ಬ್ರೇಕಿಂಗ್ ನ್ಯೂಸ್
24-02-26 01:21 pm HK News Desk ದೇಶ - ವಿದೇಶ
ಟೆಹ್ರಾನ್, ಫೆ.24: ಇರಾನ್ನಲ್ಲಿ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಅಮೆರಿಕ ದಾಳಿ ಭೀತಿಯಲ್ಲಿ ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ನಿಗೂಢ ಸ್ಥಳಕ್ಕೆ ತೆರಳಿ ಅಡಗಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ರಾಯಭಾರ ಕಚೇರಿ, ಭಾರತೀಯ ಪ್ರಜೆಗಳನ್ನು ಕೂಡಲೇ ದೇಶ ತೊರೆಯುವಂತೆ ಸೂಚನೆ ನೀಡಿದೆ. ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು ಲಭ್ಯವಿರುವ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ.
ಇರಾನ್ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟು ಭಾರತ ಸರ್ಕಾರ ಜ.5 ರಂದು ಇದೇ ರೀತಿಯ ಸಲಹೆಗಳನ್ನು ನೀಡಿತ್ತು. ಈಗ ಮತ್ತೆ ಅದೇ ರೀತಿಯ ವಾತಾವರಣ ಎದುರಾಗಿದ್ದು ಎಲ್ಲಾ ಭಾರತೀಯ ಮೂಲದವರು ಎಚ್ಚರಿಕೆ ವಹಿಸಬೇಕು. ಪ್ರತಿಭಟನೆಗಳು ನಡೆಯುವ ಸ್ಥಳಗಳಿಂದ ದೂರವಿರಬೇಕು, ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕೆಂದು ಸೂಚಿಸಿದೆ.
ಅಲ್ಲದೇ ಬೆಳವಣಿಗೆ ತಿಳಿಯಲು ಸ್ಥಳೀಯ ಮಾಧ್ಯಮಗಳ ಮೇಲೆ ಗಮನ ಹರಿಸಿ. ಯಾವುದೇ ಕ್ಷಣದಲ್ಲೂ ನಿಮ್ಮ ಪಾಸ್ಪೋರ್ಟ್, ಇತರ ಪ್ರಯಾಣ ದಾಖಲೆಗಳನ್ನ ಸಿದ್ಧವಾಗಿಟ್ಟುಕೊಳ್ಳಿ. ರಾಯಭಾರ ಕಚೇರಿಯಲ್ಲಿ ನೋಂದಾಯಿಸದವರು ಆನ್ಲೈನ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.
ಪ್ರತಿಭಟನೆಗಳು ನಡೆಯುತ್ತಿರುವ ಕಾರಣ, ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಅಂತಹ ಪ್ರದೇಶಗಳಲ್ಲಿ ಭಾರತೀಯರು ಸಿಲುಕಿದ್ದರೆ, ಅವರ ಪರವಾಗಿ ಭಾರತದ ಕುಟುಂಬಗಳು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಅದಕ್ಕಾಗಿ ತುರ್ತು ಸಹಾಯವಾಣಿ ಸಂಖ್ಯೆಯನ್ನ ಬಿಡುಗಡೆಗೊಳಿಸಲಾಗಿದೆ.
ತುರ್ತು ಸಂಪರ್ಕ ಸಹಾಯವಾಣಿ ಸಂಖ್ಯೆ
ಇದೇ ವೇಳೆ, ಅಮೆರಿಕ ಪ್ರತಿನಿಧಿಗಳು ಇರಾನ್ ಜೊತೆಗೆ ನ್ಯೂಕ್ಲಿಯರ್ ಒಪ್ಪಂದ ವಿಚಾರದಲ್ಲಿ ಒತ್ತಡ ಹೇರುತ್ತಿದ್ದಾರೆ. ಇರಾನ್ ನ್ಯೂಕ್ಲಿಯರ್ ವಿಚಾರದಲ್ಲಿ ಬಗ್ಗದಿದ್ದರೆ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಇದಕ್ಕಾಗಿ ಮಧ್ಯ ಪ್ರಾಚ್ಯದ ಸೇನಾ ನೆಲೆಗಳಲ್ಲಿ ಯುದ್ಧ ವಿಮಾನಗಳನ್ನು, ಮಿಲಿಟರಿಯನ್ನು ಸಜ್ಜುಗೊಳಿಸಿದೆ. ಯಾವುದೇ ಕ್ಷಣದಲ್ಲಿ ದಾಳಿ ಆಗಬಹುದೆಂದು ಎಚ್ಚರಿಕೆ ರವಾನಿಸಿದೆ.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm