ಬ್ರೇಕಿಂಗ್ ನ್ಯೂಸ್
11-02-26 04:22 pm HK News Desk ದೇಶ - ವಿದೇಶ
ವಿಶಾಖಪಟ್ಟಣಂ, ಫೆ.11 : ಹಗಲಿನಲ್ಲಿ ನಿಯತ್ತಾಗಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡಿ ರಾತ್ರಿ ವೇಳೆ ಮನೆಗಳಲ್ಲಿ ನುಗ್ಗಿ ಕಳತನ ಮಾಡುತ್ತಿದ್ದ ಹೈದರಾಬಾದ್ ಮೂಲದ ಟೆಕ್ಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಾಕಿನಾಡದ ಅಚ್ಚಿ ಮಹೇಶ್ ರೆಡ್ಡಿ ಅಲಿಯಾಸ್ ಸನ್ನಿ ಬಂಧಿತ ಆರೋಪಿ.
ಈತ ಸುಮಾರು 26 ಮನೆ ಕಳ್ಳತನಗಳಲ್ಲಿ ಭಾಗಿಯಾಗಿದ್ದು , 15 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಚಿನ್ನ, ಬೆಳ್ಳಿ ಮತ್ತು ಇತರ ಕದ್ದ ಮಾಲನ್ನು ವಶಪಡಿಸಿದ್ದೇವೆ ಎಂದು ವಿಶಾಖಪಟ್ಟಣಂ ಉಪ ಪೊಲೀಸ್ ಆಯುಕ್ತೆ ಕೆ. ಲತಾ ಮಾಧುರಿ ತಿಳಿಸಿದ್ದಾರೆ. ತಾಂತ್ರಿಕ ಪುರಾವೆಗಳು ಮತ್ತು ಸಿಸಿಟಿವಿ ವಿಶ್ಲೇಷಣೆಯ ಆಧಾರದ ಮೇಲೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದು, 699 ಗ್ರಾಂ ಚಿನ್ನ, 3.8 ಕೆಜಿ ಬೆಳ್ಳಿ, ಕದ್ದ ಹಣದಿಂದ ಖರೀದಿಸಿದ ಬಿಎಂಡಬ್ಲ್ಯೂ ಕಾರು ಮತ್ತು ಮನೆ ದರೋಡೆಗೆ ಬಳಸುವ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಅಪರಾಧ ಸ್ಥಳದಲ್ಲಿ ಬೆರಳಚ್ಚು ಅಥವಾ ಯಾವುದೇ ಇತರ ಪುರಾವೆಗಳನ್ನು ಬಿಡದಂತೆ ಜಾಣತನದಿಂದ ಕಳ್ಳತನ ಮಾಡುತ್ತಿದ್ದ. ಆರೋಪಿ ಹಗಲಿನ ವೇಳೆಯಲ್ಲಿ ಏರಿಯಾಗಳಿಗೆ ಹೋಗಿ ತಪಾಸಣೆ ನಡೆಸಿ, ರಾತ್ರಿ ಸಮಯದಲ್ಲಿ ಖಾಲಿ ಮನೆಗಳಿಗೆ ನುಗ್ಗುತ್ತಿದ್ದ. ಅಪರಾಧಗಳಿಗೆ ಬಳಸಲಾದ ದ್ವಿಚಕ್ರ ವಾಹನವು ಮಹೇಶ್ ಎಂಬ ವ್ಯಕ್ತಿಗೆ ಸೇರಿದ್ದೆಂದು ಪೊಲೀಸರು ಪತ್ತೆ ಮಾಡಿದ್ದರು.
ಅ.14 ರಂದು ಗಾಜುವಾಕದ ನಿವಾಸಿಯೊಬ್ಬರು ತಮ್ಮ ಕುಟುಂಬ ಸಮೇತ ಹೊರಗೆ ಹೋಗಿದ್ದಾಗ ಅವರ ಮನೆಯಲ್ಲಿ ಕಳತನ ನಡೆದಿತ್ತು. ಈ ಬಗ್ಗೆ ಗಾಜುವಾಕ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಗಾಜುವಾಕ, ಅರಿಲೋವಾ, ಮಲ್ಕಪುರಂ, ಪೆಂಡುರ್ತಿ ಮತ್ತು ದುವ್ವಾಡ ಪ್ರದೇಶಗಳಲ್ಲಿ ಇದೇ ರೀತಿಯ ಕಳ್ಳತನಗಳು ನಡೆದಿದ್ದವು ಎಂದು ಮಾಧುರಿ ಹೇಳಿದರು. ವಿಶಾಖಪಟ್ಟಣ ನಗರ ವ್ಯಾಪ್ತಿಯಲ್ಲಿ 26 ಪ್ರಕರಣಗಳು ದಾಖಲಾಗಿವೆ.
ಕಳವು ಪ್ರಕರಣಗಳಲ್ಲಿ 1 ಕೆಜಿಗೂ ಹೆಚ್ಚು ಚಿನ್ನ, ಸುಮಾರು 6,333 ಗ್ರಾಂ ಬೆಳ್ಳಿ ಮತ್ತು 40,500 ರೂ. ಮೌಲ್ಯದ ನಗದು ಕಳವು ಮಾಡಿದ್ದ ಎಂದು ಅಂದಾಜಿಸಲಾಗಿದೆ.
A Hyderabad-based software engineer, Achhi Mahesh Reddy alias Sunny, has been arrested for allegedly committing 26 house burglaries across Visakhapatnam. Police recovered 699 grams of gold, 3.8 kg of silver, a BMW car purchased using stolen money, and burglary tools. The accused reportedly surveyed neighborhoods during the day and targeted locked homes at night, carefully avoiding fingerprints or evidence. Cases were registered across multiple police station limits in the city.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm