ಬ್ರೇಕಿಂಗ್ ನ್ಯೂಸ್
12-02-26 01:40 pm HK News Desk ದೇಶ - ವಿದೇಶ
ನವದೆಹಲಿ, ಫೆ.12 : ಜೂನ್ 2025ರಲ್ಲಿ ಅಹಮದಾಬಾದ್ ಏರ್ಪೋರ್ಟ್ನಿಂದ ಟೇಕಾಫ್ ಆದ ಏರ್ ಇಂಡಿಯಾ ಬೋಯಿಂಗ್ 787 ಡ್ರೀಮ್ ಲೈನರ್ ವಿಮಾನವು ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡಿತ್ತು. ವಿಮಾನ ಹಾಸ್ಟೆಲ್ ಮೇಲೆ ಪತನಗೊಂಡಿದ್ದರಿಂದ ವಿಮಾನ ಪ್ರಯಾಣಿಕರು ಹಾಗೂ ಹಾಸ್ಟೆಲ್ನಲ್ಲಿ ಇರುವ ವಿದ್ಯಾರ್ಥಿಗಳು ಸೇರಿ ಒಟ್ಟು 260 ಜನರ ಜೀವ ಹಾನಿಯಾಗಿತ್ತು. ವಿಮಾನದಲ್ಲಿದ್ದ ಓರ್ವ ಪ್ರಯಾಣಿಕ ಮಾತ್ರ ಪವಾಡ ಸದೃಶ ರೀತಿ ಬದುಕುಳಿದಿದ್ದರು.
ಘಟನೆ ನಡೆದು ಒಂಬತ್ತು ತಿಂಗಳು ಕಳೆದಿದ್ದರೂ ಘಟನೆಗೆ ನಿಖರ ಕಾರಣ ಏನು ಎಂಬುದು ಮಾತ್ರ ತಿಳಿದುಬಂದಿಲ್ಲ. ಇದೀಗ ಭಾರತದ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿ ಮತ್ತು ಇಟಾಲಿಯನ್ ದಿನಪತ್ರಿಕೆ Corriere della Sera ವರದಿ ಅನ್ವಯ, ಈ ಪತನ ತಾಂತ್ರಿಕ ದೋಷದಿಂದ ಉಂಟಾಗಿಲ್ಲ, ಬದಲಾಗಿ ಉದ್ದೇಶಪೂರ್ವಕ ಕೃತ್ಯ ಆಗಿರಬಹುದೆಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
AAIB ವರದಿ ಪೈಲಟ್ಗಳ ಕಾಕ್ಪಿಟ್ ಸಂಭಾಷಣೆಗಳನ್ನು ಒಳಗೊಂಡಿದ್ದು, ಓರ್ವ ಪೈಲಟ್ "ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಾ?" ಎಂದು ಕೇಳಿದರೆ, ಇನ್ನೊಬ್ಬ ಉತ್ತರವಾಗಿ "ನಾನು ಹಾಗೆ ಮಾಡಿಲ್ಲ" ಎಂದು ಪ್ರತಿಕ್ರಿಯಿಸಿದ್ದರು. ಈ ಸಂಭಾಷಣೆಗಳು ಪತನದ ಹಿನ್ನೆಲೆ ಕುರಿತು ಉದ್ದೇಶಪೂರ್ವಕ ಕೃತ್ಯದ ಬಗ್ಗೆ ಅನುಮಾನ ಹುಟ್ಟಿಸಿದೆ.
ವಿಮಾನವು ಇಂಜಿನ್ಗೆ ಇಂಧನ ಪೂರೈಕೆ ಸ್ಥಗಿತಗೊಳ್ಳುವುದರಿಂದ ಪತನಗೊಂಡಿದೆ, ಆದರೆ ಯಾವುದೇ ತಾಂತ್ರಿಕ ದೋಷ ಕಾರಣವಾಗಿಲ್ಲ ಎಂದು ಭಾರತೀಯ ತನಿಖಾಧಿಕಾರಿಗಳು ನಿರ್ಣಯಿಸಿದ್ದಾರೆ. ಭಾರತದ ತಂಡದೊಂದಿಗೆ ಅಮೆರಿಕದ ತಜ್ಞರು ಸಹಾಯ ನೀಡುತ್ತಿದ್ದಾರೆ.
ತನಿಖಾಧಿಕಾರಿಗಳು ಅಂತಿಮ ನಿರ್ಣಯಕ್ಕೆ ಬರಲು ಸಮಯ ಬೇಕಾಗಿದ್ದು, ಈ ಬಗ್ಗೆ ತಜ್ಞರ ಜೊತೆಗೆ ಚರ್ಚೆಗಳು ನಡೆಯುತ್ತಿವೆ. ಪತನದ ವೇಳೆಯ ಕೊನೆಯ ಮಾತುಕತೆಗಳು, ತಾಂತ್ರಿಕ ವೈಫಲ್ಯಗಳು, ಉದ್ದೇಶಪೂರ್ವಕ ಕೃತ್ಯದ ಸಾಧ್ಯತೆ ಕುರಿತಾಗಿ ಅಂತಿಮ ವರದಿಯೊಂದಿಗೆ ಸ್ಪಷ್ಟನೆ ಸಿಗಲಿದೆ.
The 2025 Ahmedabad Air India Dreamliner crash that claimed 260 lives may have been caused by fuel supply being cut off, not a technical failure, according to preliminary findings. Cockpit voice recordings have raised suspicions of possible deliberate action, though investigators say the final conclusion is yet to be made.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm