ಬ್ರೇಕಿಂಗ್ ನ್ಯೂಸ್
23-02-26 06:57 pm HK News Desk ದೇಶ - ವಿದೇಶ
ಜೈಪುರ, ಫೆ.23: ರಾಜಸ್ಥಾನದಲ್ಲಿ ಕಂಬಳಿ ವಿತರಣೆ ಕಾರ್ಯಕ್ರಮದ ವೇಳೆ ಮುಸ್ಲಿಂ ಮಹಿಳೆಗೆ ಕಂಬಳಿ ನೀಡಲು ನಿರಾಕರಿಸಿರುವ ಬಿಜೆಪಿ ಸಂಸದನ ನಡೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಘಟನೆಗೆ ಸಂಬಂಧಿಸಿ ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಮಾಜಿ ಬಿಜೆಪಿ ಸಂಸದ ಸುಖಬೀರ್ ಸಿಂಗ್ ಜೌನಪುರಿಯಾ ವಿರುದ್ಧ ಮುಸ್ಲಿಂ ಮಹಿಳೆ ಬಗ್ಗೆ ತಾರತಮ್ಯದ ಆರೋಪ ಕೇಳಿಬಂದಿದೆ.
ಫೆಬ್ರವರಿ 22 ರಂದು ನಿವಾಯ್ ತಹಸಿಲಿನ ಕರೇರಾ ಗ್ರಾಮದಲ್ಲಿ ಕಂಬಳಿ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು. 2014 ರಿಂದ 2024ರ ವರೆಗೆ ಸಂಸದರಾಗಿದ್ದ ಸುಖಬೀರ್ ಸಿಂಗ್ ಜೌನಪುರಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಿಳೆಯರಿಗೆ ಕಂಬಳಿಗಳನ್ನು ವಿತರಿಸುತ್ತಿದ್ದರು.
ಈ ಸಂದರ್ಭದಲ್ಲಿ ಒಬ್ಬ ಮಹಿಳೆ ಕಂಬಳಿ ಸ್ವೀಕರಿಸಲು ಬಂದಿದ್ದು ಆಕೆಯದ್ದು ಮುಸ್ಲಿಂ ಹೆಸರು ಎಂದು ತಿಳಿಯುತ್ತಲೇ ಸುಖಬೀರ್ ಸಿಂಗ್, “ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸುವವರಿಗೆ ಕಂಬಳಿ ತೆಗೆದುಕೊಳ್ಳುವ ಹಕ್ಕಿಲ್ಲ. ನಿಮಗಿದು ಕೆಟ್ಟದು ಅಂತನಿಸಿದರೆ ನನಗೇನೂ ಮಾಡಲಾಗದು" ಎಂದು ಹೇಳಿ ಕಂಬಳಿಯನ್ನು ನೀಡಲು ನಿರಾಕರಿಸಿದ ವಿಡಿಯೋ ವೈರಲ್ ಆಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಕಾಂಗ್ರೆಸ್ ಸಂಸದ ಹರೀಶ್ ಚಂದ್ರ ಮೀನಾ ಈ ವೀಡಿಯೋವನ್ನು ಹಂಚಿಕೊಂಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಂಗ್ ಅವರ ನಡವಳಿಕೆ ದೇಶದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಟಿಕಾರಂ ಜೂಲಿ ಕೂಡ ಘಟನೆಯನ್ನು ತಾರತಮ್ಯದ ನಡವಳಿಕೆ ಎಂದು ಟೀಕಿಸಿದ್ದು ಜನಪ್ರತಿನಿಧಿಯೊಬ್ಬರು ಈ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.
ವಿವಾದ ತೀವ್ರಗೊಂಡ ನಂತರ ಸುಖಬೀರ್ ಸಿಂಗ್ ಜೌನಪುರಿಯಾ ಸ್ಪಷ್ಟನೆ ನೀಡಿದ್ದು, ಕಂಬಳಿ ವಿತರಣೆ ಸಂಪೂರ್ಣ ತಮ್ಮ ವೈಯಕ್ತಿಕ ಕಾರ್ಯಕ್ರಮವಾಗಿದ್ದು ಯಾವುದೇ ಸರ್ಕಾರಿ ಯೋಜನೆ ಅಥವಾ ಸಾರ್ವಜನಿಕ ಹಣವನ್ನು ಬಳಸಲಾಗಿಲ್ಲ ಎಂದು ತಿಳಿಸಿದ್ದಾರೆ. ತಾವು ಯಾರ ಮೇಲೂ ತಾರತಮ್ಯ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm