ಬ್ರೇಕಿಂಗ್ ನ್ಯೂಸ್
21-02-26 05:01 pm HK News Desk ದೇಶ - ವಿದೇಶ
ಅಹ್ಮದಾಬಾದ್, ಫೆ.21: 'ಲವ್ ಜಿಹಾದ್’ ತಡೆಯಲು ಗುಜರಾತ್ ಸರ್ಕಾರ ವಿವಾಹ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದ್ದು, ಪ್ರೇಮ ವಿವಾಹಗಳಿಗೂ ಪೋಷಕರ ಅನುಮತಿ ಕಡ್ಡಾಯ ಎನ್ನುವ ಮಾನದಂಡ ಸೇರಿಸಿದೆ. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.
ಗುಜರಾತ್ ವಿವಾಹ ನೋಂದಣಿ ನಿಯಮಗಳಿಗೆ ತಿದ್ದುಪಡಿ ತರುತ್ತಿದ್ದು, ಇದು ಗೌಪ್ಯತೆ, ಪೋಷಕರ ಒಪ್ಪಿಗೆ ಮತ್ತು ಗುರುತು ಮರೆಮಾಚಿ ವಂಚಿಸುವುದನ್ನು ತಡೆಯುವ ಉದ್ದೇಶ ಹೊಂದಿದೆ. ಪ್ರಸ್ತಾವಿತ ಪ್ರಮಾಣೀಕರಣ ಅವಧಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ 40 ದಿನಗಳಲ್ಲಿ ಗುರುತಿನ ಚೀಟಿ, ಸಾಕ್ಷಿ ಮತ್ತು ನೋಟರಿ ಪರಿಶೀಲನೆ ಮಾಡಲಾಗುತ್ತದೆ. ವಿವಾಹ ನೋಂದಣಿ ಅರ್ಜಿಗಳನ್ನು ಸ್ವೀಕರಿಸಿದ ಹತ್ತು ದಿನಗಳಲ್ಲಿ ಸಹಾಯಕ ನೋಂದಣಾಧಿಕಾರಿ ಸ್ವತಃ ಪೋಷಕರಿಗೆ ಮಾಹಿತಿ ನೀಡಲಿದ್ದಾರೆ. ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲೆ ಅಥವಾ ತಾಲೂಕು ನೋಂದಣಾಧಿಕಾರಿಗೆ ಕಳುಹಿಸಬೇಕು. ಪರಿಶೀಲನೆ ಮತ್ತು ಉಪ-ನಿಯಮಗಳ (1 ರಿಂದ 7) ಅನುಸರಣೆಯನ್ನು ಖಚಿತಪಡಿಸಿದ ನಂತರವೇ ಮದುವೆಯನ್ನು ನೋಂದಣಿ ಮಾಡಲಾಗುತ್ತದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಾಂಘ್ವಿ ವಿವರಿಸಿದ್ದಾರೆ.
ವಿಧಾನಸಭೆಯಲ್ಲಿ ಮಂಡಿಸಲಾದ ಈ ಪ್ರಸ್ತಾವನೆ ಪ್ರಕಾರ, ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಲಿದೆ. ಹೊಸ ನಿಯಮದ ಪ್ರಕಾರ, ವಧು-ವರರು ತಮ್ಮ ಹೆತ್ತವರಿಗೆ ಮದುವೆಯ ಬಗ್ಗೆ ತಿಳಿಸಿರುವುದಾಗಿ ಘೋಷಣೆಯನ್ನು ಸಲ್ಲಿಸಬೇಕಾಗುತ್ತದೆ, ಜೊತೆಗೆ ಅವರ ಪೋಷಕರ ಗುರುತಿನ ಪುರಾವೆ, ಫೋನ್ ನಂಬರ್, ವಸತಿ ಪುರಾವೆಗಳು ಸೇರಿದಂತೆ ಇತರ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪ್ರೇಮ ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿದ ನಂತರ, ಹುಡುಗಿಯ ಪೋಷಕರಿಗೆ ವಾಟ್ಸಾಪ್ ಮೂಲಕ ವಿವರಗಳನ್ನು ನೀಡಲಾಗುತ್ತದೆ. ಆದರೆ ಅರ್ಜಿ ಸಲ್ಲಿಸಿದ 40 ದಿನಗಳ ನಂತರ ವಿವಾಹ ನೋಂದಣಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. 40 ದಿನಗಳ ವಿಳಂಬವು ಬಲವಂತ, ತಪ್ಪು ನಿರೂಪಣೆ ಅಥವಾ ನಕಲಿ ಗುರುತನ್ನು ಪತ್ತೆಹಚ್ಚಲು ಅವಕಾಶ ನೀಡುತ್ತದೆ ಎಂದು ಸರ್ಕಾರ ವಾದಿಸಿದೆ. ಈ ಕ್ರಮವನ್ನು ಸಮರ್ಥಿಸಿಕೊಂಡ ಗೃಹ ಸಚಿವ ಹರ್ಷ ಸಾಂಘ್ವಿ, "ನಾವು ಪ್ರೀತಿಯನ್ನು ವಿರೋಧಿಸುವುದಿಲ್ಲ. ಆದರೆ ಯಾರಾದರೂ 'ಸಲೀಮ್ ಸುರೇಶ್' ಆಗಿ ನಕಲಿ ಗುರುತಿನೊಂದಿಗೆ ಯುವತಿಯನ್ನು ಬಲೆಗೆ ಬೀಳಿಸಲು ಹೋದರೆ, ಅಂತಹ ವಂಚನೆಗೆ ಅವಕಾಶ ನೀಡುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am