ಬ್ರೇಕಿಂಗ್ ನ್ಯೂಸ್
24-02-26 01:21 pm HK News Desk ದೇಶ - ವಿದೇಶ
ಟೆಹ್ರಾನ್, ಫೆ.24: ಇರಾನ್ನಲ್ಲಿ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಅಮೆರಿಕ ದಾಳಿ ಭೀತಿಯಲ್ಲಿ ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ನಿಗೂಢ ಸ್ಥಳಕ್ಕೆ ತೆರಳಿ ಅಡಗಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ರಾಯಭಾರ ಕಚೇರಿ, ಭಾರತೀಯ ಪ್ರಜೆಗಳನ್ನು ಕೂಡಲೇ ದೇಶ ತೊರೆಯುವಂತೆ ಸೂಚನೆ ನೀಡಿದೆ. ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು ಲಭ್ಯವಿರುವ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ.
ಇರಾನ್ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟು ಭಾರತ ಸರ್ಕಾರ ಜ.5 ರಂದು ಇದೇ ರೀತಿಯ ಸಲಹೆಗಳನ್ನು ನೀಡಿತ್ತು. ಈಗ ಮತ್ತೆ ಅದೇ ರೀತಿಯ ವಾತಾವರಣ ಎದುರಾಗಿದ್ದು ಎಲ್ಲಾ ಭಾರತೀಯ ಮೂಲದವರು ಎಚ್ಚರಿಕೆ ವಹಿಸಬೇಕು. ಪ್ರತಿಭಟನೆಗಳು ನಡೆಯುವ ಸ್ಥಳಗಳಿಂದ ದೂರವಿರಬೇಕು, ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕೆಂದು ಸೂಚಿಸಿದೆ.
ಅಲ್ಲದೇ ಬೆಳವಣಿಗೆ ತಿಳಿಯಲು ಸ್ಥಳೀಯ ಮಾಧ್ಯಮಗಳ ಮೇಲೆ ಗಮನ ಹರಿಸಿ. ಯಾವುದೇ ಕ್ಷಣದಲ್ಲೂ ನಿಮ್ಮ ಪಾಸ್ಪೋರ್ಟ್, ಇತರ ಪ್ರಯಾಣ ದಾಖಲೆಗಳನ್ನ ಸಿದ್ಧವಾಗಿಟ್ಟುಕೊಳ್ಳಿ. ರಾಯಭಾರ ಕಚೇರಿಯಲ್ಲಿ ನೋಂದಾಯಿಸದವರು ಆನ್ಲೈನ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.
ಪ್ರತಿಭಟನೆಗಳು ನಡೆಯುತ್ತಿರುವ ಕಾರಣ, ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಅಂತಹ ಪ್ರದೇಶಗಳಲ್ಲಿ ಭಾರತೀಯರು ಸಿಲುಕಿದ್ದರೆ, ಅವರ ಪರವಾಗಿ ಭಾರತದ ಕುಟುಂಬಗಳು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಅದಕ್ಕಾಗಿ ತುರ್ತು ಸಹಾಯವಾಣಿ ಸಂಖ್ಯೆಯನ್ನ ಬಿಡುಗಡೆಗೊಳಿಸಲಾಗಿದೆ.
ತುರ್ತು ಸಂಪರ್ಕ ಸಹಾಯವಾಣಿ ಸಂಖ್ಯೆ
ಇದೇ ವೇಳೆ, ಅಮೆರಿಕ ಪ್ರತಿನಿಧಿಗಳು ಇರಾನ್ ಜೊತೆಗೆ ನ್ಯೂಕ್ಲಿಯರ್ ಒಪ್ಪಂದ ವಿಚಾರದಲ್ಲಿ ಒತ್ತಡ ಹೇರುತ್ತಿದ್ದಾರೆ. ಇರಾನ್ ನ್ಯೂಕ್ಲಿಯರ್ ವಿಚಾರದಲ್ಲಿ ಬಗ್ಗದಿದ್ದರೆ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಇದಕ್ಕಾಗಿ ಮಧ್ಯ ಪ್ರಾಚ್ಯದ ಸೇನಾ ನೆಲೆಗಳಲ್ಲಿ ಯುದ್ಧ ವಿಮಾನಗಳನ್ನು, ಮಿಲಿಟರಿಯನ್ನು ಸಜ್ಜುಗೊಳಿಸಿದೆ. ಯಾವುದೇ ಕ್ಷಣದಲ್ಲಿ ದಾಳಿ ಆಗಬಹುದೆಂದು ಎಚ್ಚರಿಕೆ ರವಾನಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm