ಬ್ರೇಕಿಂಗ್ ನ್ಯೂಸ್
23-02-26 04:45 pm HK News Desk ದೇಶ - ವಿದೇಶ
ಕಠ್ಮಂಡು, ಫೆ 23: ನೇಪಾಳದ ರಾಜಧಾನಿ ಸುಮಾರು 90 ಕಿಲೋಮೀಟರ್ ದೂರದಲ್ಲಿರುವ ದಾಡಿಂಗ್ ಜಿಲ್ಲೆಯ ಗಜುರಿ ಬಳಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಪ್ರಯಾಣಿಕ ಬಸ್ ಇಂದು ಬೆಳಗಿನ ಜಾವ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ ಬಸ್ನಲ್ಲಿದ್ದ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 26ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಜುರಿ ಸಮೀಪದ ಭೈಸೆಪತಿ ಪ್ರದೇಶದ ಬಳಿ ಬಸ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿದೆ. ವಾಹನವು ರಸ್ತೆ ಬದಿಯಿಂದ ಜಾರಿ ಸುಮಾರು 300 ಮೀಟರ್ ಇಳಿಜಾರಿನಲ್ಲಿ ಉರುಳಿ ತ್ರಿಶೂಲಿ ನದಿ ದಡದಲ್ಲಿ ಬಿದ್ದಿದೆ. ಅಪಘಾತದಿಂದ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆಯ ಕುರಿತು ಮಾಹಿತಿ ನೀಡಿದ ನೇಪಾಳ ಸಶಸ್ತ್ರ ಪೊಲೀಸ್ ಪಡೆ ವಕ್ತಾರ ಬಿಷ್ಣು ಪ್ರಸಾದ್ ಭಟ್ಟ, ಸ್ಥಳದಿಂದ 18 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬಸ್ನಿಂದ 28 ಗಾಯಾಳು ಪ್ರಯಾಣಿಕರನ್ನು ರಕ್ಷಿಸಲಾಗಿದ್ದು. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ನೇಪಾಳ ಸೇನೆ ಮತ್ತು ಸ್ಥಳೀಯ ಪೊಲೀಸ್ ಪಡೆಗಳು ಪಾಲ್ಗೊಂಡಿವೆ ಎಂದಿದ್ದಾರೆ.
ಅಪಘಾತದಲ್ಲಿ ನ್ಯೂಜಿಲೆಂಡ್ನ ಪುರುಷ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರಲ್ಲಿ ಜಪಾನ್ನ ಮಹಿಳೆ ಹಾಗೂ ನೆದರ್ಲ್ಯಾಂಡ್ಸ್ನ ಪ್ರಜೆ ಸೇರಿದ್ದಾರೆ. ಬಸ್ನಲ್ಲಿ ಸುಮಾರು 40 ರಿಂದ 45 ಪ್ರಯಾಣಿಕರು ಇದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಅಪಘಾತಕ್ಕೆ ನಿಖರ ಕಾರಣ ಇನ್ನೂ ದೃಢವಾಗಿಲ್ಲ. ಆದರೆ ಚಾಲಕನ ಅತಿವೇಗದ ಚಾಲನೆ ಅಥವಾ ರಸ್ತೆ ಪರಿಸ್ಥಿತಿ ಕಳಪೆಯಾಗಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬಸ್ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ.
ರಾತ್ರಿಯ ಸಮಯದಲ್ಲಿ ಅಪಘಾತ ಸಂಭವಿಸಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ಸವಾಲು ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಸಮಗ್ರ ತನಿಖೆ ಮುಂದುವರಿದಿದೆ. ಈ ದುರಂತವು ನೇಪಾಳದಲ್ಲಿ ಮತ್ತೆ ರಸ್ತೆ ಸುರಕ್ಷತೆ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm