ಬ್ರೇಕಿಂಗ್ ನ್ಯೂಸ್
10-02-26 11:44 am HK News Desk ದೇಶ - ವಿದೇಶ
ನವದೆಹಲಿ, ಫೆ.10 : ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿ ಜೈಲು ಪಾಲಾಗಿದ್ದ ಅಬ್ದುಲ್ ರೆಹಮಾನ್ ಎಂಬ ಕೈದಿಯನ್ನು ಹರ್ಯಾಣದ ಫರೀದಾಬಾದ್ ಜೈಲಿನಲ್ಲಿ ಕಾಶ್ಮೀರ ಮೂಲದ ಸಹ ಕೈದಿಯೊಬ್ಬ ಕೊಲೆ ಮಾಡಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯ ಮಿಲ್ಕಿಪುರ್ ನಿವಾಸಿಯಾಗಿದ್ದ ಅಬ್ದುಲ್ ರೆಹಮಾನ್(20)ನನ್ನು 2025ರ ಮಾರ್ಚ್ 2ರಂದು ಹರಿಯಾಣದ ಫರೀದಾಬಾದ್ ಜಿಲ್ಲೆಯ ಪಾಲಿ ಎಂಬ ಗ್ರಾಮದಲ್ಲಿ ಗುಜರಾತ್ ಎಟಿಎಸ್ ಮತ್ತು ಹರ್ಯಾಣ ಎಸ್ ಟಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿತ್ತು. ಆತನಲ್ಲಿದ್ದ ಎರಡು ಹ್ಯಾಂಡ್ ಗ್ರೆನೇಡ್ ಗಳನ್ನು ಬಾಂಬ್ ಸ್ಕ್ವಾಡ್ ವಶಕ್ಕೆ ಪಡೆದು ನಿಷ್ಕ್ರಿಯಗೊಳಿಸಿತ್ತು. ಆರೋಪಿಯನ್ನು ಬಳಿಕ ಫರೀದಬಾದ್ ಜಿಲ್ಲಾ ಜೈಲಿನಲ್ಲಿ ಇರಿಸಲಾಗಿತ್ತು. ನಕಲಿ ಐಡಿಯೊಂದಿಗೆ ಫರಿದಾಬಾದ್ ಹೊರವಲಯದಲ್ಲಿ ನೆಲೆಸಿದ್ದ ರೆಹಮಾನ್ ತೋರಿಕೆಗೆ ಆಟೋ ಚಾಲಕನಾಗಿದ್ದು ಸ್ಥಳೀಯರೊಂದಿಗೆ ಬೆರೆತು ರಾಮ ಮಂದಿರ ವಿರುದ್ಧ ದಾಳಿಗೆ ಷಡ್ಯಂತ್ರ ನಡೆಸುತ್ತಿದ್ದ ಎಂಬ ಆರೋಪದಲ್ಲಿ ಬಂಧಿಸಲಾಗಿತ್ತು. ಪಾಕಿಸ್ತಾನದ ಐಎಸ್ಐ ಪ್ರೇರಣೆಯಿಂದ ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಎನ್ನಲಾಗಿತ್ತು.
ಭಾನುವಾರ ರಾತ್ರಿ ಜೈಲಿನಲ್ಲಿ ಕೈದಿಗಳ ನಡುವೆ ಜಗಳ ನಡೆದಿತ್ತು. ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆವ ಸಹ ಕೈದಿಯಾಗಿದ್ದ ಅರುಣ್ ಚೌಧರಿ ಎಂಬಾತ, ಮಲಗಿದ್ದ ಅಬ್ದುಲ್ ರೆಹಮಾನ್ ಮೇಲೆ ಚೂಪಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ರೆಹಮಾನ್ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಲ್ಲಿ ಆತ ಮೃತಪಟ್ಟಿದ್ದ. ಆರೋಪಿ ಅರುಣ್ ಚೌಧರಿ ವಿರುದ್ಧ ಕೊಲೆ, ಕೊಲೆಯತ್ನ ಸೇರಿದಂತೆ ಹಲವು ಪ್ರಕರಣಗಳಿದ್ದು 2024ರಲ್ಲಿ ಫರಿದಾಬಾದ್ ಜೈಲಿಗೆ ಸ್ಥಳಾಂತರಿಸಲಾಗಿತ್ತು.
ಆರೋಪಿ ಅರುಣ್ ಚೌಧರಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಉನ್ನತ ಮಟ್ಟದ ತನಿಖೆ ಮತ್ತು ಜೈಲು ಭದ್ರತಾ ವ್ಯವಸ್ಥೆಗಳ ಪರಿಶೀಲನೆಗೆ ಆದೇಶಿಸಲಾಗಿದೆ ಎಂದು ಎಸಿಪಿ ಅಶೋಕ್ ವರ್ಮಾ ತಿಳಿಸಿದ್ದಾರೆ. ಮೂವರು ಕೈದಿಗಳನ್ನು ಒಂದೇ ಸೆಲ್ನಲ್ಲಿ ಇರಿಸಲಾಗಿತ್ತು. ಅರುಣ್ ಚೌಧರಿ, ಅಬ್ದುಲ್ ರೆಹಮಾನ್ ಹಾಗೂ ಶೋಯೆಬ್ ಅವರನ್ನು ಹೆಚ್ಚು ಭದ್ರತೆಯಿರುವ ಸೆಲ್ನಲ್ಲಿ ಇರಿಸಲಾಗಿತ್ತು. ಇವರು ಇಪ್ಪತ್ತು ದಿನಗಳಿಂದ ಒಂದೇ ಸೆಲ್ ನಲ್ಲಿ ಒಟ್ಟಿಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Abdul Rehman (20), arrested in 2025 for allegedly plotting an attack on the Ayodhya Ram Temple, was killed by a fellow inmate inside Faridabad district jail. The accused, identified as Arun Chaudhary, reportedly attacked Rehman with a sharp object during the early hours following a dispute between inmates. Police have registered a murder case and ordered a high-level probe into the incident and jail security arrangements.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am