ಬ್ರೇಕಿಂಗ್ ನ್ಯೂಸ್
12-02-26 01:09 pm HK News Desk ದೇಶ - ವಿದೇಶ
ನವದೆಹಲಿ, ಫೆ 11 : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ಮತ್ತೆ ಚುರುಕುಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ. ದೆಹಲಿಯಲ್ಲಿ ಬೀಡುಬಿಟ್ಟು, ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಡಿಕೆ ಶಿವಕುಮಾರ್ ತಮ್ಮ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದರು. ಈ ವೇಳೆ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ. ಬಹುಕಾಲದಿಂದ ಬಾಕಿ ಉಳಿದಿರುವ ಅಧಿಕಾರ ಹಂಚಿಕೆ ಸೂತ್ರ ಕುರಿತಂತೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ತಮ್ಮ ಮನದ ಇಂಗಿತವನ್ನು ಡಿಕೆಶಿ ಹೈಕಮಾಂಡ್ ಮುಂದೆ ಸ್ಪಷ್ಟವಾಗಿ ಮಂಡಿಸಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಸೋನಿಯಾ-ರಾಹುಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ತಮ್ಮ ಮಾತಿನಲ್ಲಿ ನಿಗೂಢತೆಯನ್ನು ಕಾಯ್ದುಕೊಂಡರು. “ದೆಹಲಿಗೆ ಬಂದ ಮೇಲೆ ಎಲ್ಲ ವಿಚಾರಗಳನ್ನೂ ಮಾತನಾಡಬೇಕು, ಅದನ್ನ ಮಾತನಾಡಿದ್ದೀನಿ. ಆದರೆ ಯಾರ್ಯಾರ ಜೊತೆ ಏನು ಮಾತನಾಡಿದೆ ಅಂತ ಬಹಿರಂಗವಾಗಿ ಹೇಳೋಕೆ ಆಗಲ್ಲ. ಒಳಗಿನ ಚರ್ಚೆಯನ್ನು ಹೊರಗೆ ಹೇಳುವುದು ಸರಿಯಲ್ಲ,” ಎಂದರು.
ಮುಂದುವರಿದು ಮಾತನಾಡಿದ ಡಿಕೆಶಿ, “ನಾನು ಇಲ್ಲಿಗೆ ಬಂದಿರೋದು ರಾಜಕಾರಣ ಮಾಡೋಕೆ, ಸುಮ್ಮನೆ ಗಾಳಿ ಕುಡಿಯೋಕೆ ಬಂದಿಲ್ಲ. ವರಿಷ್ಠರ ಬಳಿ ಏನು ಮಾತನಾಡಬೇಕೋ ಅದನ್ನ ಮಾತನಾಡಿದ್ದೀನಿ. ಎಲ್ಲದಕ್ಕೂ ಕಾಲ ಉತ್ತರ ಕೊಡುತ್ತೆ,” ಎಂದು ಹೇಳುವ ಮೂಲಕ ಕುರ್ಚಿ ಕದನದ ಬಗ್ಗೆ ಪರೋಕ್ಷ ಸುಳಿವು ನೀಡಿದರು.
ಡಿಕೆಶಿ ಪ್ರಸ್ತಾಪಕ್ಕೆ ಸೋನಿಯಾ ಮತ್ತು ರಾಹುಲ್ ಗಾಂಧಿ ಏನು ಪ್ರತಿಕ್ರಿಯೆ ನೀಡಿದ್ದಾರೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಸಂದೇಶ ರವಾನೆಯಾಗಿದೆವಾ? ಅಥವಾ ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಲಾಗಿದೆವಾ? ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಡಿಕೆಶಿ ಅವರ “ರಾಜಕಾರಣ ಮಾಡೋಕೆ ಬಂದಿದ್ದೀನಿ” ಎಂಬ ಹೇಳಿಕೆ, ರಾಜ್ಯ ಕಾಂಗ್ರೆಸ್ನಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆಗೆ ಇಂಧನ ತುಂಬಿದಂತಾಗಿದೆ. ದೆಹಲಿ ದರ್ಬಾರಿನ ಈ ಭೇಟಿ ಕರ್ನಾಟಕ ರಾಜಕೀಯಕ್ಕೆ ಯಾವ ದಿಕ್ಕು ತೋರಿಸಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.
Karnataka Deputy CM D.K. Shivakumar’s meeting with Sonia and Rahul Gandhi in Delhi has reignited leadership change buzz in the state Congress. Saying he came “to do politics, not just breathe air,” DKS hinted at key internal discussions, fueling speculation over a possible power shift.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm