ಬ್ರೇಕಿಂಗ್ ನ್ಯೂಸ್
28-01-26 11:14 pm HK News Desk ದೇಶ - ವಿದೇಶ
ನವದೆಹಲಿ, ಜ.28 : ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಬಳಿಕ ಅಲ್ಪಸಂಖ್ಯಾತರ ಕೋಟಾದಡಿ ಮೀಸಲಾತಿ ಕೇಳಿದ್ದ ಮೇಲ್ಜಾತಿ ಹಿಂದೂ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಷ್ಟೇ ಅಲ್ಲದೆ, ಇದೊಂದು ಹೊಸ ರೀತಿಯ ವಂಚನೆ ಎಂದು ಆಕ್ಷೇಪಿಸಿದೆ
ಅಲ್ಪಸಂಖ್ಯಾತ ಅಭ್ಯರ್ಥಿ ಕೋಟಾದಡಿ ಪ್ರವೇಶ ಕೋರಿ ನಿಖಿಲ್ ಕುಮಾರ್ ಪುನಿಯಾ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ನೀವು ಹೇಗೆ ಅಲ್ಪಸಂಖ್ಯಾತರು? ನೀವು ಯಾವ ಪುನಿಯಾ ಎಂದು ಸಿಜೆಐ ಕಾಂತ್ ಪ್ರಶ್ನಿಸಿದರು. ಇದಕ್ಕೆ ಅರ್ಜಿದಾರರ ಪರ ವಕೀಲ ಜಾಟ್ ಪುನಿಯಾ ಎಂದು ಉತ್ತರಿಸಿದರು. ಈ ಉತ್ತರ ಬಂದ ಬೆನ್ನಲ್ಲೇ, ನೀವು ಹೇಗೆ ಅಲ್ಪಸಂಖ್ಯಾತರು ಎಂದು ಪೀಠ ಮರು ಪ್ರಶ್ನೆ ಹಾಕಿತು. ಈ ಪ್ರಶ್ನೆಗೆ ವಕೀಲರು, ಈಗ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇನೆ. ಅದು ನನ್ನ ಹಕ್ಕು ಎಂದು ಉತ್ತರಿಸಿದರು.
ವಕೀಲರ ಉತ್ತರಕ್ಕೆ ಗರಂ ಆದ ಸಿಜೆಐ, ಇದು ಹೊಸ ರೀತಿಯ ವಂಚನೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನಂತರ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ಹೇಳಿಕೊಳ್ಳುವ ಮೂಲಕ ಅಲ್ಪಸಂಖ್ಯಾತ ಪ್ರಮಾಣಪತ್ರವನ್ನು ಪಡೆಯಬಹುದೇ? ಅಲ್ಪಸಂಖ್ಯಾತ ಪ್ರಮಾಣಪತ್ರ ನೀಡಲು ಏನೇನು ಮಾರ್ಗಸೂಚಿಗಳಿವೆ ಎಂದು ತಿಳಿಸುವಂತೆ ಹರಿಯಾಣದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.
The Supreme Court strongly criticised an upper-caste Hindu man who sought reservation under the minority quota after converting to Buddhism, calling it a “new form of fraud.” The court questioned the basis of granting minority certificates and sought guidelines from the Haryana government.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm