ಬ್ರೇಕಿಂಗ್ ನ್ಯೂಸ್
30-01-26 02:04 pm HK News Desk ದೇಶ - ವಿದೇಶ
ಅಹಮದಾಬಾದ್, ಜ.30 : ಚಿರತೆ ದಾಳಿಯಿಂದ ರಕ್ಷಿಸಿಕೊಳ್ಳಲು 60 ವರ್ಷದ ರೈತನೊಬ್ಬ ಚಿರತೆಯನ್ನು ಕತ್ತಿಯಿಂದ ಹಲ್ಲೆ ಮಾಡಿ ಕೊಂದ ಘಟನೆ ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ ನಡೆದಿದೆ. ಆದರೆ ಚಿರತೆ ಕೊಂದ ರೈತನ ವಿರುದ್ಧವೇ ಅರಣ್ಯ ಇಲಾಖೆಯ ಅಧಿಕಾರಿಗಳು ಕೇಸು ದಾಖಲಿಸಿದ್ದಾರೆ.
ಚಿರತೆ ದಾಳಿಯಿಂದ ರೈತನ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ತನಗೆ ಮತ್ತು ಮಗನ ಮೇಲೆ ಚಿರತೆ ದಾಳಿ ನಡೆಸಿದ್ದಕ್ಕೆ ರೈತ ಪ್ರತಿ ದಾಳಿ ನಡೆಸಿದ್ದ. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಕೊಂದ ಆರೋಪದಲ್ಲಿ ರೈತ ಬಾಬು ವಾಜಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಗ್ಯಾಂಗ್ಡಾ ಗ್ರಾಮದ ತಮ್ಮ ಮನೆಯ ವರಾಂಡಾದಲ್ಲಿ ಬಾಬು ವಾಜಾ ವಿಶ್ರಾಂತಿ ಪಡೆಯುತ್ತಿದ್ದ ವೇಳೆ, ಸಮೀಪದ ಹೊಲದಿಂದ ಬಂದ ಚಿರತೆಯೊಂದು ಏಕಾಏಕಿ ದಾಳಿ ಮಾಡಿತ್ತು. ಚಿರತೆ ದಾಳಿಯನ್ನು ಕಂಡು ಬಾಬು ಅವರ ಮಗ ಶಾರ್ದೂಲ್ ತಂದೆಯ ರಕ್ಷಿಸಲು ಧಾವಿಸಿದ್ದು, ಚಿರತೆ ಅವನ ಮೇಲೆ ದಾಳಿ ಮಾಡಿತ್ತು. ಈ ವೇಳೆ, ಇಬ್ಬರೂ ಸೇರಿ ಚಿರತೆಯನ್ನು ಹೊಡೆದು ಕೊಂದಿದ್ದರು.
ಘಟನೆ ಕುರಿತು ಮಾತನಾಡಿದ ಬಾಬು ವಾಜಾ, “ಚಿರತೆ ನನ್ನ ತೋಳನ್ನು ಕಚ್ಚಿ ಎಳೆಯಲು ಶುರು ಮಾಡಿತ್ತು. ನನ್ನ ಕಿರುಚಾಟ ಕೇಳಿ ಮಗ ಶಾರ್ದೂಲ್ ಓಡಿ ಬಂದಿದ್ದ. ಚಿರತೆ ಅವನ ಮೇಲೂ ಹಾರಿ ಗಾಯಗೊಳಿಸಿತು. ಮಗನನ್ನು ಉಳಿಸಲು ಯತ್ನಿಸಿದಾಗ ಮತ್ತೆ ನನ್ನ ಮೇಲೆ ದಾಳಿ ಮಾಡಿತು. ಆಗ ಬೇರೆ ದಾರಿ ಇರಲಿಲ್ಲ. ಅಲ್ಲೇ ಇದ್ದ ಕತ್ತಿಯನ್ನು ತೆಗೆದುಕೊಂಡು ಚಿರತೆಗೆ ಹೊಡೆದೆ ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಬಾಬು ಮತ್ತು ಅವರ ಮಗನ ಮುಂಗೈ ಹಾಗೂ ಹಣೆಯ ಭಾಗದಲ್ಲಿ ಗಾಯಗಳಾಗಿವೆ. ವರಾಂಡಾದಲ್ಲಿ ಇಡಲಾಗಿದ್ದ ಕತ್ತಿಯನ್ನೇ ಉಪಯೋಗಿಸಿ ಚಿರತೆಯನ್ನು ಕೊಂದು ಹಾಕಿದ್ದರು. ಘಟನೆಯ ಮಾಹಿತಿ ದೊರಕಿದ ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
In Gujarat’s Gir Somnath district, a 60-year-old farmer hacked a leopard to death with a machete while trying to save his son from an attack. Though the farmer and his son suffered injuries in the incident, forest department officials have registered a case against him for killing the protected animal, triggering debate over self-defence versus wildlife protection laws.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm