ಬ್ರೇಕಿಂಗ್ ನ್ಯೂಸ್
23-02-26 06:57 pm HK News Desk ದೇಶ - ವಿದೇಶ
ಜೈಪುರ, ಫೆ.23: ರಾಜಸ್ಥಾನದಲ್ಲಿ ಕಂಬಳಿ ವಿತರಣೆ ಕಾರ್ಯಕ್ರಮದ ವೇಳೆ ಮುಸ್ಲಿಂ ಮಹಿಳೆಗೆ ಕಂಬಳಿ ನೀಡಲು ನಿರಾಕರಿಸಿರುವ ಬಿಜೆಪಿ ಸಂಸದನ ನಡೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಘಟನೆಗೆ ಸಂಬಂಧಿಸಿ ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಮಾಜಿ ಬಿಜೆಪಿ ಸಂಸದ ಸುಖಬೀರ್ ಸಿಂಗ್ ಜೌನಪುರಿಯಾ ವಿರುದ್ಧ ಮುಸ್ಲಿಂ ಮಹಿಳೆ ಬಗ್ಗೆ ತಾರತಮ್ಯದ ಆರೋಪ ಕೇಳಿಬಂದಿದೆ.
ಫೆಬ್ರವರಿ 22 ರಂದು ನಿವಾಯ್ ತಹಸಿಲಿನ ಕರೇರಾ ಗ್ರಾಮದಲ್ಲಿ ಕಂಬಳಿ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು. 2014 ರಿಂದ 2024ರ ವರೆಗೆ ಸಂಸದರಾಗಿದ್ದ ಸುಖಬೀರ್ ಸಿಂಗ್ ಜೌನಪುರಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಿಳೆಯರಿಗೆ ಕಂಬಳಿಗಳನ್ನು ವಿತರಿಸುತ್ತಿದ್ದರು.
ಈ ಸಂದರ್ಭದಲ್ಲಿ ಒಬ್ಬ ಮಹಿಳೆ ಕಂಬಳಿ ಸ್ವೀಕರಿಸಲು ಬಂದಿದ್ದು ಆಕೆಯದ್ದು ಮುಸ್ಲಿಂ ಹೆಸರು ಎಂದು ತಿಳಿಯುತ್ತಲೇ ಸುಖಬೀರ್ ಸಿಂಗ್, “ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸುವವರಿಗೆ ಕಂಬಳಿ ತೆಗೆದುಕೊಳ್ಳುವ ಹಕ್ಕಿಲ್ಲ. ನಿಮಗಿದು ಕೆಟ್ಟದು ಅಂತನಿಸಿದರೆ ನನಗೇನೂ ಮಾಡಲಾಗದು" ಎಂದು ಹೇಳಿ ಕಂಬಳಿಯನ್ನು ನೀಡಲು ನಿರಾಕರಿಸಿದ ವಿಡಿಯೋ ವೈರಲ್ ಆಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಕಾಂಗ್ರೆಸ್ ಸಂಸದ ಹರೀಶ್ ಚಂದ್ರ ಮೀನಾ ಈ ವೀಡಿಯೋವನ್ನು ಹಂಚಿಕೊಂಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಂಗ್ ಅವರ ನಡವಳಿಕೆ ದೇಶದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಟಿಕಾರಂ ಜೂಲಿ ಕೂಡ ಘಟನೆಯನ್ನು ತಾರತಮ್ಯದ ನಡವಳಿಕೆ ಎಂದು ಟೀಕಿಸಿದ್ದು ಜನಪ್ರತಿನಿಧಿಯೊಬ್ಬರು ಈ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.
ವಿವಾದ ತೀವ್ರಗೊಂಡ ನಂತರ ಸುಖಬೀರ್ ಸಿಂಗ್ ಜೌನಪುರಿಯಾ ಸ್ಪಷ್ಟನೆ ನೀಡಿದ್ದು, ಕಂಬಳಿ ವಿತರಣೆ ಸಂಪೂರ್ಣ ತಮ್ಮ ವೈಯಕ್ತಿಕ ಕಾರ್ಯಕ್ರಮವಾಗಿದ್ದು ಯಾವುದೇ ಸರ್ಕಾರಿ ಯೋಜನೆ ಅಥವಾ ಸಾರ್ವಜನಿಕ ಹಣವನ್ನು ಬಳಸಲಾಗಿಲ್ಲ ಎಂದು ತಿಳಿಸಿದ್ದಾರೆ. ತಾವು ಯಾರ ಮೇಲೂ ತಾರತಮ್ಯ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm