ಬ್ರೇಕಿಂಗ್ ನ್ಯೂಸ್
15-02-26 04:01 pm HK Desk ದೇಶ - ವಿದೇಶ
ಮಾಸ್ಕೋ, ಫೆ.14: ಮಗನಿಗಾಗಿ ತಂದೆ ಪ್ರೀತಿಯಿಂದ ಬರೋಬ್ಬರಿ 6 ಕೋಟಿ ರೂಪಾಯಿ ಮೌಲ್ಯದ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಕಾರು ಖರೀದಿಸಿದ ಕೆಲವೇ ದಿನದಲ್ಲೇ ಮಗ ದುರಂತ ಅಂತ್ಯ ಕಂಡಿದ್ದ. ಮಗನ ಸಾವಿನ ನೋವಿನಲ್ಲಿ ಆತನಿಗಾಗಿ ತೆಗೆದಿದ್ದ ಕಾರನ್ನು ಉಳಿಸಿಕೊಳ್ಳದೆ ಮಗನ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ್ದಾರೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ತಂದೆ, ತಾಯಿ ಪ್ರೀತಿಯಿಂದಲೇ ಮಗನನ್ನು ಬೆಳೆಸಿದ್ದರು. ಮಗ ಏನು ಕೇಳಿದರೂ ಪೋಷಕರು ಇಲ್ಲ ಎಂದಿರಲಿಲ್ಲ. ಮಗನ ಹುಟ್ಟುಹಬ್ಬಕ್ಕೆ ತಂದೆ ಬರೋಬ್ಬರಿ 6 ಕೋಟಿ ಮೌಲ್ಯದ ಐಷಾರಾಮಿ ಕಾರನ್ನು ಉಡುಗೊರೆ ನೀಡಿದ್ದರು. ಮಗನಿಗೆ ಗೊತ್ತಿಲ್ಲದೆ ಕಾರನ್ನು ಬುಕ್ ಮಾಡಿದ್ದರು. ಹುಟ್ಟುಹಬ್ಬದ ದಿನ ಅಚ್ಚರಿ ನೀಡಿದ್ದರು. ವಿಶೇಷ ಉಡುಗೊರೆ ನೋಡಿ ಮಗನೂ ಸಂಭ್ರಮಿಸಿದ್ದ. ಕಾರಿನಲ್ಲಿ ಪೋಷಕರನ್ನು ಕೂರಿಸಿ ಸುತ್ತಾಡಿದ್ದ.
ಕಾರು ಬಂದ ಕೆಲವೇ ದಿನದಲ್ಲಿ ಮಗ ದುರಂತ ಸಾವು;
ಕಾರು ಮನೆಗೆ ಬಂದ ಕೆಲವೇ ದಿನಗಳಲ್ಲಿ ಮಗ ದುರಂತ ಸಾವು ಕಂಡಿದ್ದಾನೆ. ಮಗನ ಕಳೆದುಕೊಂಡ ಪೋಷಕರು ಗೋಳಾಡಿದ್ದಾರೆ. ಮಗ ಇಲ್ಲದ ಮೇಲೆ ಪ್ರತಿ ದಿನ ಬೆಳಗ್ಗೆ ಆತನ ಕಾರು ನೋಡಿದಾಗ ತಂದೆ ದುಃಖ ಉಮ್ಮಳಿಸಿ ಬರುತ್ತಿತ್ತು. ಮಗನಿಲ್ಲದ ಮೇಲೆ ಆತನಿಗಾಗಿ ಕೊಡಿಸಿದ ಕಾರು ಯಾಕೆ ಎಂದು ತಂದೆ 6 ಕೋಟಿ ರೂಪಾಯಿ ಮೌಲ್ಯದ ಹೊಸ BMW ಕಾರನ್ನು ಸಮಾಧಿ ಮಾಡಲು ಮುಂದಾಗಿದ್ದಾರೆ.
ಮಗನ ಸಮಾಧಿ ಪಕ್ಕದಲ್ಲೇ ಕಾರು ಸಮಾಧಿ
ಹೊಸ BMW ಕಾರನ್ನು ಮಗನ ಸಮಾಧಿ ಪಕ್ಕದಲ್ಲೇ ಸಮಾಧಿ ಮಾಡಿದ್ದಾರೆ. ಸಮಾಧಿ ಸ್ಥಳದಿಂದ ಕಾರನ್ನೂ ಯಾರೂ ಕದಿಯಬಾರದು ಎಂದು ತಂದೆ ಕಾರನ್ನು ಹೂತು ಹಾಕಲು ಜೆಸಿಬಿ ಮೂಲಕ ಗುಂಡಿ ಅಗೆದಿದ್ದಾರೆ. ಬಳಿಕ ಕಾಂಕ್ರೀಟ್ ತಂದು ಕಾರಿನ ಮೇಲೆ ಸುರಿದಿದ್ದಾರೆ. ಸಂಪೂರ್ಣ ಕಾಂಕ್ರೀಟ್ನಿಂದ ಗುಂಡಿಯಲ್ಲಿ ಕಾರನ್ನಿಟ್ಟು ಮುಚ್ಚಲಾಗಿದೆ. ಕೊನೆಯಲ್ಲಿ ಕಾರಿನ ಕೀಯನ್ನು ಅದೇ ಗುಂಡಿಗೆ ಎಸೆದು ಕಾಂಕ್ರೀಟ್ನಿಂದ ಮುಚ್ಚಿ ಮಣ್ಣು ಹಾಕಲಾಗಿದೆ. ಇದರ ವಿಡಿಯೋ ನೋಡಿ ಹಲವರು ಕಣ್ಣೀರು ಹಾಕಿದ್ದಾರೆ.
In a heart-wrenching incident from Moscow, a grieving father buried a luxury BMW car worth nearly ₹6 crore beside his son’s grave after the young man’s untimely death. A video of the emotional act has gone viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm