ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಸಂಬಂಧದಲ್ಲಿ ಬಿರುಕು, ಲಂಡನ್ ಉದ್ಯಮಿ ಪುತ್ರಿ ಸಂಗೀತಾ ವಿಚ್ಚೇದನಕ್ಕೆ ಅರ್ಜಿ, ವಿಜಯ್ ಅವರೇ ಮುಂದೆ ಸಿಎಂ ಆಗುತ್ತಾರೆಂದ ಜ್ಯೋತಿಷಿ ! 

28-02-26 01:08 pm       HK News Desk   ದೇಶ - ವಿದೇಶ

ನಟ ಮತ್ತು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ನಟನ ಜೊತೆಗಿನ 27 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಇತ್ತೀಚೆಗೆ ವಿಜಯ್, ತ್ರಿಶಾ ಎಂಬ ನಟಿಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ವಿಜಯ್- ಸಂಗೀತಾ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ.‌  

ಚೆನ್ನೈ, ಫೆ.28: ನಟ ಮತ್ತು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ನಟನ ಜೊತೆಗಿನ 27 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಇತ್ತೀಚೆಗೆ ವಿಜಯ್, ತ್ರಿಶಾ ಎಂಬ ನಟಿಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ವಿಜಯ್- ಸಂಗೀತಾ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ.‌  

1999ರ ಆಗಸ್ಟ್‌ನಲ್ಲಿ ವಿವಾಹವಾಗಿದ್ದ ವಿಜಯ್ - ಸಂಗೀತಾ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಶಾ ಎಂಬ ಇಬ್ಬರು ಮಕ್ಕಳಿದ್ದಾರೆ.  ವಿಜಯ್‌ ಅವರು ನಟಿಯೊಂದಿಗಿನ ಸಂಬಂಧವನ್ನು ನಿಲ್ಲಿಸುತ್ತೇನೆ ಅಂತ ಭರವಸೆ ಕೊಟ್ಟಿದ್ದರು. ಆದರೆ, ಅದು ಹಾಗೆಯೇ ಮುಂದುವರಿದಿದೆ ಎಂದು ಅರ್ಜಿಯಲ್ಲಿ ಸಂಗೀತಾ ಆಕ್ಷೇಪಿಸಿದ್ದಾರೆ. 

ಪತಿ ನನ್ನನ್ನು ಸಾಮಾಜಿಕ ಮತ್ತು ವೃತ್ತಿಪರ ಜೀವನದಿಂದ ದೂರ ಇಟ್ಟಿದ್ದಾರೆ. ವಿದೇಶ ಪ್ರವಾಸ ಮಾಡುವುದು ಮತ್ತು ಆ ನಟಿಯೊಂದಿಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸಿದ್ದಾರೆ. ಈ ಪ್ರವಾಸದ ಫೋಟೊಗಳನ್ನು ನಟಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡುತ್ತಿದ್ದಾರೆ. ಇದರಿಂದ ನನಗೆ ಮತ್ತು ಮಕ್ಕಳಿಗೆ ಅವಮಾನವಾಗಿದೆ ಎಂದು ವಿಜಯ್‌ ಪತ್ನಿ ಆರೋಪಿಸಿದ್ದಾರೆ. 

ಲಂಡನ್ ಮೂಲದ ತಮಿಳುನಾಡು ಮೂಲದ ಉದ್ಯಮಿಯ ಪುತ್ರಿಯಾಗಿರುವ ಸಂಗೀತಾ ಅವರನ್ನು 1999ರ ಆಗಸ್ಟ್ 25ರಂದು ವಿಜಯ್‌ ವಿವಾಹವಾಗಿದ್ದರು. ಇದಕ್ಕೂ ಮೊದಲು ಸಂಗೀತಾ, ವಿಜಯ್‌ ಅವರ ಕಟ್ಟಾ ಅಭಿಯಾನಿಯಾಗಿದ್ದರು. ವಿಜಯ್ ಸಿನಿಮಾಗಳಿಂದ ಪ್ರಭಾವಿತರಾಗಿ ಬೆನ್ನು ಬಿದ್ದು ಬಳಿಕ ಮದುವೆಯಾಗಿದ್ದರು. ಸಂಗೀತಾ ಹಿಂದುವಾಗಿದ್ದು ವಿಜಯ್ ಕ್ರಿಸ್ತಿಯನ್ ಸಂಪ್ರದಾಯದವರಾಗಿದ್ದು ಇಬ್ಬರ ವಿವಾಹವು ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆದಿತ್ತು. ಮದುವೆ ಬಳಿಕ ಸಂಗೀತಾ ಚೆನ್ನೈನಲ್ಲಿಯೇ ನೆಲೆಸಿದ್ದರು. 

ಹಲವು ಸಮಯದ ವಿರಸದ ಬಳಿಕ ಸಂಗೀತಾ ಕಳೆದ ಡಿ.5ರಂದು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು ತಡವಾಗಿ ಸುದ್ದಿಯಾಗಿದೆ. ಆದರೆ ಈ ಬಗ್ಗೆ ವಿಜಯ್ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಇದೇ ವೇಳೆ, ಜ್ಯೋತಿಷಿ ಪ್ರಶಾಂತ್ ಕಿಣಿಯವರು ಈಗಲ್ಲದಿದ್ದರೂ ಮುಂದಿನ ಬಾರಿಯಾದರೂ ವಿಜಯ್ ಅವರು ತಮಿಳುನಾಡು ಮುಖ್ಯಮಂತ್ರಿ ಆಗಲಿದ್ದಾರೆ. 2030ರ ಬಳಿಕ ದೊಡ್ಡ ಸಕ್ಸಸ್ ಸಿಗಲಿದೆ ಎಂದಿದ್ದಾರೆ.‌ ಆದರೆ ಚುನಾವಣೆ ಹೊತ್ತಲ್ಲೇ ವಿಚ್ಚೇದನ ಸುದ್ದಿಯಾಗಿದ್ದು ಯಾವ ರೀತಿಯ ಪರಿಣಾಮ ಬೀರುತ್ತೆ ನೋಡಬೇಕು.