ಬ್ರೇಕಿಂಗ್ ನ್ಯೂಸ್
04-02-26 03:42 pm HK News Desk ದೇಶ - ವಿದೇಶ
ಚೆನ್ನೈ, ಫೆ.4 : ತಮಿಳುನಾಡು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಫೈರ್ ಬ್ರಾಂಡ್ ಅಣ್ಣಾಮಲೈ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ. ಆರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಯಾಗಿ ಸೀಮಿತಗೊಳಿಸಿದ್ದಕ್ಕೆ ಬೇಸರಗೊಂಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ತಮ್ಮ ತಂದೆಯ ಅನಾರೋಗ್ಯದ ನೆಪವೊಡ್ಡಿ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದು ಅಚ್ಚರಿ ಮೂಡಿಸಿದ್ದಾರೆ.
ವಯೋವೃದ್ಧ ತಂದೆಯ ಆರೈಕೆಗಾಗಿ ಕೊಯಮತ್ತೂರಿನಲ್ಲಿ ಇರಬೇಕಿದ್ದು ಚುನಾವಣಾ ಉಸ್ತುವಾರಿ ಕೆಲಸದ ಜವಾಬ್ದಾರಿ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ. ತಂದೆ ಅಸ್ವಸ್ಥರಾಗಿದ್ದು ಅವರನ್ನು ನೋಡಿಕೊಳ್ಳಬೇಕು. ಚುನಾವಣಾ ಜವಾಬ್ದಾರಿಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೈಕಮಾಂಡ್ಗೆ ತಿಳಿಸಿದ್ದೇನೆ. ತಂದೆಯನ್ನು ನೋಡಿಕೊಳ್ಳುವುದು ನನ್ನ ಮೊದಲ ಆದ್ಯತೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕೇವಲ 6 ಸ್ಥಾನಗಳಿಗೆ ಸೀಮಿತಗೊಳಿಸಿದ್ದಕ್ಕಾಗಿ ಕೇಂದ್ರ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲು ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಬಳಿಕ ಬಿಜೆಪಿಯಲ್ಲಿ ಅವರು ಮೂಲೆಗುಂಪಾಗಿದ್ದರು. ರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿ ನೀಡಲಾಗುವುದೆಂದು ಹೇಳಲಾಗಿದ್ದರೂ ಅದನ್ನೂ ಮಾಡಿಲ್ಲ. ರಾಜ್ಯ ಘಟಕ ಆಯೋಜಿಸುವ ಕಾರ್ಯಕ್ರಮಗಳಿಂದಲೂ ಅಣ್ಣಾಮಲೈ ದೂರ ಉಳಿದಿದ್ದರು. ಬಿಜೆಪಿ ಎಐಎಡಿಎಂಕೆ ಜೊತೆ ವ್ಯವಹರಿಸುತ್ತಿರುವ ರೀತಿ ಬಗ್ಗೆಯೂ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ.
ತಮಿಳುನಾಡು ಬಿಜೆಪಿಯ ಅತ್ಯಂತ ಜನಪ್ರಿಯ ನಾಯಕರಾಗಿರುವ ಅಣ್ಣಾಮಲೈ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ಬಹುತೇಕ ಕಾರ್ಯಕ್ರಮಗಳಲ್ಲಿ ಗಮನ ಸೆಳೆಯುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಎಐಎಡಿಎಂಕೆ ಬಗ್ಗೆ ಬಿಜೆಪಿ ನಾಯಕರು ಮೃದು ಧೋರಣೆ ಹೊಂದಿರುವುದು ಅಣ್ಣಾಮಲೈಗೆ ಸರಿ ಹೊಂದುತ್ತಿಲ್ಲ. ಎರಡೂ ದ್ರಾವಿಡ ಪಕ್ಷಗಳನ್ನ ಎದುರಿಸುತ್ತ ಬಂದಿರುವ ಅಣ್ಣಾಮಲೈ ಈಗ ತಮಗಿಂತ ಹೆಚ್ಚು ಜನಪ್ರಿಯರಾಗುತ್ತಿರುವುದು ಆ ಪಕ್ಷಗಳ ನಾಯಕರನ್ನು ಚಿಂತೆಗೀಡು ಮಾಡಿದೆ. ಎಐಎಡಿಎಂಕೆ ಪಕ್ಷದಲ್ಲಿ ಜನಪ್ರಿಯ ನಾಯಕರು ಇಲ್ಲದೇ ಇರುವುದರಿಂದ ಬಹುಮತ ಬಂದರೆ ಅಣ್ಣಾಮಲೈ ಕೈಮೇಲಾಗುತ್ತದೆಂಬ ಭಾವನೆ ಸ್ಥಳೀಯ ಪಕ್ಷಗಳಲ್ಲಿದೆ.
ತಮಿಳುನಾಡಿನಲ್ಲಿ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಬಹುತೇಕ ಬಿಜೆಪಿ- ಎಐಎಡಿಎಂಕೆ ಮೈತ್ರಿಕೂಟ ಬಹುಮತ ಸಾಧಿಸುವ ಸಾಧ್ಯತೆ ಇದೆ. ಆದರೆ ಎಐಎಡಿಎಂಕೆ ಬೇಡಿಕೆಯಂತೆ ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸಿದ ಅಣ್ಣಾಮಲೈ ಅವರನ್ನೀಗ ಪೂರ್ತಿ ಮೂಲೆಗುಂಪು ಮಾಡಲು ಹುನ್ನಾರ ನಡೆದಿದೆ. ಮೋದಿ- ಷಾ ಜೋಡಿಗೆ ಅಣ್ಣಾಮಲೈ ಪ್ರಭಾವ ತಿಳಿದಿದ್ದರೂ, ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳದೆ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎನ್ನುವ ನೆಲೆಯಲ್ಲಿ ಸ್ಥಳೀಯ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುವ ಸ್ಥಿತಿಯಾಗಿದೆ.
responsibilities, citing his father’s ill health. Reports suggest he was unhappy over being limited to overseeing just six constituencies ahead of the Assembly polls. The development has sparked political debate amid BJP’s alliance with AIADMK.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am