ಬ್ರೇಕಿಂಗ್ ನ್ಯೂಸ್
07-02-26 10:53 pm HK News Desk ದೇಶ - ವಿದೇಶ
ಮುಂಬೈ, ಫೆ.7: ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಬಿಜೆಪಿ ಸದಸ್ಯೆ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 25 ವರ್ಷಗಳ ಶಿವಸೇನೆ ಅಧಿಪತ್ಯ ಬದಿಗಿಟ್ಟು ಮೊದಲ ಬಾರಿಗೆ ಬಿಜೆಪಿ ಮೇಯರ್ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಘಾಟ್ಕೋಪರ್ ವಾರ್ಡ್ ಕಾರ್ಪೊರೇಟರ್ ಆಗಿರುವ ರಿತು ತಾವ್ಡೆ ಈ ಹಿಂದೆ ಮುಂಬೈ ಪಾಲಿಕೆಯಲ್ಲಿ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಿವಸೇನೆಯ (ಶಿಂಧೆ ಬಣ) ಸಂಜಯ್ ಶಂಕರ್ ಘಾಡಿ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇವರು ವಾರ್ಡ್ ಸಂಖ್ಯೆ 5 ರಿಂದ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು.
ಉಪ ಮೇಯರ್ ಸ್ಥಾನವನ್ನು ಶಿವಸೇನೆ ಶಿಂಧೆ ಬಣವು ತನ್ನ ನಾಲ್ವರು ಕಾರ್ಪೊರೇಟರ್ಗಳಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಸಂಜಯ್ ಘಾಡಿ ಮೊದಲ 15 ತಿಂಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ.
2022ರಲ್ಲಿ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಾಗ, ಮುಂಬೈನಲ್ಲಿ ಏಕನಾಥ್ ಶಿಂಧೆ ಪರವಾಗಿ ನಿಂತ ಪ್ರಮುಖ ನಾಯಕರಲ್ಲಿ ಸಂಜಯ್ ಘಾಡಿ ಒಬ್ಬರಾಗಿದ್ದರು. ಮೈತ್ರಿ ಒಪ್ಪಂದದಂತೆ ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ) ಅಧಿಕಾರ ಹಂಚಿಕೊಂಡಿವೆ.
227 ಸದಸ್ಯ ಬಲದ ಮುಂಬೈ ಪಾಲಿಕೆಗೆ ಜನವರಿ 15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ 89 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಶಿವಸೇನೆ ಶಿಂಧೆ ಬಣವು 29 ಸ್ಥಾನಗಳನ್ನು ಪಡೆದಿದ್ದು ಮೈತ್ರಿಕೂಟ 118 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಪಡೆದಿತ್ತು. 1997ರಿಂದ ನಿರಂತರ ಅಧಿಕಾರದಲ್ಲಿದ್ದ ಶಿವಸೇನೆ 65 ಸ್ಥಾನಗಳನ್ನು ಪಡೆದಿತ್ತು. ಇವರ ಮೈತ್ರಿ ಪಕ್ಷಗಳಾದ ಎಂಎನ್ಎಸ್ 6 ಮತ್ತು ಎನ್ ಸಿಪಿ ಒಂದು ಸ್ಥಾನ ಪಡೆದಿತ್ತು. ಕಾಂಗ್ರೆಸ್ 24, ಎಐಎಂಐಎಂ ಎಂಟು, ಎನ್ ಸಿಪಿ (ಅಜಿತ್ ಬಣ) ಮೂರು ಹಾಗೂ ಸಮಾಜವಾದಿ ಪಾರ್ಟಿ ಎರಡು ಸ್ಥಾನ ಗಳಿಸಿದ್ದವು.
ಬೃಹನ್ಮುಂಬಯಿ ಮಹಾನಗರ ಪಾಲಿಕೆ ದೇಶದ ಶ್ರೀಮಂತ ಪಾಲಿಕೆಗಳಲ್ಲಿ ಒಂದಾಗಿದ್ದು ಏಳು ವರ್ಷಗಳ ಬಳಿಕ ಚುನಾವಣೆ ಆಗಿತ್ತು. 2022ರಲ್ಲಿ ಅವಧಿ ಮುಗಿದ ಬಳಿಕ ಪಾಲಿಕೆಗೆ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಪಾಲಿಕೆಯ 2025-26ರ ಬಜೆಟ್ ಮೊತ್ತ 74 ಸಾವಿರ ಕೋಟಿಯಾಗಿತ್ತು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm