ಬ್ರೇಕಿಂಗ್ ನ್ಯೂಸ್
25-02-26 10:10 pm HK News Desk ದೇಶ - ವಿದೇಶ
ಬೆಂಗಳೂರು, ಫೆ.25 ತಮ್ಮ ಬೇಡಿಕೆ ಈಡೇರಿಸಲು ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮತ್ತು ಇಲಾಖೆಯ ಎಲ್ಲಾ ವೃಂದ ಸಂಘಗಳು ಮುಷ್ಕರಕ್ಕೆ ಕರೆ ನೀಡಿವೆ.
ಅನಿರ್ದಿಷ್ಟ ಮುಷ್ಕರದ ಮೊದಲ ಹಂತವಾಗಿ ಮಾರ್ಚ್ 11ರಿಂದ 15ರ ವರೆಗೆ ಓಪಿಡಿ ಸೇವೆ (ಹೊರರೋಗಿಗಳ ಸೇವೆ) ಬಂದ್ ಮಾಡಲು ನಿರ್ಧರಿಸಿದ್ದು ತುರ್ತು ಸೇವೆ ಮಾತ್ರ ಇರಲಿದೆ ಎಂದು ತಿಳಿಸಿದ್ದಾರೆ. ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಸುವುದಾಗಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ ರವೀಂದ್ರನಾಛ ಎನ್ ಮೇಟಿ, ಕಾರ್ಯದರ್ಶಿ ಡಾ. ತಿಮ್ಮರಾಜು ಪಿ.ಆರ್, ಆರೋಗ್ಯ ಇಲಾಖೆ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ ಬಳ್ಳಾರಿ, ಕಾರ್ಯದರ್ಶಿ ಎಚ್ ಪುಟ್ಟರಾಜು ತಿಳಿಸಿದ್ದಾರೆ.
ಎರಡು ಹಂತದಲ್ಲಿ ಮುಷ್ಕರ
ಎರಡು ಹಂತದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಓಪಿಡಿ ಬಂದ್ ಮಾಡಿ ಮುಷ್ಕರ ನಡೆಸುವುದು, ಎರಡನೇ ಹಂತದಲ್ಲಿ ಆಸ್ಪತ್ರೆಗೆ ಗೈರಾಗುವ ಮೂಲಕ ವೈದ್ಯರು ಮುಷ್ಕರ ನಡೆಸಲಿದ್ದಾರೆ. ಮಾರ್ಚ್ 11ರಿಂದ 15ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಡಿಸ್ಪೆನ್ಸರಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಹೊರ ರೋಗಿ ಚಿಕಿತ್ಸೆ ಸ್ಥಗಿತಗೊಳಿಸಲು ವೈದ್ಯರು ತೀರ್ಮಾನಿಸಿದ್ದಾರೆ. ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಮಾರ್ಚ್ 16ರಿಂದ ಕರ್ತವ್ಯಕ್ಕೆ ಅನಿರ್ದಿಷ್ಟಾವಧಿ ವರೆಗೂ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸಲು ನಿರ್ಧಾರಿಸಲಾಗಿದೆ ಎಂದು ಸಂಘಟನೆ ಪದಾಧಿಕಾರಿಗಳು ತಿಳಿಸಿದ್ದಾರೆ.
ವೈದ್ಯರ ಸಂಘದ ಬೇಡಿಕೆಗಳು
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm