ಬ್ರೇಕಿಂಗ್ ನ್ಯೂಸ್
26-12-25 03:04 pm HK News Desk ದೇಶ - ವಿದೇಶ
ನವದೆಹಲಿ, ಡಿ.26 : ರೈಲ್ವೇ ಇಲಾಖೆಯು ಒಂದೇ ವರ್ಷದಲ್ಲಿ 2ನೇ ಬಾರಿಗೆ ರೈಲ್ವೇ ಟಿಕೆಟ್ ದರ ಏರಿಕೆ ಮಾಡಿದೆ. ಇದೇ ಡಿಸೆಂಬರ್ 26 ರಿಂದ ರೈಲ್ವೇ ಟಿಕೆಟ್ ದರ ಏರಿಕೆ ಜಾರಿಗೆ ಬರಲಿದೆ. ಪ್ರಯಾಣಿಕರ ಸುರಕ್ಷತೆ, ನಿರ್ವಹಣಾ ವೆಚ್ಚ ಭರಿಸಲು ಟಿಕೆಟ್ ದರ ಏರಿಕೆ ಮಾಡಲಾಗಿದೆ ಎಂದು ರೈಲ್ವೇ ಇಲಾಖೆ ಹೇಳಿಕೊಂಡಿದೆ.
ದೇಶದಲ್ಲಿ ಕೇವಲ 6 ತಿಂಗಳ ಅಂತರದಲ್ಲಿ ರೈಲ್ವೇ ಇಲಾಖೆ ಟಿಕೆಟ್ ದರ ಏರಿಸಿರುವುದು ಹಲವರ ಆಕ್ಷೇಪಕ್ಕೂ ಕಾರಣವಾಗಿದೆ. ಆದರೇ, ಭಾರೀ ಪ್ರಮಾಣದಲ್ಲಿ ರೈಲ್ವೇ ಟಿಕೆಟ್ ದರ ಏರಿಸುತ್ತಿಲ್ಲ. ಪೈಸೆಗಳ ಲೆಕ್ಕದಲ್ಲಿ ಟಿಕೆಟ್ ದರ ಏರಿಸುವ ತೀರ್ಮಾನ ಕೈಗೊಂಡಿದ್ದಾಗಿ ರೈಲ್ವೇ ಸಮರ್ಥಿಸಿಕೊಂಡಿದೆ. ಕಳೆದ ಜುಲೈನಲ್ಲಿ ಪ್ರಯಾಣ ದರವನ್ನು ಹೆಚ್ಚಿಸಿದ್ದ ರೈಲ್ವೇ, ಇದೀಗ ಮತ್ತೊಮ್ಮೆ ಟಿಕೆಟ್ ದರವನ್ನು ಏರಿಸಿದೆ. ಕನಿಷ್ಠ 215 ಕಿ.ಮೀ ಗಿಂತ ಹೆಚ್ಚಿನ ದೂರದ ಪ್ರಯಾಣಕ್ಕೆ ಸಾಮಾನ್ಯ ದರ್ಜೆಯ ಟಿಕೆಟ್ ದರ ಪ್ರತಿ ಕಿ.ಮೀಗೆ 1 ಪೈಸೆಯಂತೆ ಏರಿಕೆ ಮಾಡಲಾಗಿದೆ. ಎಕ್ಸ್ ಪ್ರೆಸ್, ನಾನ್ ಎ.ಸಿ. ಹಾಗೂ ಎ.ಸಿ ರೈಲುಗಳ ಪ್ರಯಾಣದಲ್ಲಿ ಪ್ರತಿ ಕಿ.ಮೀ.ಗೆ 2 ಪೈಸೆ ಏರಿಕೆ ಮಾಡಲಾಗಿದೆ. ನಾನ್ ಎ.ಸಿ ಬೋಗಿಯಲ್ಲಿ 500 ಕಿ.ಮೀ ದೂರದ ವರೆಗೆ ಪ್ರಯಾಣಿಸುವವರು ಹಾಲಿ ದರಕ್ಕಿಂತ 10 ರೂ. ಹೆಚ್ಚುವರಿ ಪಾವತಿಸಬೇಕು. ಉಪ ನಗರಗಳ ಪ್ರಯಾಣ, ಮಾಸಿಕ ಪಾಸುಗಳ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರೈಲ್ವೇ ಇಲಾಖೆ ಹೇಳಿದೆ.
ಟಿಕೆಟ್ ದರ ಏರಿಕೆಯಿಂದ ರೈಲ್ವೇ ಇಲಾಖೆಗೆ ವರ್ಷಕ್ಕೆ 600 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಬರಲಿದೆ. ರೈಲ್ವೇ ನೆಟ್ ವರ್ಕ್ ವಿಸ್ತರಣೆ, ರೈಲ್ವೇ ಅಪರೇಷನ್ ವೆಚ್ಚ ಹೆಚ್ಚಳ, ರೈಲ್ವೇ ಸುರಕ್ಷತೆ, ದಕ್ಷತೆಯ ಹೆಚ್ಚಳದ ಕಾರಣದಿಂದ ರೈಲ್ವೇ ಟಿಕೆಟ್ ದರವನ್ನು ಪೈಸೆಗಳ ಲೆಕ್ಕದಲ್ಲಿ ಏರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ರೈಲ್ವೇ ಸುರಕ್ಷತೆ, ದಕ್ಷತೆಯ ಹೆಚ್ಚಳಕ್ಕಾಗಿ ಹೆಚ್ಚಿನ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ರೈಲ್ವೇ ಇಲಾಖೆಯ ಅಧಿಕಾರಿ, ಸಿಬ್ಬಂದಿಯ ವೇತನವೂ 1.15 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ. ನಿವೃತ್ತ ಸಿಬ್ಬಂದಿ, ಅಧಿಕಾರಿಗಳ ಪಿಂಚಣಿಗಾಗಿ 60,000 ಕೋಟಿ ರೂಪಾಯಿ ನೀಡಬೇಕಾಗಿದೆ. ರೈಲ್ವೇ ನಿರ್ವಹಣಾ ವೆಚ್ಚವು 2024-25 ರಲ್ಲಿ 2.63 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದು ರೈಲ್ವೇ ಪ್ರಕಟಣೆಯಲ್ಲಿ ತಿಳಿಸಿದೆ.
The Indian Railways has announced another round of fare hikes — the second increase within a span of six months. The revised ticket prices come into effect starting December 26. According to officials, the fare hike is necessary to cover rising operational and maintenance costs and to improve passenger safety.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm