ಬ್ರೇಕಿಂಗ್ ನ್ಯೂಸ್
02-02-26 11:59 am HK News Desk ದೇಶ - ವಿದೇಶ
ನವದೆಹಲಿ, ಫೆ.2 : ಕೇಂದ್ರ ಸರ್ಕಾರವು 75 ವರ್ಷ ಹಳೆಯದಾದ 1961ರ ಆದಾಯ ತೆರಿಗೆ ಕಾಯ್ದೆಯನ್ನು ಬದಲಿಸಿ, ಹೊಸ 'ಆದಾಯ ತೆರಿಗೆ ಕಾಯ್ದೆ -2025' ಜಾರಿಗೆ ತರುತ್ತಿದೆ. ಏಪ್ರಿಲ್ 1, 2026 ರಿಂದ ಹೊಸ ಕಾಯ್ದೆ ಜಾರಿಗೆ ಬರಲಿದೆ. ಆದಾಯ ತೆರಿಗೆ ರಿಟರ್ನ್ಸ್ ಸೇರಿದಂತೆ ವಿವಿಧ ವ್ಯವಸ್ಥೆಗಳು ಸರಳಗೊಳಿಸುವ ಗುರಿಯನ್ನು ಹೊಸ ಕಾಯ್ದೆ ಹೊಂದಿರಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.
ಈ ಬಾರಿಯ ಬಜೆಟ್ನಲ್ಲಿ ವೈಯಕ್ತಿಕ ಆದಾಯ ತೆರಿಗೆಯ ದರ ಅಥವಾ ಸ್ಲ್ಯಾಬ್ಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇದು ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಆದಾಯ ತೆರಿಗೆ ಸಲ್ಲಿಕೆಯನ್ನು ಸುಲಭಗೊಳಿಸಲು ಸರ್ಕಾರವು ಹಂತ ಹಂತದ ಸಮಯವನ್ನು ನಿಗದಿಪಡಿಸಿದೆ: ವೈಯಕ್ತಿಕ ಸಲ್ಲಿಕೆ (ITR 1 ಮತ್ತು 2) ಗೆ ಜುಲೈ 31ರ ವರೆಗೆ ಕಾಲಾವಕಾಶ ಇರಲಿದೆ.
ಉದ್ಯಮ ಮತ್ತು ಟ್ರಸ್ಟ್ ಐಟಿಆರ್ ಸಲ್ಲಿಸಲು ಆಗಸ್ಟ್ 31ರ ವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ಈ ಮೊದಲು ಡಿಸೆಂಬರ್ 31ಕ್ಕೆ ಇದ್ದ ಕಾಲಾವಕಾಶವನ್ನು ಮಾರ್ಚ್ 31ರ ವರೆಗೆ ಹೆಚ್ಚಿಸಲಾಗಿದೆ (ಅಲ್ಪ ಮೊತ್ತದ ದಂಡದೊಂದಿಗೆ).
ಕಾಯ್ದೆ ಸರಳೀಕರಣ, ವಿವಾದ ಮುಕ್ತಿ
ಹೊಸ ಕಾನೂನಿನಲ್ಲಿ ಸೆಕ್ಷನ್ಗಳ ಸಂಖ್ಯೆಯನ್ನು ಶೇ. 50 ರಷ್ಟು ಕಡಿಮೆ ಮಾಡಲಾಗಿದೆ. ಇದರಿಂದ ಕಾನೂನು ಗೋಜಲುಗಳು ತಪ್ಪಲಿವೆ. ಇನ್ಮುಂದೆ 'Assessment Year' ಮತ್ತು 'Previous Year' ಎಂಬ ಗೊಂದಲ ಇರುವುದಿಲ್ಲ. ಬದಲಾಗಿ ಕೇವಲ 'Tax Year' (ತೆರಿಗೆ ವರ್ಷ) ಎಂಬ ಒಂದೇ ವ್ಯವಸ್ಥೆ ಇರಲಿದೆ.
ನಿಗದಿತ ದಿನಾಂಕದ ನಂತರ ಐಟಿಆರ್ ಸಲ್ಲಿಸಿದರೂ ದಂಡವಿಲ್ಲದೆ ಟಿಡಿಎಸ್ (TDS) ಮರುಪಾವತಿ ಪಡೆಯಲು ಅವಕಾಶ ನೀಡಲಾಗಿದೆ. ಮೋಟಾರು ವಾಹನ ಅಪಘಾತ ವಿಮಾ ನ್ಯಾಯಮಂಡಳಿಯಿಂದ (MACT) ವ್ಯಕ್ತಿಗಳಿಗೆ ಸಿಗುವ ಬಡ್ಡಿಗೆ ತೆರಿಗೆ ಇರುವುದಿಲ್ಲ. ವಿದೇಶಿ ಪ್ರವಾಸ ಪ್ಯಾಕೇಜ್ಗಳು ಹಾಗೂ ವಿದೇಶಿ ಶಿಕ್ಷಣ ಮತ್ತು ವೈದ್ಯಕೀಯ ಚಿಕಿತ್ಸೆಯ ಹಣ ವರ್ಗಾವಣೆ ಮೇಲಿನ ಟಿಸಿಎಸ್ ದರವನ್ನು ಶೇ. 2 ಕ್ಕೆ ಇಳಿಸಲಾಗಿದೆ. 20 ಲಕ್ಷ ರೂ.ಗಿಂತ ಕಡಿಮೆ ಮೊತ್ತದ ವಿದೇಶಿ ಆಸ್ತಿ ಬಹಿರಂಗಪಡಿಸದಿದ್ದಲ್ಲಿ ಅಕ್ಟೋಬರ್ 1, 2024ರಿಂದ ಅನ್ವಯವಾಗುವಂತೆ ಶಿಕ್ಷೆಯಿಂದ ವಿನಾಯಿತಿ ನೀಡಲಾಗಿದೆ.
ಸಣ್ಣಪುಟ್ಟ ತಪ್ಪುಗಳಿಗಾಗಿ ಜೈಲು ಶಿಕ್ಷೆ ವಿಧಿಸುವುದನ್ನು ನಿಲ್ಲಿಸಿ, ಕೇವಲ ದಂಡ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದೆ. ದಾಖಲೆ ಪತ್ರಗಳ ಹಾಜರುಪಡಿಸುವಲ್ಲಿ ವಿಳಂಬ ರೀತಿಯ ಸಣ್ಣ ತಪ್ಪುಗಳನ್ನು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸುವುದಿಲ್ಲ.
The Central government has announced the implementation of the new Income Tax Act, 2025, replacing the six-decade-old Income Tax Act of 1961. The new law will come into effect from April 1, 2026, with the objective of simplifying tax compliance and reducing legal complexities.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm