ಬ್ರೇಕಿಂಗ್ ನ್ಯೂಸ್
08-01-26 05:11 pm HK News Desk ದೇಶ - ವಿದೇಶ
ವಾಷಿಂಗ್ಟನ್, ಜ.8 : ರಷ್ಯಾದ ತೈಲ ವ್ಯಾಪಾರಕ್ಕೆ ಕಡಿವಾಣ ಹಾಕಲು ಅಮೆರಿಕವು ಭಾರತ, ಚೀನಾ ಮತ್ತು ಬ್ರೆಜಿಲ್ ವಿರುದ್ಧ ಮತ್ತಷ್ಟು ನಿರ್ಬಂಧ ಹೇರಲು ಮುಂದಾಗಿದೆ. ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲು ಪರೋಕ್ಷ ಒತ್ತಡ ಹೇರುವುದಕ್ಕಾಗಿ ದ್ವಿಪಕ್ಷೀಯ ರಷ್ಯಾ ನಿರ್ಬಂಧ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಸಿರು ನಿಶಾನೆ ತೋರಿಸಿದ್ದಾರೆ.
ಅಮೆರಿಕದ ಸೆನೆಟರ್ ಲಿಂಡ್ಸೆ ಗ್ರಹಾಂ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ತಿಳಿಸಿದ್ದು ಉಕ್ರೇನ್ ನಲ್ಲಿ ಯುದ್ಧ ನಿಲ್ಲಿಸಿ ಶಾಂತಿ ಸ್ಥಾಪಿಸುವುದಕ್ಕಾಗಿ ಈ ಕ್ರಮ ಅನಿವಾರ್ಯ. ಮುಂದಿನ ವಾರ ದ್ವಿಪಕ್ಷೀಯ ಮಸೂದೆಯನ್ನು ಮತದಾನಕ್ಕೆ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಅಧ್ಯಕ್ಷ ಟ್ರಂಪ್ ಅವರೊಂದಿಗೆ ಚರ್ಚೆ ನಡೆಸಿದ ನಂತರ, ದ್ವಿಪಕ್ಷೀಯ ರಷ್ಯಾ ನಿರ್ಬಂಧ ಮಸೂದೆಗೆ ಅವರು ಹಸಿರು ನಿಶಾನೆ ತೋರಿದರು ಎಂದು ತಿಳಿಸಿದ್ದಾರೆ.
ಉಕ್ರೇನ್ ಶಾಂತಿಗಾಗಿ ಎಲ್ಲ ರೀತಿಯ ಆಯ್ಕೆಗಳನ್ನು ಎದುರು ನೋಡುತ್ತಿದ್ದೇವೆ. ವ್ಲಾಡಿಮಿರ್ ಪುಟಿನ್ ಮುಗ್ಧರನ್ನು ಕೊಲ್ಲುವುದನ್ನು ಮುಂದುವರಿಸಿದ್ದಾರೆ. ಈ ಮಸೂದೆಯು ಪುಟಿನ್ ಅವರ ಯುದ್ಧ ಯಂತ್ರಕ್ಕೆ ಇಂಧನ ನೀಡುವ ದೇಶಗಳನ್ನು ಶಿಕ್ಷಿಸಲು ಅಧ್ಯಕ್ಷ ಟ್ರಂಪ್ಗೆ ಅವಕಾಶ ನೀಡುತ್ತದೆ. ಚೀನಾ, ಭಾರತ ಮತ್ತು ಬ್ರೆಜಿಲ್ನಂತಹ ದೇಶಗಳ ವಿರುದ್ಧ ಭಾರಿ ಹಿಡಿತ ಸಾಧಿಸಲು ಈ ಮಸೂದೆ ಸಹಾಯ ಮಾಡಲಿದೆ. ರಷ್ಯಾದ ಅಗ್ಗದ ತೈಲವನ್ನು ಖರೀದಿಸುವ ದೇಶಗಳಿಗೆ ಕಡಿವಾಣ ಹಾಕಲಿದೆ. ಮುಂದಿನ ವಾರದ ಆರಂಭದಲ್ಲಿಯೇ ಈ ಮಸೂದೆ ಜಾರಿಗೆ ಬರುವುದನ್ನು ಎದುರು ನೋಡುತ್ತಿದ್ದೇನೆ ಎಂದವರು ಮಾಹಿತಿ ನೀಡಿದ್ದಾರೆ.
ಯುಎಸ್ ಕಾಂಗ್ರೆಸ್ನ ಅಧಿಕೃತ ವೆಬ್ಸೈಟ್ ಪ್ರಕಾರ, ರಷ್ಯಾ ಮಂಜೂರಾತಿ ಕಾಯ್ದೆ 2025 ಮಸೂದೆಯು ಹಲವಾರು ನಿಬಂಧನೆಗಳನ್ನು ವಿಧಿಸಲು ಅವಕಾಶ ನೀಡುತ್ತದೆ. ಇದರಲ್ಲಿ ವ್ಯಕ್ತಿಗಳು ಮತ್ತು ಸಂಸ್ಥೆಗಳ ಮೇಲೆ ದಂಡ ವಿಧಿಸುವುದೂ ಸೇರಲಿದೆ. ರಷ್ಯಾದಿಂದ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಎಲ್ಲಾ ಸರಕು ಮತ್ತು ಸೇವೆಗಳ ಮೇಲಿನ ಸುಂಕದ ದರವನ್ನು ಸರಕು ಮತ್ತು ಸೇವೆಗಳ ಮೌಲ್ಯಕ್ಕೆ ಹೋಲಿಸಿದರೆ ಕನಿಷ್ಠ ಶೇಕಡಾ 500ಕ್ಕೆ ಹೆಚ್ಚಿಸುವುದು ಸೇರಿರಲಿದೆ.
The United States is moving to impose additional sanctions on India, China, and Brazil as part of efforts to curb Russia’s oil trade. To indirectly pressure countries into halting the purchase of Russian oil, former US President Donald Trump has given the green signal to a bipartisan Russia sanctions bill.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm