ಬ್ರೇಕಿಂಗ್ ನ್ಯೂಸ್
22-02-26 06:19 pm HK News Desk ದೇಶ - ವಿದೇಶ
ನವದೆಹಲಿ, ಫೆ.22: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಪಾಕಿಸ್ತಾನದ ಐಎಸ್ಐ ಹಾಗೂ ಬಾಂಗ್ಲಾದೇಶದ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಎಂಟು ಮಂದಿ ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಮಾಜಘಾತುಕ ಕೆಲಸಗಳನ್ನು ಮಾಡುತ್ತಿದ್ದುದಲ್ಲದೆ, ಉಗ್ರ ಸಂಘಟನೆಗಳನ್ನು ಬೆಂಬಲಿಸುವ 'ಫ್ರೀ ಕಾಶ್ಮೀರ'ದಂತಹ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ, ಇವರ ಬಳಿಯಿದ್ದ 8 ಫೋನ್ ಸೇರಿದಂತೆ 16 ಸಿಮ್ ಗಳನ್ನು ವಶಪಡಿಸಿದ್ದಾರೆ.
ತಮಿಳುನಾಡಿನಲ್ಲಿ ಆರು ಮಂದಿ ಹಾಗು ಇಬ್ಬರು ಪಶ್ಚಿಮ ಬಂಗಾಳದಲ್ಲಿ ಬಂಧನಕ್ಕೀಡಾಗಿದ್ದಾರೆ. ಆರು ಮಂದಿ ಶಂಕಿತ ಉಗ್ರರು ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಬಂಧಿತರನ್ನು ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿತನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂದು ಗುರುತಿಸಲಾಗಿದೆ.
ಉಳಿದ ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಇವರಲ್ಲಿ ಕೆಲವರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ತಮ್ಮ ಗುರುತನ್ನು ಮರೆಮಾಚಲು ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸುತ್ತಿದ್ದರು ಎಂದು ತಿಳಿದುಬಂದಿದೆ. ಇವರು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳನ್ನು ಬೆಂಬಲಿಸುವಂತಹ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕುತ್ತಿದ್ದರು ಎಂಬ ವಿಚಾರ ತಿಳಿದುಬಂದಿದೆ. ಇವರ ಬಳಿ ಇದ್ದ 8 ಫೋನ್ ಗಳನ್ನು ಹಾಗೂ 16 ಸಿಮ್ ಕಾರ್ಡ್ ಗಳನ್ನು ವಶ ಪಡಿಸಲಾಗಿದೆ ಎಂದು ದೆಹಲಿಯ ವಿಶೇಷ ಘಟಕ ತಿಳಿಸಿದೆ.
ದೇಶದ ವಿವಿಧ ಕಡೆಗಳಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಇವರು ನೆಟ್ ವರ್ಕ್ ಮಾಡುತ್ತಿದ್ದರು. ಇತ್ತೀಚೆಗೆ ದೆಹಲಿ ಮೆಟ್ರೋ ಸೇರಿದಂತೆ ರಾಷ್ಟ್ರ ರಾಜಧಾನಿಯ ಹಲವೆಡೆ ಪ್ರಚೋದನಕಾರಿ ಪೋಸ್ಟರ್ ಕಾಣಿಸಿಕೊಂಡ ನಂತರ ಈ ಜಾಲದ ಮಾಹಿತಿ ಸಿಕ್ಕಿತ್ತು. ಇವರು ʼಫ್ರೀ ಕಾಶ್ಮೀರʼ ಪೋಸ್ಟ್ ಗಳನ್ನು ಹಂಚಿಕೊಂಡಿದ್ದನ್ನು ಪೊಲೀಸರು ಪತ್ತೆ ಮಾಡಿದ್ದರು. ಹೆಚ್ಚಿನ ತನಿಖೆ ನಡೆಯಲಿದ್ದು, ಇವರೊಂದಿಗೆ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ಪತ್ತೆಹಚ್ಚುವುದು, ಇವರಿಗೆ ದೊರಕುತ್ತಿದ್ದ ಆರ್ಥಿಕ ಸಹಾಯ ಹಾಗೂ ಸಂಪರ್ಕಗಳು ಎಲ್ಲಿಯವು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am