ಬ್ರೇಕಿಂಗ್ ನ್ಯೂಸ್
07-01-26 04:47 pm HK News Desk ದೇಶ - ವಿದೇಶ
ನವದೆಹಲಿ, ಜ.7 : ದೆಹಲಿಯ ರಾಮಲೀಲಾ ಮೈದಾನದ ಬಳಿಯಿರುವ ಸೈಯದ್ ಫೈಜ್ ಇಲಾಹಿ ಮಸೀದಿ ಬಳಿಯ ಅತಿಕ್ರಮಣ ತೆರವು ಕಾರ್ಯಾಚರಣೆ ಮಾಡುತ್ತಿದ್ದಾಗ ಸ್ಥಳೀಯರು ಏಕಾಏಕಿ ಪೊಲೀಸರ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ತೂರಿ ಹಿಂಸಾಚಾರಕ್ಕಿಳಿದಿದ್ದು, ಐವರು ಪೊಲೀಸ್ ಸಿಬಂದಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಕೋರ್ಟ್ ಆದೇಶದಂತೆ, ಸರ್ಕಾರಿ ಜಾಗದ ಅತಿಕ್ರಮಣವನ್ನು ತೆರವು ಮಾಡಲು ದೆಹಲಿ ಮಹಾನಗರ ಪಾಲಿಕೆ ಮುಂದಾಗಿತ್ತು. ಈ ವೇಳೆ, ಸ್ಥಳೀಯ ಜನರು ವಿರೋಧಿಸಿದ್ದು ಪೊಲೀಸರ ಮೇಲೆ ಕಲ್ಲು ತೂರಾಟ ಆರಂಭಿಸಿದ್ದಾರೆ. ಬಳಿಕ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಮೂಲಕ ಉದ್ರಿಕ್ತರನ್ನು ಚದುರಿಸಿದ್ದಾರೆ. ಸಿಸಿಟಿವಿ ಆಧರಿಸಿ ಕಲ್ಲು ತೂರಾಟ ನಡೆಸಿದವರನ್ನು ಪತ್ತೆ ಮಾಡುತ್ತಿದ್ದಾರೆ. ಅಲ್ಲದೆ, ಇದು ಉದ್ದೇಶಪೂರ್ವಕ ಕೃತ್ಯವೇ ಅಥವಾ ಅನಿರೀಕ್ಷಿತ ಬೆಳವಣಿಗೆಯೇ ಎಂದು ತನಿಖೆ ನಡೆಸುತ್ತಿದ್ದಾರೆ.




ತೆರವು ಕಾರ್ಯಾಚರಣೆಯಿಂದ ಮಸೀದಿಗೆ ಯಾವುದೇ ಹಾನಿಯಾಗಿಲ್ಲ. ದೆಹಲಿ ಹೈಕೋರ್ಟ್ ಸೂಚನೆಯಂತೆ ಅತಿಕ್ರಮಣ ತೆರವು ಮಾಡುತ್ತಿದ್ದು ಪಾಲಿಕೆಯಿಂದ 300 ರಷ್ಟು ಕಾರ್ಮಿಕರು, 30 ಜೆಸಿಬಿ ಇನ್ನಿತರ ವಾಹನಗಳನ್ನು ಬಳಸಲಾಗಿದೆ. ಅತಿಕ್ರಮಿಸಿ ಕಟ್ಟಲಾಗಿರುವ ಕಟ್ಟಡ ಸೇರಿದಂತೆ ಎಲ್ಲವನ್ನೂ ನೆಲಸಮ ಮಾಡಲಾಗುವುದು, ರಾತ್ರಿಯೂ ತೆರವು ಕಾರ್ಯ ಮುಂದುವರಿಯಲಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂಸೆಯನ್ನು ಯಾವುದೇ ಕಾರಣಕ್ಕು ಸಹಿಸುವುದಿಲ್ಲ. ಮಸೀದಿ ಆವರಣದಲ್ಲಿ ಅಕ್ರಮವಾಗಿ ಕಟ್ಟಲಾಗಿರುವ ಕಟ್ಟಡಗಳನ್ನು ಕೋರ್ಟ್ ಆದೇಶದಂತೆ ತೆರವು ಮಾಡಲಾಗುವುದು. ಇದರ ನೆಪದಲ್ಲಿ ಹಿಂಸೆಗೆ ಇಳಿದರೆ ಕಠಿಣ ಕ್ರಮ ಜರುಗಿಸಲಾಗುವುದು ದೆಹಲಿ ಸರ್ಕಾರದ ಗೃಹ ಸಚಿವ ಆಶಿಶ್ ಸೂದ್ ತಿಳಿಸಿದ್ದಾರೆ.
Violence broke out in Delhi when locals began pelting stones and bottles at police officers during an anti-encroachment demolition drive near the Sayed Faiz Ilahi Mosque, located close to the Ramlila Maidan. Five police personnel were injured in the attack, and the police have arrested five individuals in connection with the incident.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm