು ಬೆಳಗಿಸಬೇಕಿತ್ತು. ದೀಪ ಉರಿಸುವುದು ಮುಸ್ಲಿಂ ಸಮುದಾಯದ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಪ್ರತಿಪಾದಿಸಿದ್ದರು. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರವು ತೀರ್ಪನ್ನು ಜಾರಿಗೆ ತರಲು ನಿರಾಕರಿಸಿದ್ದು ಹಿಂದೂ ಪರ ಗುಂಪುಗಳ ಪ್ರತಿಭಟನೆ, ಪೊಲೀಸರೊಂದಿಗೆ ಘರ್ಷಣೆ, ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
Opposition MPs have initiated impeachment proceedings against Madras High Court judge Justice G.R. Swaminathan, who recently permitted the traditional Karthigai Deepam lamp to be lit atop the stone pillar near the dargah on Tirupparankunram Hill in Tamil Nadu.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm