ಬ್ರೇಕಿಂಗ್ ನ್ಯೂಸ್
28-02-26 01:08 pm HK News Desk ದೇಶ - ವಿದೇಶ
ಚೆನ್ನೈ, ಫೆ.28: ನಟ ಮತ್ತು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ನಟನ ಜೊತೆಗಿನ 27 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಇತ್ತೀಚೆಗೆ ವಿಜಯ್, ತ್ರಿಶಾ ಎಂಬ ನಟಿಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ವಿಜಯ್- ಸಂಗೀತಾ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ.
1999ರ ಆಗಸ್ಟ್ನಲ್ಲಿ ವಿವಾಹವಾಗಿದ್ದ ವಿಜಯ್ - ಸಂಗೀತಾ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ವಿಜಯ್ ಅವರು ನಟಿಯೊಂದಿಗಿನ ಸಂಬಂಧವನ್ನು ನಿಲ್ಲಿಸುತ್ತೇನೆ ಅಂತ ಭರವಸೆ ಕೊಟ್ಟಿದ್ದರು. ಆದರೆ, ಅದು ಹಾಗೆಯೇ ಮುಂದುವರಿದಿದೆ ಎಂದು ಅರ್ಜಿಯಲ್ಲಿ ಸಂಗೀತಾ ಆಕ್ಷೇಪಿಸಿದ್ದಾರೆ.
ಪತಿ ನನ್ನನ್ನು ಸಾಮಾಜಿಕ ಮತ್ತು ವೃತ್ತಿಪರ ಜೀವನದಿಂದ ದೂರ ಇಟ್ಟಿದ್ದಾರೆ. ವಿದೇಶ ಪ್ರವಾಸ ಮಾಡುವುದು ಮತ್ತು ಆ ನಟಿಯೊಂದಿಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸಿದ್ದಾರೆ. ಈ ಪ್ರವಾಸದ ಫೋಟೊಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದರಿಂದ ನನಗೆ ಮತ್ತು ಮಕ್ಕಳಿಗೆ ಅವಮಾನವಾಗಿದೆ ಎಂದು ವಿಜಯ್ ಪತ್ನಿ ಆರೋಪಿಸಿದ್ದಾರೆ.

ಲಂಡನ್ ಮೂಲದ ತಮಿಳುನಾಡು ಮೂಲದ ಉದ್ಯಮಿಯ ಪುತ್ರಿಯಾಗಿರುವ ಸಂಗೀತಾ ಅವರನ್ನು 1999ರ ಆಗಸ್ಟ್ 25ರಂದು ವಿಜಯ್ ವಿವಾಹವಾಗಿದ್ದರು. ಇದಕ್ಕೂ ಮೊದಲು ಸಂಗೀತಾ, ವಿಜಯ್ ಅವರ ಕಟ್ಟಾ ಅಭಿಯಾನಿಯಾಗಿದ್ದರು. ವಿಜಯ್ ಸಿನಿಮಾಗಳಿಂದ ಪ್ರಭಾವಿತರಾಗಿ ಬೆನ್ನು ಬಿದ್ದು ಬಳಿಕ ಮದುವೆಯಾಗಿದ್ದರು. ಸಂಗೀತಾ ಹಿಂದುವಾಗಿದ್ದು ವಿಜಯ್ ಕ್ರಿಸ್ತಿಯನ್ ಸಂಪ್ರದಾಯದವರಾಗಿದ್ದು ಇಬ್ಬರ ವಿವಾಹವು ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆದಿತ್ತು. ಮದುವೆ ಬಳಿಕ ಸಂಗೀತಾ ಚೆನ್ನೈನಲ್ಲಿಯೇ ನೆಲೆಸಿದ್ದರು.
ಹಲವು ಸಮಯದ ವಿರಸದ ಬಳಿಕ ಸಂಗೀತಾ ಕಳೆದ ಡಿ.5ರಂದು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು ತಡವಾಗಿ ಸುದ್ದಿಯಾಗಿದೆ. ಆದರೆ ಈ ಬಗ್ಗೆ ವಿಜಯ್ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಇದೇ ವೇಳೆ, ಜ್ಯೋತಿಷಿ ಪ್ರಶಾಂತ್ ಕಿಣಿಯವರು ಈಗಲ್ಲದಿದ್ದರೂ ಮುಂದಿನ ಬಾರಿಯಾದರೂ ವಿಜಯ್ ಅವರು ತಮಿಳುನಾಡು ಮುಖ್ಯಮಂತ್ರಿ ಆಗಲಿದ್ದಾರೆ. 2030ರ ಬಳಿಕ ದೊಡ್ಡ ಸಕ್ಸಸ್ ಸಿಗಲಿದೆ ಎಂದಿದ್ದಾರೆ. ಆದರೆ ಚುನಾವಣೆ ಹೊತ್ತಲ್ಲೇ ವಿಚ್ಚೇದನ ಸುದ್ದಿಯಾಗಿದ್ದು ಯಾವ ರೀತಿಯ ಪರಿಣಾಮ ಬೀರುತ್ತೆ ನೋಡಬೇಕು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm