ಬ್ರೇಕಿಂಗ್ ನ್ಯೂಸ್
23-02-26 06:57 pm HK News Desk ದೇಶ - ವಿದೇಶ
ಜೈಪುರ, ಫೆ.23: ರಾಜಸ್ಥಾನದಲ್ಲಿ ಕಂಬಳಿ ವಿತರಣೆ ಕಾರ್ಯಕ್ರಮದ ವೇಳೆ ಮುಸ್ಲಿಂ ಮಹಿಳೆಗೆ ಕಂಬಳಿ ನೀಡಲು ನಿರಾಕರಿಸಿರುವ ಬಿಜೆಪಿ ಸಂಸದನ ನಡೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಘಟನೆಗೆ ಸಂಬಂಧಿಸಿ ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಮಾಜಿ ಬಿಜೆಪಿ ಸಂಸದ ಸುಖಬೀರ್ ಸಿಂಗ್ ಜೌನಪುರಿಯಾ ವಿರುದ್ಧ ಮುಸ್ಲಿಂ ಮಹಿಳೆ ಬಗ್ಗೆ ತಾರತಮ್ಯದ ಆರೋಪ ಕೇಳಿಬಂದಿದೆ.
ಫೆಬ್ರವರಿ 22 ರಂದು ನಿವಾಯ್ ತಹಸಿಲಿನ ಕರೇರಾ ಗ್ರಾಮದಲ್ಲಿ ಕಂಬಳಿ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು. 2014 ರಿಂದ 2024ರ ವರೆಗೆ ಸಂಸದರಾಗಿದ್ದ ಸುಖಬೀರ್ ಸಿಂಗ್ ಜೌನಪುರಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಿಳೆಯರಿಗೆ ಕಂಬಳಿಗಳನ್ನು ವಿತರಿಸುತ್ತಿದ್ದರು.
ಈ ಸಂದರ್ಭದಲ್ಲಿ ಒಬ್ಬ ಮಹಿಳೆ ಕಂಬಳಿ ಸ್ವೀಕರಿಸಲು ಬಂದಿದ್ದು ಆಕೆಯದ್ದು ಮುಸ್ಲಿಂ ಹೆಸರು ಎಂದು ತಿಳಿಯುತ್ತಲೇ ಸುಖಬೀರ್ ಸಿಂಗ್, “ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸುವವರಿಗೆ ಕಂಬಳಿ ತೆಗೆದುಕೊಳ್ಳುವ ಹಕ್ಕಿಲ್ಲ. ನಿಮಗಿದು ಕೆಟ್ಟದು ಅಂತನಿಸಿದರೆ ನನಗೇನೂ ಮಾಡಲಾಗದು" ಎಂದು ಹೇಳಿ ಕಂಬಳಿಯನ್ನು ನೀಡಲು ನಿರಾಕರಿಸಿದ ವಿಡಿಯೋ ವೈರಲ್ ಆಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಕಾಂಗ್ರೆಸ್ ಸಂಸದ ಹರೀಶ್ ಚಂದ್ರ ಮೀನಾ ಈ ವೀಡಿಯೋವನ್ನು ಹಂಚಿಕೊಂಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಂಗ್ ಅವರ ನಡವಳಿಕೆ ದೇಶದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಟಿಕಾರಂ ಜೂಲಿ ಕೂಡ ಘಟನೆಯನ್ನು ತಾರತಮ್ಯದ ನಡವಳಿಕೆ ಎಂದು ಟೀಕಿಸಿದ್ದು ಜನಪ್ರತಿನಿಧಿಯೊಬ್ಬರು ಈ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.
ವಿವಾದ ತೀವ್ರಗೊಂಡ ನಂತರ ಸುಖಬೀರ್ ಸಿಂಗ್ ಜೌನಪುರಿಯಾ ಸ್ಪಷ್ಟನೆ ನೀಡಿದ್ದು, ಕಂಬಳಿ ವಿತರಣೆ ಸಂಪೂರ್ಣ ತಮ್ಮ ವೈಯಕ್ತಿಕ ಕಾರ್ಯಕ್ರಮವಾಗಿದ್ದು ಯಾವುದೇ ಸರ್ಕಾರಿ ಯೋಜನೆ ಅಥವಾ ಸಾರ್ವಜನಿಕ ಹಣವನ್ನು ಬಳಸಲಾಗಿಲ್ಲ ಎಂದು ತಿಳಿಸಿದ್ದಾರೆ. ತಾವು ಯಾರ ಮೇಲೂ ತಾರತಮ್ಯ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm