ಬ್ರೇಕಿಂಗ್ ನ್ಯೂಸ್
20-02-26 08:45 pm HK News Desk ದೇಶ - ವಿದೇಶ
ನವದೆಹಲಿ, ಫೆ.20: ರಾಜಧಾನಿ ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ AI ಇಂಪ್ಯಾಕ್ಟ್ - 2026 ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದು ಈ ವೇಳೆ ಅಲ್ಲಿ ಸೇರಿದ್ದ ಸಾರ್ವಜನಿಕರು ಕಾಂಗ್ರೆಸ್ ಕಾರ್ಯಕರ್ತರನ್ನು ಕಾಲಿನಲ್ಲಿ ಒದ್ದು ಹೊರಕ್ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ 19ರಿಂದ 21ರ ವರೆಗೆ AI ಇಂಪ್ಯಾಕ್ಟ್ ಶೃಂಗಸಭೆ ನಡೆಯುತ್ತಿದ್ದು 10 ಮಂದಿಯಷ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ನುಗ್ಗಿ ತಮ್ಮ ಶರ್ಟ್ಗಳನ್ನು ತೆಗೆದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಭಾರತ-ಯುಎಸ್ ಒಪ್ಪಂದದ ಮೂಲಕ ಸರ್ಕಾರವು ರಾಷ್ಟ್ರೀಯ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಘಟನೆಯಿಂದ ಹೌಹಾರಿದ ಅಲ್ಲಿ ಸೇರಿದ್ದ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಲಿನಿಂದ ಒದ್ದು, ಅಟ್ಟಾಟಿಸಿ ಭಾರತ್ ಮಂಟಪದ ಆವರಣದಿಂದ ಹೊರಕ್ಕಟ್ಟಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾರ್ಯಕರ್ತರ ದಿಢೀರ್ ಪ್ರತಿಭಟನೆ ಶೃಂಗಸಭೆಯಲ್ಲಿ ಭದ್ರತಾ ಲೋಪಕ್ಕೂ ಕಾರಣವಾಗಿದೆ. ಪ್ರತಿಭಟನಾಕಾರರು QR-ಕೋಡ್ ಇದ್ದ ಪಾಸ್ಗಳನ್ನು ಪಡೆದು ಒಳಕ್ಕೆ ಪ್ರವೇಶಿಸಿದ್ದಾರೆ ಎಂದು ಹೇಳಲಾಗಿದೆ. ಇದು ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಘಟನೆಗೆ ಸಂಬಂಧಿಸಿ ದೆಹಲಿ ಪೊಲೀಸರು ನಾಲ್ಕು ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ತಿಲಕ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ವೇಳೆ, ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಕಾಂಗ್ರೆಸ್ ಪಾಲಿಗೆ ಎಐ ಸಮಿಟ್ ಅಂದ್ರೆ ಏಂಟಿ ಇಂಡಿಯಾ ಎನ್ನುವಂತಾಗಿದೆ ಎಂದು ಟೀಕೆ ಮಾಡಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm