ಬ್ರೇಕಿಂಗ್ ನ್ಯೂಸ್
19-02-26 10:10 pm mangalore ದೇಶ - ವಿದೇಶ
ನವದೆಹಲಿ, ಫೆ.19 ರಾಜಕೀಯದಲ್ಲಿ 'ಉಚಿತ ಕೊಡುಗೆ' (ಫ್ರೀಬೀಸ್) ಸಂಸ್ಕೃತಿ ಹೆಚ್ಚುತ್ತಿರುವುದನ್ನು ಖಂಡಿಸಿದ ಸುಪ್ರೀಂ ಕೋರ್ಟ್, ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುವ ಇಂತಹ ನೀತಿಗಳನ್ನು ರಾಜಕೀಯ ಪಕ್ಷಗಳು ಪುನರ್ವಿಮರ್ಶೆ ಮಾಡಬೇಕು ಎಂದು ಸಲಹೆ ಮಾಡಿದೆ.
ಗ್ರಾಹಕರ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಎಲ್ಲರಿಗೂ ಉಚಿತ ವಿದ್ಯುತ್ ಒದಗಿಸಲು ಮುಂದಾಗಿರುವ ತಮಿಳುನಾಡು ವಿದ್ಯುತ್ ವಿತರಣಾ ನಿಗಮ ಲಿಮಿಟೆಡ್ನ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂ ಪೀಠ, ರಾಜ್ಯಗಳು ಬಡವರನ್ನು ಬೆಂಬಲಿಸುವುದರಲ್ಲಿ ಅರ್ಥವಿದೆ. ಆದರೆ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ವಿದ್ಯುತ್ ನೀಡುತ್ತೇವೆ ಎನ್ನುವುದಕ್ಕೆ ಸಮರ್ಥನೆ ಇಲ್ಲ ಎಂದು ಹೇಳಿದೆ.
"ದೇಶದ ಹೆಚ್ಚಿನ ರಾಜ್ಯಗಳು ಆದಾಯ ಕೊರತೆಯನ್ನು ಎದುರಿಸುತ್ತಿದೆ. ಆದರೂ ಅವು ಅಭಿವೃದ್ಧಿಗೆ ಬದಲಾಗಿ ಉಚಿತ ಕೊಡುಗೆಗಳನ್ನು ನೀಡುತ್ತಿವೆ" ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರನ್ನೊಳಗೊಂಡ ಪೀಠ ಹೇಳಿದೆ. ಈ ರೀತಿಯ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಮತ್ತು ರಾಜ್ಯ ಸರ್ಕಾರಗಳು ಎಲ್ಲರಿಗೂ ಉಚಿತ ಆಹಾರ, ಸೈಕಲ್ಗಳು, ವಿದ್ಯುತ್ ನೀಡುವ ಬದಲು ಉದ್ಯೋಗ ಒದಗಿಸುವ ಮಾರ್ಗಗಳನ್ನು ಹುಡುಕಬೇಕು ಎಂದು ಪೀಠ ಸಲಹೆ ಮಾಡಿದೆ.
ಆದಾಗ್ಯೂ, ಉಚಿತ ವಿದ್ಯುತ್ ಒದಗಿಸಲು ಪ್ರಸ್ತಾಪಿಸಿರುವ ಡಿಎಂಕೆ ಸರ್ಕಾರದ ನೇತೃತ್ವದ ವಿದ್ಯುತ್ ವಿತರಣಾ ಸಂಸ್ಥೆಯ ಮನವಿ ಮೇರೆಗೆ ಸುಪ್ರೀಂ ಕೋರ್ಟ್, ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
"ಭಾರತದಲ್ಲಿ ನಾವು ಯಾವ ರೀತಿಯ ಸಂಸ್ಕೃತಿಯನ್ನು ಬೆಳೆಸುತ್ತಿದ್ದೇವೆ? ಎಂದು ಪ್ರಶ್ನಿಸಿದ ಪೀಠವು, "ರಾಜ್ಯಗಳು ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸಬೇಕು. ನೀವು ಬೆಳಗ್ಗೆಯಿಂದ ಸಂಜೆಯ ವರೆಗೆ ಉಚಿತ ಆಹಾರ, ಉಚಿತ ಸೈಕಲ್, ನಂತರ ಉಚಿತ ವಿದ್ಯುತ್ ನೀಡಲು ಪ್ರಾರಂಭಿಸಿದರೆ ಯಾರು ಕೆಲಸ ಮಾಡುತ್ತಾರೆ ಮತ್ತು ಜನರಲ್ಲಿ ಕೆಲಸ ಮಾಡುವ ಮನೋಭಾವ ಕಡಿಮೆಯಾಗುತ್ತದೆ ಅಲ್ಲವೇ ಎಂದು ಸಿಜೆಐ ಪ್ರಶ್ನಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm