ಬ್ರೇಕಿಂಗ್ ನ್ಯೂಸ್
30-01-26 02:04 pm HK News Desk ದೇಶ - ವಿದೇಶ
ಅಹಮದಾಬಾದ್, ಜ.30 : ಚಿರತೆ ದಾಳಿಯಿಂದ ರಕ್ಷಿಸಿಕೊಳ್ಳಲು 60 ವರ್ಷದ ರೈತನೊಬ್ಬ ಚಿರತೆಯನ್ನು ಕತ್ತಿಯಿಂದ ಹಲ್ಲೆ ಮಾಡಿ ಕೊಂದ ಘಟನೆ ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ ನಡೆದಿದೆ. ಆದರೆ ಚಿರತೆ ಕೊಂದ ರೈತನ ವಿರುದ್ಧವೇ ಅರಣ್ಯ ಇಲಾಖೆಯ ಅಧಿಕಾರಿಗಳು ಕೇಸು ದಾಖಲಿಸಿದ್ದಾರೆ.
ಚಿರತೆ ದಾಳಿಯಿಂದ ರೈತನ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ತನಗೆ ಮತ್ತು ಮಗನ ಮೇಲೆ ಚಿರತೆ ದಾಳಿ ನಡೆಸಿದ್ದಕ್ಕೆ ರೈತ ಪ್ರತಿ ದಾಳಿ ನಡೆಸಿದ್ದ. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಕೊಂದ ಆರೋಪದಲ್ಲಿ ರೈತ ಬಾಬು ವಾಜಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಗ್ಯಾಂಗ್ಡಾ ಗ್ರಾಮದ ತಮ್ಮ ಮನೆಯ ವರಾಂಡಾದಲ್ಲಿ ಬಾಬು ವಾಜಾ ವಿಶ್ರಾಂತಿ ಪಡೆಯುತ್ತಿದ್ದ ವೇಳೆ, ಸಮೀಪದ ಹೊಲದಿಂದ ಬಂದ ಚಿರತೆಯೊಂದು ಏಕಾಏಕಿ ದಾಳಿ ಮಾಡಿತ್ತು. ಚಿರತೆ ದಾಳಿಯನ್ನು ಕಂಡು ಬಾಬು ಅವರ ಮಗ ಶಾರ್ದೂಲ್ ತಂದೆಯ ರಕ್ಷಿಸಲು ಧಾವಿಸಿದ್ದು, ಚಿರತೆ ಅವನ ಮೇಲೆ ದಾಳಿ ಮಾಡಿತ್ತು. ಈ ವೇಳೆ, ಇಬ್ಬರೂ ಸೇರಿ ಚಿರತೆಯನ್ನು ಹೊಡೆದು ಕೊಂದಿದ್ದರು.
ಘಟನೆ ಕುರಿತು ಮಾತನಾಡಿದ ಬಾಬು ವಾಜಾ, “ಚಿರತೆ ನನ್ನ ತೋಳನ್ನು ಕಚ್ಚಿ ಎಳೆಯಲು ಶುರು ಮಾಡಿತ್ತು. ನನ್ನ ಕಿರುಚಾಟ ಕೇಳಿ ಮಗ ಶಾರ್ದೂಲ್ ಓಡಿ ಬಂದಿದ್ದ. ಚಿರತೆ ಅವನ ಮೇಲೂ ಹಾರಿ ಗಾಯಗೊಳಿಸಿತು. ಮಗನನ್ನು ಉಳಿಸಲು ಯತ್ನಿಸಿದಾಗ ಮತ್ತೆ ನನ್ನ ಮೇಲೆ ದಾಳಿ ಮಾಡಿತು. ಆಗ ಬೇರೆ ದಾರಿ ಇರಲಿಲ್ಲ. ಅಲ್ಲೇ ಇದ್ದ ಕತ್ತಿಯನ್ನು ತೆಗೆದುಕೊಂಡು ಚಿರತೆಗೆ ಹೊಡೆದೆ ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಬಾಬು ಮತ್ತು ಅವರ ಮಗನ ಮುಂಗೈ ಹಾಗೂ ಹಣೆಯ ಭಾಗದಲ್ಲಿ ಗಾಯಗಳಾಗಿವೆ. ವರಾಂಡಾದಲ್ಲಿ ಇಡಲಾಗಿದ್ದ ಕತ್ತಿಯನ್ನೇ ಉಪಯೋಗಿಸಿ ಚಿರತೆಯನ್ನು ಕೊಂದು ಹಾಕಿದ್ದರು. ಘಟನೆಯ ಮಾಹಿತಿ ದೊರಕಿದ ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
In Gujarat’s Gir Somnath district, a 60-year-old farmer hacked a leopard to death with a machete while trying to save his son from an attack. Though the farmer and his son suffered injuries in the incident, forest department officials have registered a case against him for killing the protected animal, triggering debate over self-defence versus wildlife protection laws.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am