ಬ್ರೇಕಿಂಗ್ ನ್ಯೂಸ್
24-02-26 01:21 pm HK News Desk ದೇಶ - ವಿದೇಶ
ಟೆಹ್ರಾನ್, ಫೆ.24: ಇರಾನ್ನಲ್ಲಿ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಅಮೆರಿಕ ದಾಳಿ ಭೀತಿಯಲ್ಲಿ ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ನಿಗೂಢ ಸ್ಥಳಕ್ಕೆ ತೆರಳಿ ಅಡಗಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ರಾಯಭಾರ ಕಚೇರಿ, ಭಾರತೀಯ ಪ್ರಜೆಗಳನ್ನು ಕೂಡಲೇ ದೇಶ ತೊರೆಯುವಂತೆ ಸೂಚನೆ ನೀಡಿದೆ. ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು ಲಭ್ಯವಿರುವ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ.
ಇರಾನ್ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟು ಭಾರತ ಸರ್ಕಾರ ಜ.5 ರಂದು ಇದೇ ರೀತಿಯ ಸಲಹೆಗಳನ್ನು ನೀಡಿತ್ತು. ಈಗ ಮತ್ತೆ ಅದೇ ರೀತಿಯ ವಾತಾವರಣ ಎದುರಾಗಿದ್ದು ಎಲ್ಲಾ ಭಾರತೀಯ ಮೂಲದವರು ಎಚ್ಚರಿಕೆ ವಹಿಸಬೇಕು. ಪ್ರತಿಭಟನೆಗಳು ನಡೆಯುವ ಸ್ಥಳಗಳಿಂದ ದೂರವಿರಬೇಕು, ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕೆಂದು ಸೂಚಿಸಿದೆ.
ಅಲ್ಲದೇ ಬೆಳವಣಿಗೆ ತಿಳಿಯಲು ಸ್ಥಳೀಯ ಮಾಧ್ಯಮಗಳ ಮೇಲೆ ಗಮನ ಹರಿಸಿ. ಯಾವುದೇ ಕ್ಷಣದಲ್ಲೂ ನಿಮ್ಮ ಪಾಸ್ಪೋರ್ಟ್, ಇತರ ಪ್ರಯಾಣ ದಾಖಲೆಗಳನ್ನ ಸಿದ್ಧವಾಗಿಟ್ಟುಕೊಳ್ಳಿ. ರಾಯಭಾರ ಕಚೇರಿಯಲ್ಲಿ ನೋಂದಾಯಿಸದವರು ಆನ್ಲೈನ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.
ಪ್ರತಿಭಟನೆಗಳು ನಡೆಯುತ್ತಿರುವ ಕಾರಣ, ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಅಂತಹ ಪ್ರದೇಶಗಳಲ್ಲಿ ಭಾರತೀಯರು ಸಿಲುಕಿದ್ದರೆ, ಅವರ ಪರವಾಗಿ ಭಾರತದ ಕುಟುಂಬಗಳು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಅದಕ್ಕಾಗಿ ತುರ್ತು ಸಹಾಯವಾಣಿ ಸಂಖ್ಯೆಯನ್ನ ಬಿಡುಗಡೆಗೊಳಿಸಲಾಗಿದೆ.
ತುರ್ತು ಸಂಪರ್ಕ ಸಹಾಯವಾಣಿ ಸಂಖ್ಯೆ
ಇದೇ ವೇಳೆ, ಅಮೆರಿಕ ಪ್ರತಿನಿಧಿಗಳು ಇರಾನ್ ಜೊತೆಗೆ ನ್ಯೂಕ್ಲಿಯರ್ ಒಪ್ಪಂದ ವಿಚಾರದಲ್ಲಿ ಒತ್ತಡ ಹೇರುತ್ತಿದ್ದಾರೆ. ಇರಾನ್ ನ್ಯೂಕ್ಲಿಯರ್ ವಿಚಾರದಲ್ಲಿ ಬಗ್ಗದಿದ್ದರೆ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಇದಕ್ಕಾಗಿ ಮಧ್ಯ ಪ್ರಾಚ್ಯದ ಸೇನಾ ನೆಲೆಗಳಲ್ಲಿ ಯುದ್ಧ ವಿಮಾನಗಳನ್ನು, ಮಿಲಿಟರಿಯನ್ನು ಸಜ್ಜುಗೊಳಿಸಿದೆ. ಯಾವುದೇ ಕ್ಷಣದಲ್ಲಿ ದಾಳಿ ಆಗಬಹುದೆಂದು ಎಚ್ಚರಿಕೆ ರವಾನಿಸಿದೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm