ಬ್ರೇಕಿಂಗ್ ನ್ಯೂಸ್
30-12-25 06:48 pm HK News Desk ದೇಶ - ವಿದೇಶ
ಢಾಕಾ, ಡಿ.30 : ಬಾಂಗ್ಲಾದೇಶದಲ್ಲಿ ಹಿಂಸೆ ಮುಂದುವರಿದಿದ್ದು ಮತ್ತೋರ್ವ ಹಿಂದೂವನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಮೈಮೆನ್ಸಿಂಗ್ ಜಿಲ್ಲೆಯ ಗಾರ್ಮೆಂಟ್ ಫ್ಯಾಕ್ಟರಿಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದ ಹಿಂದು ವ್ಯಕ್ತಿಯನ್ನು ಸಹೋದ್ಯೋಗಿಯೇ ಗುಂಡಿಕ್ಕಿ ಕೊಂದಿದ್ದಾನೆ. ಕಳೆದ ಎರಡು ವಾರಗಳಲ್ಲಿ ಮೂರನೇ ಹಿಂದು ಯುವಕನ ಹತ್ಯೆಯಾಗಿದೆ.
ಭಾಲುಕಾ ಉಪಜಿಲ್ಲಾ ಪ್ರದೇಶದಲ್ಲಿರುವ ಲಬಿಬ್ ಗ್ರೂಪ್ ಫ್ಯಾಕ್ಟರಿ ಸುಲ್ತಾನಾ ಸ್ವೆಟರ್ಸ್ ಲಿಮಿಟೆಡ್ನಲ್ಲಿ ಸೋಮವಾರ ಸಂಜೆ ಘಟನೆ ನಡೆದಿದೆ. ಕಾರ್ಖಾನೆಯಲ್ಲಿ ಭದ್ರತಾ ಸಿಬಂದಿಯಾಗಿದ್ದ ಬಜೇಂದ್ರ ಬಿಸ್ವಾಸ್ (42) ಹತ್ಯೆಯಾದವರು. ಆರೋಪಿ ನೋಮನ್ ಮಿಯಾ (29) ಕೂಡ ಇದೇ ಘಟಕದಲ್ಲಿ ಭದ್ರತಾ ಸಿಬಂದಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಅನ್ಸಾರ್ ಎಂಬುದು ಗೃಹ ವ್ಯವಹಾರಗಳ ಸಚಿವಾಲಯದಡಿ ಕೆಲಸ ಮಾಡುವ ಭದ್ರತಾ ಪಡೆಯಾಗಿದೆ. ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು, ಕೈಗಾರಿಕಾ ಘಟಕಗಳು ಮತ್ತು ಪ್ರಮುಖ ಕಟ್ಟಡಗಳ ರಕ್ಷಣೆ ಸೇರಿದಂತೆ ಆಂತರಿಕ ಭದ್ರತಾ ಕಾರ್ಯಗಳಿಗಾಗಿ ಅನ್ಸಾರ್ ಪಡೆಯ ಸದಸ್ಯರನ್ನು ನಿಯೋಜಿಸಲಾಗುತ್ತದೆ. ಭದ್ರತಾ ಕರ್ತವ್ಯಕ್ಕಾಗಿ ಸರ್ಕಾರದಿಂದ ಶಸ್ತ್ರಾಸ್ತ್ರಗಳನ್ನು ನೀಡಲಾಗುತ್ತದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಇಬ್ಬರೂ ಭದ್ರತಾ ಕರ್ತವ್ಯದಲ್ಲಿದ್ದರು ಮತ್ತು ಕಾರ್ಖಾನೆ ಆವರಣದೊಳಗೆ ಬ್ಯಾರಕ್ಗಳಲ್ಲಿ ತಂಗಿದ್ದರು ಎನ್ನಲಾಗಿದೆ.
ಇಬ್ಬರ ಮಾತುಕತೆ ವೇಳೆ ಆರೋಪಿ ನೋಮನ್ ಮಿಯಾ, ಸರ್ಕಾರ ನೀಡಿದ ಗನ್ ಅನ್ನು ಬಿಸ್ವಾಸ್ ನತ್ತ ತೋರಿಸಿ ತಮಾಷೆ ಮಾಡಿದ್ದು ನಂತರ ಗುಂಡು ಹಾರಿಸಿದ್ದಾನೆ. ಬಿಸ್ವಾಸ್ನ ಎಡ ತೊಡೆಗೆ ಗುಂಡು ತಗುಲಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು, ಗನ್ ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Violence against minorities continues in Bangladesh as another Hindu man was shot dead—marking the third such killing in just two weeks. Bijendra Biswas (42), a security guard at a garment factory in Mymensingh’s Bhaluka area, was killed by his colleague Noman Mia (29), also a security guard. The incident occurred inside the barracks of Labib Group’s Sultana Sweaters Ltd.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm