ಬ್ರೇಕಿಂಗ್ ನ್ಯೂಸ್
12-01-26 05:01 pm Mangaluru Staffer ದೇಶ - ವಿದೇಶ
ಕಾಸರಗೋಡು, ಜ.12: ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆಯ ಆರಿಕ್ಕಾಡಿಯಲ್ಲಿ ತಾತ್ಕಾಲಿಕ ಟೋಲ್ ಪ್ಲಾಜಾ ಆರಂಭಿಸುವುದನ್ನು ವಿರೋಧಿಸಿ ಮಂಜೇಶ್ವರ ಶಾಸಕ ಎಕೆಎಂ ಶರೀಫ್ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮೂರು ಗಂಟೆ ಕಾಲ ಧರಣಿ ಕುಳಿತ ಶಾಸಕ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಜ.12ರಿಂದ ತಾತ್ಕಾಲಿಕವಾಗಿ ಟೋಲ್ ಸಂಗ್ರಹಿಸಲು ಜಿಲ್ಲಾಡಳಿತ ಅನುಮತಿ ನೀಡಿದ್ದು, ಇದರಂತೆ ಸೋಮವಾರದಿಂದ ಆರಿಕ್ಕಾಡಿಯಲ್ಲಿ ಟೋಲ್ ಸಂಗ್ರಹಿಸಲು ವ್ಯವಸ್ಥೆಯಾಗಿತ್ತು. ಆದರೆ ಬೆಳಗ್ಗೆ 7 ಗಂಟೆಗೆ ಸರ್ವಪಕ್ಷಗಳ ಆಕ್ಷನ್ ಕಮಿಟಿಯ ನೇತೃತ್ವದಲ್ಲಿ ಸಾರ್ವಜನಿಕರು ಪ್ರತಿಭಟನೆ ಆರಂಭಿಸಿದ್ದಾರೆ. ಮೂರು ಗಂಟೆ ಕಾಲ ರಸ್ತೆಯಲ್ಲಿ ಧರಣಿ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದಕ್ಕೆ ಶಾಸಕ ಅಶ್ರಫ್ ಮತ್ತು ಇತರರನ್ನು ಪೊಲೀಸರು ಬಂಧಿಸಿ ಬಳಿಕ ಕುಂಬಳೆ ಠಾಣೆಗೆ ಒಯ್ದಿದ್ದಾರೆ.

ಅಲ್ಲಿಯೂ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಾಸಕ ಅಶ್ರಫ್, ಕೇಂದ್ರ ಸರಕಾರದ ನಿಯಮ ಪ್ರಕಾರ 60 ಕಿಮೀಗೆ ಒಂದರಂತೆ ಟೋಲ್ ಕಲೆಕ್ಷನ್ ಮಾಡಬೇಕು. ಇಲ್ಲಿ ತಲಪಾಡಿಯಿಂದ 20 ಕಿಮೀ ಅಂತರದಲ್ಲಿ ಟೋಲ್ ಪ್ಲಾಜಾ ನಡೆಸುವುದಕ್ಕೆ ನಮ್ಮ ವಿರೋಧ ಇದೆ. ನಿಯಮ ಪ್ರಕಾರ, ಪೆರಿಯಾ ಪಂಚಾಯತಿನ ಚಾಲಿಂಗಾಲ್ ನಲ್ಲಿ ಟೋಲ್ ಪ್ಲಾಜಾ ಆಗಬೇಕಿದ್ದು, ಅಲ್ಲಿಗೆ ಶಿಫ್ಟ್ ಮಾಡಬೇಕು. ತಲಪಾಡಿ ಟೋಲ್ ಗೇಟ್ ಮಂಜೇಶ್ವರ ಕ್ಷೇತ್ರಕ್ಕೆ ತಾಗಿಕೊಂಡಿದ್ದು, ಹೀಗಿರುವಾಗ ಒಂದೇ ಕ್ಷೇತ್ರದಲ್ಲಿ ಎರಡು ಕಡೆ ಟೋಲ್ ಕಲೆಕ್ಷನ್ ಮಾಡುವುದಕ್ಕೆ ನಾವು ಬಿಡುವುದಿಲ್ಲ. ಕನಿಷ್ಠ ಮಂಜೇಶ್ವರ ಕ್ಷೇತ್ರ ಹೊರತುಪಡಿಸಿಯಾದ್ರೂ ಟೋಲ್ ಕಲೆಕ್ಷನ್ ಮಾಡಿ ಎಂದು ಹೇಳಿದ್ದಾರೆ.
ಕುಂಬಳೆ ಪಂಚಾಯತ್ ಸದಸ್ಯ ಖಾಲಿದ್ ಮಾತನಾಡಿ, ತಾತ್ಕಾಲಿಕ ಟೋಲ್ ಗೇಟ್ ವಿರುದ್ಧ ಹೈಕೋರ್ಟಿನಲ್ಲಿ ರಿಟ್ ಹಾಕಿದ್ದೇವೆ, ಅಲ್ಲಿ ವಿಚಾರಣೆ ಮುಗಿಯೋ ವರೆಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಕಲೆಕ್ಷನ್ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಪೊಲೀಸರು ಕೋರ್ಟ್ ಸೂಚನೆಯಂತೆ, ತಾತ್ಕಾಲಿಕ ಟೋಲ್ ಕಲೆಕ್ಷನ್ ಮಾಡಲು ಅನುಮತಿ ನೀಡಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಶಾಸಕ ಎಕೆಎಂ ಅಶ್ರಫ್ ಮತ್ತು ಪೊಲೀಸರ ನಡುವೆ ತಳ್ಳಾಟ, ಮಾತಿನ ವಾಗ್ವಾದ ನಡೆಯಿತು. ಆದರೆ ಪೊಲೀಸರು ಯಾವುದೇ ಪ್ರತಿಭಟನೆಗೂ ಬಗ್ಗಲಿಲ್ಲ.
Thousands of activists led by Manjeshwar MLA A.K.M. Ashraf staged a protest on Monday opposing the start of a temporary toll plaza at Arikkady in Kumble on National Highway 66. The protest resulted in a three-hour road blockade, causing heavy traffic congestion. Police later arrested the MLA along with several protestors.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm