ಬ್ರೇಕಿಂಗ್ ನ್ಯೂಸ್
15-02-26 04:01 pm HK Desk ದೇಶ - ವಿದೇಶ
ಮಾಸ್ಕೋ, ಫೆ.14: ಮಗನಿಗಾಗಿ ತಂದೆ ಪ್ರೀತಿಯಿಂದ ಬರೋಬ್ಬರಿ 6 ಕೋಟಿ ರೂಪಾಯಿ ಮೌಲ್ಯದ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಕಾರು ಖರೀದಿಸಿದ ಕೆಲವೇ ದಿನದಲ್ಲೇ ಮಗ ದುರಂತ ಅಂತ್ಯ ಕಂಡಿದ್ದ. ಮಗನ ಸಾವಿನ ನೋವಿನಲ್ಲಿ ಆತನಿಗಾಗಿ ತೆಗೆದಿದ್ದ ಕಾರನ್ನು ಉಳಿಸಿಕೊಳ್ಳದೆ ಮಗನ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ್ದಾರೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ತಂದೆ, ತಾಯಿ ಪ್ರೀತಿಯಿಂದಲೇ ಮಗನನ್ನು ಬೆಳೆಸಿದ್ದರು. ಮಗ ಏನು ಕೇಳಿದರೂ ಪೋಷಕರು ಇಲ್ಲ ಎಂದಿರಲಿಲ್ಲ. ಮಗನ ಹುಟ್ಟುಹಬ್ಬಕ್ಕೆ ತಂದೆ ಬರೋಬ್ಬರಿ 6 ಕೋಟಿ ಮೌಲ್ಯದ ಐಷಾರಾಮಿ ಕಾರನ್ನು ಉಡುಗೊರೆ ನೀಡಿದ್ದರು. ಮಗನಿಗೆ ಗೊತ್ತಿಲ್ಲದೆ ಕಾರನ್ನು ಬುಕ್ ಮಾಡಿದ್ದರು. ಹುಟ್ಟುಹಬ್ಬದ ದಿನ ಅಚ್ಚರಿ ನೀಡಿದ್ದರು. ವಿಶೇಷ ಉಡುಗೊರೆ ನೋಡಿ ಮಗನೂ ಸಂಭ್ರಮಿಸಿದ್ದ. ಕಾರಿನಲ್ಲಿ ಪೋಷಕರನ್ನು ಕೂರಿಸಿ ಸುತ್ತಾಡಿದ್ದ.
ಕಾರು ಬಂದ ಕೆಲವೇ ದಿನದಲ್ಲಿ ಮಗ ದುರಂತ ಸಾವು;
ಕಾರು ಮನೆಗೆ ಬಂದ ಕೆಲವೇ ದಿನಗಳಲ್ಲಿ ಮಗ ದುರಂತ ಸಾವು ಕಂಡಿದ್ದಾನೆ. ಮಗನ ಕಳೆದುಕೊಂಡ ಪೋಷಕರು ಗೋಳಾಡಿದ್ದಾರೆ. ಮಗ ಇಲ್ಲದ ಮೇಲೆ ಪ್ರತಿ ದಿನ ಬೆಳಗ್ಗೆ ಆತನ ಕಾರು ನೋಡಿದಾಗ ತಂದೆ ದುಃಖ ಉಮ್ಮಳಿಸಿ ಬರುತ್ತಿತ್ತು. ಮಗನಿಲ್ಲದ ಮೇಲೆ ಆತನಿಗಾಗಿ ಕೊಡಿಸಿದ ಕಾರು ಯಾಕೆ ಎಂದು ತಂದೆ 6 ಕೋಟಿ ರೂಪಾಯಿ ಮೌಲ್ಯದ ಹೊಸ BMW ಕಾರನ್ನು ಸಮಾಧಿ ಮಾಡಲು ಮುಂದಾಗಿದ್ದಾರೆ.
ಮಗನ ಸಮಾಧಿ ಪಕ್ಕದಲ್ಲೇ ಕಾರು ಸಮಾಧಿ
ಹೊಸ BMW ಕಾರನ್ನು ಮಗನ ಸಮಾಧಿ ಪಕ್ಕದಲ್ಲೇ ಸಮಾಧಿ ಮಾಡಿದ್ದಾರೆ. ಸಮಾಧಿ ಸ್ಥಳದಿಂದ ಕಾರನ್ನೂ ಯಾರೂ ಕದಿಯಬಾರದು ಎಂದು ತಂದೆ ಕಾರನ್ನು ಹೂತು ಹಾಕಲು ಜೆಸಿಬಿ ಮೂಲಕ ಗುಂಡಿ ಅಗೆದಿದ್ದಾರೆ. ಬಳಿಕ ಕಾಂಕ್ರೀಟ್ ತಂದು ಕಾರಿನ ಮೇಲೆ ಸುರಿದಿದ್ದಾರೆ. ಸಂಪೂರ್ಣ ಕಾಂಕ್ರೀಟ್ನಿಂದ ಗುಂಡಿಯಲ್ಲಿ ಕಾರನ್ನಿಟ್ಟು ಮುಚ್ಚಲಾಗಿದೆ. ಕೊನೆಯಲ್ಲಿ ಕಾರಿನ ಕೀಯನ್ನು ಅದೇ ಗುಂಡಿಗೆ ಎಸೆದು ಕಾಂಕ್ರೀಟ್ನಿಂದ ಮುಚ್ಚಿ ಮಣ್ಣು ಹಾಕಲಾಗಿದೆ. ಇದರ ವಿಡಿಯೋ ನೋಡಿ ಹಲವರು ಕಣ್ಣೀರು ಹಾಕಿದ್ದಾರೆ.
In a heart-wrenching incident from Moscow, a grieving father buried a luxury BMW car worth nearly ₹6 crore beside his son’s grave after the young man’s untimely death. A video of the emotional act has gone viral on social media.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm