ಬ್ರೇಕಿಂಗ್ ನ್ಯೂಸ್
31-12-20 08:31 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.31: ಪಾಕಿಸ್ತಾನದಲ್ಲಿ ಹಿಂದುಗಳ ದೇವಸ್ಥಾನ ಒಂದನ್ನು ಮುಸ್ಲಿಂ ಮೂಲಭೂತವಾದಿಗಳು ಬೆಂಕಿ ಕೊಟ್ಟು ಕೆಡವಿ ಹಾಕಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಅಲ್ಲಿನ ಪೊಲೀಸರು 26 ಮಂದಿಯನ್ನು ಬಂಧಿಸಿದ್ದಾರೆ.
ಮೂಲಭೂತವಾದಿ ಸಂಘಟನೆ ಜಾಮಿಯತ್ ಉಲೇಮಾ ಇ- ಇಸ್ಲಾಮಿ ಪಾರ್ಟಿಯ ನಾಯಕ ರೆಹಮತ್ ಸಲಾಮ್ ಖಟ್ಟಕ್ ಸೇರಿ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಖ್ತುಂಖ್ವಾ ಪ್ರಾಂತ್ಯದ ಕರಾಕ್ ಜಿಲ್ಲೆಯ ಟೆರ್ರಿ ಎನ್ನುವ ಗ್ರಾಮದಲ್ಲಿ ದೇವಸ್ಥಾನವನ್ನು ತಂಡವೊಂದು ಪುಡಿಗಟ್ಟಿದ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್ ಆಗಿತ್ತು. ದೇವಸ್ಥಾನದ ಆವರಣ ಗೋಡೆಯನ್ನು ನವೀಕರಣ ಮಾಡುತ್ತಿರುವುದನ್ನು ವಿರೋಧಿಸಿದ ಉದ್ರಿಕ್ತ ಗುಂಪು, ಹಳೆಯ ದೇವಸ್ಥಾನ ಕಟ್ಟಡವನ್ನೇ ಕೆಡವಿ ಹಾಕಿದೆ.
ಘಟನೆ ಬಗ್ಗೆ ಮಾನವ ಹಕ್ಕು ಸಂಘಟನೆ ಮತ್ತು ಅಲ್ಪಸಂಖ್ಯಾತ ಹಿಂದು ಸಮುದಾಯದ ನಾಯಕರಿಂದ ಆಕ್ರೋಶ ಕೇಳಿಬಂದಿದೆ. ಪೇಶಾವರದ ಹಿಂದು ಸಮುದಾಯದ ನಾಯಕ ಹರೂನ್ ಸರಾಬ್ ದಿಯಾಳ್ ಹೇಳಿಕೆ ನೀಡಿ, ದೇವಸ್ಥಾನದ ಆವರಣದಲ್ಲಿ ಹಿಂದು ಸಂತರೊಬ್ಬರ ಸಮಾಧಿ ಇತ್ತು. ದೇಶಾದ್ಯಂತದ ಹಿಂದು ಬಂಧುಗಳು ಅಲ್ಲಿಗೆ ಭೇಟಿ ನೀಡುತ್ತಿದ್ದರು. ಇಂಥ ಸಮಾಧಿಯನ್ನೂ ಕೆಡವಿ ಹಾಕಿದ್ದಾರೆ. ಇದು ಹಿಂದು ಸಮುದಾಯದ ಭಾವನೆಯನ್ನು ಘಾಸಿಗೊಳಿಸಿದೆ. ಪಾಕಿಸ್ಥಾನ ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
ಪಾಕಿಸ್ತಾನದಲ್ಲಿ 75 ಲಕ್ಷ ಹಿಂದುಗಳಿದ್ದಾರೆಂದು ಅಲ್ಲಿನ ಅಧಿಕೃತ ಅಂಕಿಅಂಶಗಳು ಹೇಳುತ್ತವೆ. ಆದರೆ, ಅಲ್ಲಿನ ಹಿಂದು ಸಮುದಾಯ 90 ಲಕ್ಷ ಇದ್ದೇವೆ ಎಂದು ಹೇಳುತ್ತಾರೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹೆಚ್ಚು ಹಿಂದುಗಳಿದ್ದಾರೆ. ಹೀಗಾಗಿ ಇತರೇ ಪ್ರಾಂತ್ಯಗಳಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ, ದೇಗುಲ ಧ್ವಂಸ ಪ್ರಕರಣಗಳು ಸಾಮಾನ್ಯ ಎಂಬಂತಾಗಿದೆ.
Pakistani police have arrested over 30 people, most of them belonging to a radical Islamist party, after a Hindu temple was vandalised and set on fire by a mob protesting its renovation in northwest Pakistan.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm