ಬ್ರೇಕಿಂಗ್ ನ್ಯೂಸ್
07-02-26 10:53 pm HK News Desk ದೇಶ - ವಿದೇಶ
ಮುಂಬೈ, ಫೆ.7: ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಬಿಜೆಪಿ ಸದಸ್ಯೆ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 25 ವರ್ಷಗಳ ಶಿವಸೇನೆ ಅಧಿಪತ್ಯ ಬದಿಗಿಟ್ಟು ಮೊದಲ ಬಾರಿಗೆ ಬಿಜೆಪಿ ಮೇಯರ್ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಘಾಟ್ಕೋಪರ್ ವಾರ್ಡ್ ಕಾರ್ಪೊರೇಟರ್ ಆಗಿರುವ ರಿತು ತಾವ್ಡೆ ಈ ಹಿಂದೆ ಮುಂಬೈ ಪಾಲಿಕೆಯಲ್ಲಿ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಿವಸೇನೆಯ (ಶಿಂಧೆ ಬಣ) ಸಂಜಯ್ ಶಂಕರ್ ಘಾಡಿ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇವರು ವಾರ್ಡ್ ಸಂಖ್ಯೆ 5 ರಿಂದ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು.
ಉಪ ಮೇಯರ್ ಸ್ಥಾನವನ್ನು ಶಿವಸೇನೆ ಶಿಂಧೆ ಬಣವು ತನ್ನ ನಾಲ್ವರು ಕಾರ್ಪೊರೇಟರ್ಗಳಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಸಂಜಯ್ ಘಾಡಿ ಮೊದಲ 15 ತಿಂಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ.
2022ರಲ್ಲಿ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಾಗ, ಮುಂಬೈನಲ್ಲಿ ಏಕನಾಥ್ ಶಿಂಧೆ ಪರವಾಗಿ ನಿಂತ ಪ್ರಮುಖ ನಾಯಕರಲ್ಲಿ ಸಂಜಯ್ ಘಾಡಿ ಒಬ್ಬರಾಗಿದ್ದರು. ಮೈತ್ರಿ ಒಪ್ಪಂದದಂತೆ ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ) ಅಧಿಕಾರ ಹಂಚಿಕೊಂಡಿವೆ.
227 ಸದಸ್ಯ ಬಲದ ಮುಂಬೈ ಪಾಲಿಕೆಗೆ ಜನವರಿ 15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ 89 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಶಿವಸೇನೆ ಶಿಂಧೆ ಬಣವು 29 ಸ್ಥಾನಗಳನ್ನು ಪಡೆದಿದ್ದು ಮೈತ್ರಿಕೂಟ 118 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಪಡೆದಿತ್ತು. 1997ರಿಂದ ನಿರಂತರ ಅಧಿಕಾರದಲ್ಲಿದ್ದ ಶಿವಸೇನೆ 65 ಸ್ಥಾನಗಳನ್ನು ಪಡೆದಿತ್ತು. ಇವರ ಮೈತ್ರಿ ಪಕ್ಷಗಳಾದ ಎಂಎನ್ಎಸ್ 6 ಮತ್ತು ಎನ್ ಸಿಪಿ ಒಂದು ಸ್ಥಾನ ಪಡೆದಿತ್ತು. ಕಾಂಗ್ರೆಸ್ 24, ಎಐಎಂಐಎಂ ಎಂಟು, ಎನ್ ಸಿಪಿ (ಅಜಿತ್ ಬಣ) ಮೂರು ಹಾಗೂ ಸಮಾಜವಾದಿ ಪಾರ್ಟಿ ಎರಡು ಸ್ಥಾನ ಗಳಿಸಿದ್ದವು.
ಬೃಹನ್ಮುಂಬಯಿ ಮಹಾನಗರ ಪಾಲಿಕೆ ದೇಶದ ಶ್ರೀಮಂತ ಪಾಲಿಕೆಗಳಲ್ಲಿ ಒಂದಾಗಿದ್ದು ಏಳು ವರ್ಷಗಳ ಬಳಿಕ ಚುನಾವಣೆ ಆಗಿತ್ತು. 2022ರಲ್ಲಿ ಅವಧಿ ಮುಗಿದ ಬಳಿಕ ಪಾಲಿಕೆಗೆ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಪಾಲಿಕೆಯ 2025-26ರ ಬಜೆಟ್ ಮೊತ್ತ 74 ಸಾವಿರ ಕೋಟಿಯಾಗಿತ್ತು.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm