ಬ್ರೇಕಿಂಗ್ ನ್ಯೂಸ್
06-02-26 10:58 pm HK News Desk ದೇಶ - ವಿದೇಶ
ಜೈಪುರ, ಫೆ 06 : ರಾಜಸ್ಥಾನದ ದೇಗಾನ ನಗರದಲ್ಲಿ ಅಪರೂಪದ ಮತ್ತು ಅಚ್ಚರಿಯ ಘಟನೆಯೊಂದು ನಡೆದಿದೆ. ಚಿನ್ನದ ಅಂಗಡಿಯೊಳಗೆ ಹಾರಿಬಂದ ಪಾರಿವಾಳವೊಂದು ತನ್ನ ಕೊಕ್ಕಿನಲ್ಲಿ ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನ ಎತ್ತಿಕೊಂಡು ಹಾರಿಹೋಗಿದ್ದು, ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದೇಗಾನ ನಗರದ ಚಿನ್ನದ ಮಾರುಕಟ್ಟೆಯಲ್ಲಿರುವ ಅಂಗಡಿಯಲ್ಲಿ ಕುಶಲಕರ್ಮಿಗಳು ಚಿನ್ನಾಭರಣ ತಯಾರಿಕೆಯಲ್ಲಿ ತೊಡಗಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅಚಾನಕ್ ಆಗಿ ಅಂಗಡಿಯೊಳಗೆ ಪ್ರವೇಶಿಸಿದ ಪಾರಿವಾಳವು ಸುಮಾರು 1 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ತನ್ನ ಕೊಕ್ಕಿನಲ್ಲಿ ಸಿಕ್ಕಿಸಿಕೊಂಡು ಹೊರಗೆ ಹಾರಿದುದರಿಂದ ಅಂಗಡಿ ಮಾಲೀಕರು ಮತ್ತು ಕಾರ್ಮಿಕರು ಬೆಚ್ಚಿಬಿದ್ದಿದ್ದಾರೆ.
ಕ್ಷಣಾರ್ಧದಲ್ಲಿ ಈ ವಿಷಯ ಇಡೀ ಮಾರುಕಟ್ಟೆಯಲ್ಲೇ ಹರಡಿದ್ದು, ಅಂಗಡಿಯ ಎದುರು ಜನಸ್ತೋಮವೇ ಸೇರಿತು. ಪರಿಸ್ಥಿತಿಯಿಂದ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರು ಪಾರಿವಾಳದ ಚಲನವಲನವನ್ನು ಆತಂಕದಿಂದ ಗಮನಿಸುತ್ತಿದ್ದರು. ಹಾರಿಹೋದ ಪಾರಿವಾಳ ಸಮೀಪದ ಮಾರುಕಟ್ಟೆಯ ಛಾವಣಿಯ ಮೇಲೆ ಕುಳಿತುಕೊಂಡು ದೀರ್ಘ ಸಮಯ ಅಲ್ಲಿಯೇ ಉಳಿದಿದ್ದು, ಕೆಳಗಿದ್ದ ಜನರ ಚಟುವಟಿಕೆಯನ್ನು ಶಾಂತವಾಗಿ ಗಮನಿಸುತ್ತಿದ್ದ ದೃಶ್ಯ ಕಂಡುಬಂತು.
ಅಂಗಡಿ ಮಾಲೀಕರು ಹಾಗೂ ಇತರ ವ್ಯಾಪಾರಿಗಳು ಏನು ಕ್ರಮ ಕೈಗೊಳ್ಳಬೇಕು ಎಂಬ ಗೊಂದಲದಲ್ಲೇ ಕೆಲಕಾಲ ಕಾಲ ಕಳೆಯಬೇಕಾಯಿತು. ಹಲವು ಪ್ರಯತ್ನಗಳು ನಡೆದರೂ ಪಾರಿವಾಳವನ್ನು ಹಿಡಿಯಲು ಯಾರಿಗೂ ಸಾಧ್ಯವಾಗಲಿಲ್ಲ. ಕೊನೆಗೆ ಪಾರಿವಾಳ ಮತ್ತೊಮ್ಮೆ ಹಾರಿದ ವೇಳೆ, ಅದರ ಕೊಕ್ಕಿನಲ್ಲಿ ಇದ್ದ ಚಿನ್ನದ ಸರ ಜಾರಿ ಕೆಳಗೆ ಬಿದ್ದಿದೆ.
ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಸುರಕ್ಷಿತವಾಗಿ ಮರಳಿ ದೊರಕುತ್ತಿದ್ದಂತೆ ಅಂಗಡಿ ಮಾಲೀಕರು ನಿಟ್ಟುಸಿರು ಬಿಟ್ಟಿದ್ದು, ಸ್ಥಳದಲ್ಲಿದ್ದ ಜನರೂ ನಿರಾಳರಾದರು. ಈ ವಿಚಿತ್ರ ಮತ್ತು ಅಪರೂಪದ ಘಟನೆ ಮಾರುಕಟ್ಟೆಯಲ್ಲಿ ಕೆಲಕಾಲ ಚರ್ಚೆಯ ವಿಷಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕವಾಗಿ ವೈರಲ್ ಆಗುತ್ತಿದೆ.
In a bizarre incident in Rajasthan’s Degana town, a pigeon flew into a jewellery shop and picked up a gold chain worth ₹1 lakh in its beak, leaving locals stunned. The bird later dropped the chain from a nearby rooftop, bringing relief to the shop owner. The unusual episode has since gone viral on social media.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am