ಬ್ರೇಕಿಂಗ್ ನ್ಯೂಸ್
18-12-25 04:34 pm HK News Desk ದೇಶ - ವಿದೇಶ
ಕೊಚ್ಚಿ, ಡಿ.18 : ಜೆಡ್ಡಾದಿಂದ ಕೋಝಿಕ್ಕೋಡ್ಗೆ 160 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ವೈಫಲ್ಯದಿಂದಾಗಿ ಕೊಚ್ಚಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ವೇಳೆ ಎರಡೂ ಟೈರ್ ಗಳು ಸ್ಫೋಟಗೊಂಡಿದ್ದು ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.
ಜೆಡ್ಡಾದಿಂದ ಕೋಝಿಕ್ಕೋಡ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ IX 398, ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ಸಮಸ್ಯೆಗಳಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ತಾಂತ್ರಿಕ ಸಮಸ್ಯೆಯಿಂದಾಗಿ ಏರ್ ಇಂಡಿಯಾ ವಿಮಾನವನ್ನು ತುರ್ತು ಭೂಸ್ಪರ್ಶಕ್ಕಾಗಿ ಕೊಚ್ಚಿಗೆ ಡೈವರ್ಟ್ ಮಾಡಲಾಯಿತು. ಸಂಪೂರ್ಣ ತುರ್ತು ಪರಿಸ್ಥಿತಿಯಲ್ಲಿ ರನ್ ವೇ ಪೂರ್ತಿ ತೆರವುಗೊಳಿಸಿ ಇಂದು ಬೆಳಗ್ಗೆ 09.07 ಕ್ಕೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.
"ಎಲ್ಲಾ ತುರ್ತು ಸೇವೆಗಳನ್ನು ಮುಂಚಿತವಾಗಿ ಸಕ್ರಿಯಗೊಳಿಸಲಾಗಿತ್ತು. ತುರ್ತು ಲ್ಯಾಂಡ್ ಆಗಿದ್ದರಿಂದ ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಲ್ಯಾಂಡಿಂಗ್ ನಂತರದ ಪರಿಶೀಲನೆಯಲ್ಲಿ ಬಲಭಾಗದ ಎರಡೂ ಟೈರ್ಗಳು ಸಿಡಿದಿರುವುದು ದೃಢಪಟ್ಟಿದೆ" ಎಂದು CIAL ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
An Air India Express flight carrying 160 passengers from Jeddah to Kozhikode was forced to make an emergency landing at Cochin International Airport on December 18 following a technical malfunction. The aircraft, operating as flight IX 398, developed issues related to the landing gear and tyres, prompting authorities to divert it to Kochi.
31-05-26 09:23 pm
HK News Staffer
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 08:25 pm
HK News Staffer
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm