ಬ್ರೇಕಿಂಗ್ ನ್ಯೂಸ್
27-02-26 03:55 pm HK News Staffer ದೇಶ - ವಿದೇಶ
ನವದೆಹಲಿ, ಫೆ.27: ಮಹತ್ವದ ಬೆಳವಣಿಗೆಯಲ್ಲಿ ಭಾರೀ ಸಂಚಲನ ಎಬ್ಬಿಸಿದ್ದ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಕರಣದಲ್ಲಿ ಆರೋಪಿಗಳೆಂದು ಗುರುತಿಸಿದ್ದ ಎಲ್ಲ 23 ಮಂದಿಯನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ಬಗ್ಗೆ ಸಿಬಿಐ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ ಯಾವುದೇ ಬಲವಾದ ಪುರಾವೆಗಳಿಲ್ಲ ಎಂದು ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಕೇವಲ ಊಹೆಗಳ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಅಬಕಾರಿ ನೀತಿ ರೂಪಿಸುವಲ್ಲಿ ಯಾವುದೇ ಕ್ರಿಮಿನಲ್ ಪಿತೂರಿ ಅಥವಾ ದುರುದ್ದೇಶ ಸಿಬಿಐ ಆರೋಪ ಪಟ್ಟಿಯಲ್ಲಿ ಕಂಡುಬಂದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಇದರೊಂದಿಗೆ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮಾತ್ರವಲ್ಲದೆ, ಬಿಆರ್ಎಸ್ ನಾಯಕಿ ಕೆ. ಕವಿತಾ, ವಿಜಯ್ ನಾಯರ್ ಸೇರಿದಂತೆ ದೋಷಾರೋಪ ಪಟ್ಟಿಯಲ್ಲಿದ್ದ ಎಲ್ಲರಿಗೂ ಈ ಮೂಲಕ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದ್ದಲ್ಲದೆ, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನಾಯಕರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ಸಿಬಿಐ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.
ನಾನು ಭ್ರಷ್ಟನಲ್ಲ, ಅತಿದೊಡ್ಡ ಪಿತೂರಿ ; ಕೇಜ್ರಿವಾಲ್:
ತೀರ್ಪು ಹೊರಬಿದ್ದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾವುಕರಾಗಿ ಕಣ್ಣೀರಿಟ್ಟರು. "ನಾನು ಭ್ರಷ್ಟನಲ್ಲ. ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರು ಪ್ರಾಮಾಣಿಕರು (ಕಟ್ಟರ್ ಇಮಂದಾರ್) ಎಂದು ಇಂದು ನ್ಯಾಯಾಲಯವೇ ಸಾಬೀತುಪಡಿಸಿದೆ. ಇದು ಸ್ವತಂತ್ರ ಭಾರತದ ಇತಿಹಾಸದಲ್ಲೇ ನಡೆದ ಅತಿದೊಡ್ಡ ರಾಜಕೀಯ ಪಿತೂರಿ" ಎಂದು ಅವರು ಹೇಳಿದರು.
2021-22ರ ದೆಹಲಿ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿತ್ತು. ಈ ಸಂಬಂಧ ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರು ಸುದೀರ್ಘ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಸದ್ಯ ಸಿಬಿಐ ಪ್ರಕರಣದಿಂದ ಇವರು ಮುಕ್ತರಾಗಿದ್ದು ಕೇಂದ್ರ ಸರ್ಕಾರದ ನಡೆ ಚರ್ಚೆಗೀಡು ಮಾಡಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm