ಬ್ರೇಕಿಂಗ್ ನ್ಯೂಸ್
01-01-26 09:34 pm HK News Desk ದೇಶ - ವಿದೇಶ
ಢಾಕಾ, ಜ.1 : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರಿದಿದ್ದು ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿದೆ. 50 ವರ್ಷದ ಖೋಕೊನ್ ದಾಸ್ ಎಂಬ ವ್ಯಕ್ತಿ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಸುಟ್ಟು ಹಾಕಲು ಯತ್ನಿಸಲಾಗಿದೆ.
ದಾಸ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಬಾಂಗ್ಲಾದೇಶದ ಶರಿಯತ್ಪುರ ಜಿಲ್ಲೆಯಲ್ಲಿ ಡಿಸೆಂಬರ್ 31 ರಂದು ಘಟನೆ ನಡೆದಿದ್ದು ಖೋಕೊನ್ ದಾಸ್ ತನ್ನ ಮನೆಗೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಬೆಂಕಿ ಹಚ್ಚಿ ಸಜೀವ ಸುಟ್ಟು ಹಾಕಲು ಯತ್ನಿಸಿದೆ ಎಂದು ಅವರು ಆರೋಪಿಸಿದ್ದಾರೆ.


ಕೆಯೋರ್ಬಂಗಾ ಪ್ರದೇಶದಲ್ಲಿ ಫಾರ್ಮಸಿ ನಡೆಸುತ್ತಿದ್ದ ದಾಸ್, ಮನೆಗೆ ಹಿಂದಿರುಗುತ್ತಿದ್ದಾಗ ದಾಳಿ ನಡೆಸಲಾಗಿದೆ. ಉದ್ರಿಕ್ತ ಗುಂಪು ದಾಸ್ ಅವರ ಹೊಟ್ಟೆಯ ಭಾಗಕ್ಕೆ ಇರಿದು ಗಾಯಗೊಳಿಸಿದೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದೆ. ಆದರೆ ದಾಸ್ ಅವರು ಅಲ್ಲಿಯೇ ಸಮೀಪದಲ್ಲಿದ್ದ ಕೆರೆಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ದಾಸ್ ಅವರನ್ನು ತಕ್ಷಣ ಶರಿಯತ್ಪುರ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಅವರನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಎರಡು ವಾರಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ನಾಲ್ಕನೇ ದಾಳಿ ಇದಾಗಿದೆ. ಡಿಸೆಂಬರ್ 24ರಂದು 29 ವರ್ಷದ ಅಮೃತ್ ಮೊಂಡಲ್ ಎಂಬ ಯುವಕನ ಹತ್ಯೆಯಾಗಿತ್ತು. ಡಿ.18ರಂದು ದೀಪು ಚಂದ್ರದಾಸ್ ಎಂಬ 25 ವರ್ಷದ ಯುವಕನನ್ನು ಉದ್ರಿಕ್ತ ಗುಂಪು ಹತ್ಯೆಗೈದು ಸುಟ್ಟು ಹಾಕಿತ್ತು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಸರಣಿ ದಾಳಿ ನಡೆಯುತ್ತಿದ್ದು, ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
In yet another shocking attack on the Hindu minority community in Bangladesh, a 50-year-old man, Khokon Das, was brutally assaulted and set on fire by a mob in Shariatpur district on December 31.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm