ಬ್ರೇಕಿಂಗ್ ನ್ಯೂಸ್
26-12-25 03:04 pm HK News Desk ದೇಶ - ವಿದೇಶ
ನವದೆಹಲಿ, ಡಿ.26 : ರೈಲ್ವೇ ಇಲಾಖೆಯು ಒಂದೇ ವರ್ಷದಲ್ಲಿ 2ನೇ ಬಾರಿಗೆ ರೈಲ್ವೇ ಟಿಕೆಟ್ ದರ ಏರಿಕೆ ಮಾಡಿದೆ. ಇದೇ ಡಿಸೆಂಬರ್ 26 ರಿಂದ ರೈಲ್ವೇ ಟಿಕೆಟ್ ದರ ಏರಿಕೆ ಜಾರಿಗೆ ಬರಲಿದೆ. ಪ್ರಯಾಣಿಕರ ಸುರಕ್ಷತೆ, ನಿರ್ವಹಣಾ ವೆಚ್ಚ ಭರಿಸಲು ಟಿಕೆಟ್ ದರ ಏರಿಕೆ ಮಾಡಲಾಗಿದೆ ಎಂದು ರೈಲ್ವೇ ಇಲಾಖೆ ಹೇಳಿಕೊಂಡಿದೆ.
ದೇಶದಲ್ಲಿ ಕೇವಲ 6 ತಿಂಗಳ ಅಂತರದಲ್ಲಿ ರೈಲ್ವೇ ಇಲಾಖೆ ಟಿಕೆಟ್ ದರ ಏರಿಸಿರುವುದು ಹಲವರ ಆಕ್ಷೇಪಕ್ಕೂ ಕಾರಣವಾಗಿದೆ. ಆದರೇ, ಭಾರೀ ಪ್ರಮಾಣದಲ್ಲಿ ರೈಲ್ವೇ ಟಿಕೆಟ್ ದರ ಏರಿಸುತ್ತಿಲ್ಲ. ಪೈಸೆಗಳ ಲೆಕ್ಕದಲ್ಲಿ ಟಿಕೆಟ್ ದರ ಏರಿಸುವ ತೀರ್ಮಾನ ಕೈಗೊಂಡಿದ್ದಾಗಿ ರೈಲ್ವೇ ಸಮರ್ಥಿಸಿಕೊಂಡಿದೆ. ಕಳೆದ ಜುಲೈನಲ್ಲಿ ಪ್ರಯಾಣ ದರವನ್ನು ಹೆಚ್ಚಿಸಿದ್ದ ರೈಲ್ವೇ, ಇದೀಗ ಮತ್ತೊಮ್ಮೆ ಟಿಕೆಟ್ ದರವನ್ನು ಏರಿಸಿದೆ. ಕನಿಷ್ಠ 215 ಕಿ.ಮೀ ಗಿಂತ ಹೆಚ್ಚಿನ ದೂರದ ಪ್ರಯಾಣಕ್ಕೆ ಸಾಮಾನ್ಯ ದರ್ಜೆಯ ಟಿಕೆಟ್ ದರ ಪ್ರತಿ ಕಿ.ಮೀಗೆ 1 ಪೈಸೆಯಂತೆ ಏರಿಕೆ ಮಾಡಲಾಗಿದೆ. ಎಕ್ಸ್ ಪ್ರೆಸ್, ನಾನ್ ಎ.ಸಿ. ಹಾಗೂ ಎ.ಸಿ ರೈಲುಗಳ ಪ್ರಯಾಣದಲ್ಲಿ ಪ್ರತಿ ಕಿ.ಮೀ.ಗೆ 2 ಪೈಸೆ ಏರಿಕೆ ಮಾಡಲಾಗಿದೆ. ನಾನ್ ಎ.ಸಿ ಬೋಗಿಯಲ್ಲಿ 500 ಕಿ.ಮೀ ದೂರದ ವರೆಗೆ ಪ್ರಯಾಣಿಸುವವರು ಹಾಲಿ ದರಕ್ಕಿಂತ 10 ರೂ. ಹೆಚ್ಚುವರಿ ಪಾವತಿಸಬೇಕು. ಉಪ ನಗರಗಳ ಪ್ರಯಾಣ, ಮಾಸಿಕ ಪಾಸುಗಳ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರೈಲ್ವೇ ಇಲಾಖೆ ಹೇಳಿದೆ.
ಟಿಕೆಟ್ ದರ ಏರಿಕೆಯಿಂದ ರೈಲ್ವೇ ಇಲಾಖೆಗೆ ವರ್ಷಕ್ಕೆ 600 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಬರಲಿದೆ. ರೈಲ್ವೇ ನೆಟ್ ವರ್ಕ್ ವಿಸ್ತರಣೆ, ರೈಲ್ವೇ ಅಪರೇಷನ್ ವೆಚ್ಚ ಹೆಚ್ಚಳ, ರೈಲ್ವೇ ಸುರಕ್ಷತೆ, ದಕ್ಷತೆಯ ಹೆಚ್ಚಳದ ಕಾರಣದಿಂದ ರೈಲ್ವೇ ಟಿಕೆಟ್ ದರವನ್ನು ಪೈಸೆಗಳ ಲೆಕ್ಕದಲ್ಲಿ ಏರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ರೈಲ್ವೇ ಸುರಕ್ಷತೆ, ದಕ್ಷತೆಯ ಹೆಚ್ಚಳಕ್ಕಾಗಿ ಹೆಚ್ಚಿನ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ರೈಲ್ವೇ ಇಲಾಖೆಯ ಅಧಿಕಾರಿ, ಸಿಬ್ಬಂದಿಯ ವೇತನವೂ 1.15 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ. ನಿವೃತ್ತ ಸಿಬ್ಬಂದಿ, ಅಧಿಕಾರಿಗಳ ಪಿಂಚಣಿಗಾಗಿ 60,000 ಕೋಟಿ ರೂಪಾಯಿ ನೀಡಬೇಕಾಗಿದೆ. ರೈಲ್ವೇ ನಿರ್ವಹಣಾ ವೆಚ್ಚವು 2024-25 ರಲ್ಲಿ 2.63 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದು ರೈಲ್ವೇ ಪ್ರಕಟಣೆಯಲ್ಲಿ ತಿಳಿಸಿದೆ.
The Indian Railways has announced another round of fare hikes — the second increase within a span of six months. The revised ticket prices come into effect starting December 26. According to officials, the fare hike is necessary to cover rising operational and maintenance costs and to improve passenger safety.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm